AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

Kangana Ranaut | Emergency Movie: ‘ಎಮರ್ಜೆನ್ಸಿ’ ಸಿನಿಮಾ ನಿರ್ಮಾಣ ಮಾಡುವಲ್ಲಿ ಕಂಗನಾ ರಣಾವತ್​ ಸಾಕಷ್ಟು ಕಷ್ಟಪಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ಅವರು ಈ ಚಿತ್ರದ ಶೂಟಿಂಗ್​ ಮುಗಿಸಿದ್ದಾರೆ.

Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​
ಕಂಗನಾ ರಣಾವತ್
ಮದನ್​ ಕುಮಾರ್​
|

Updated on:Jan 21, 2023 | 4:35 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರದ್ದು ಡಿಫರೆಂಟ್​ ವ್ಯಕ್ತಿತ್ವ. ಬಾಲಿವುಡ್​ನ ಇತರೆ ಹೀರೋಯಿನ್​ಗಳ ರೀತಿ ಕೇವಲ ಹೀರೋ ಜೊತೆ ಮರ ಸುತ್ತುವ ಪಾತ್ರಕ್ಕೆ ಅವರು ಸೀಮಿತವಾಗಿಲ್ಲ. ಸೋಲು-ಗೆಲುವು ಏನೇ ಇದ್ದರೂ ತಮಗೆ ಅನಿಸಿದ್ದನ್ನೇ ದಿಟ್ಟತನದಿಂದ ಮಾಡುವುದು ಕಂಗನಾ ರಣಾವತ್​ ಸ್ವಭಾವ. ಈಗ ಅವರು ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮಾಡುತ್ತಿದ್ದಾರೆ. ಈ ಚಿತ್ರದ ಮೇಲೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮುಖ್ಯ ಪಾತ್ರ ನಿಭಾಯಿಸುವುದರ ಜೊತೆಗೆ ನಿರ್ದೇಶನ ಮತ್ತು ನಿರ್ಮಾಣದ ಹೊಣೆಯನ್ನೂ ಅವರು ಹೊತ್ತುಕೊಂಡಿದ್ದಾರೆ. ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ (Indira Gandhi) ಕುರಿತು ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಳಿಸಲು ಕಂಗನಾ ರಣಾವತ್​ ಅವರು ತಮ್ಮ ಆಸ್ತಿ ಅಡವಿಟ್ಟಿದ್ದಾರೆ!

ಕಂಗನಾ ರಣಾವತ್​ ನಟಿಸಿದ್ದ ‘ಧಾಕಡ್​’ ಸಿನಿಮಾ ಕಳೆದ ವರ್ಷ ಹೀನಾಯವಾಗಿ ಸೋತಿತು. ಆದರೂ ಅವರು ಧೃತಿಗೆಟ್ಟಿಲ್ಲ. ‘ಎಮರ್ಜೆನ್ಸಿ’ ಸಿನಿಮಾದ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ಕೆಲಸ ಮುಂದುವರಿಸಿದ್ದಾರೆ. ಈ ಸಿನಿಮಾವನ್ನು ನಿರ್ಮಾಣ ಮಾಡುವಲ್ಲಿ ಅವರು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ಸಿನಿಮಾದ ಶೂಟಿಂಗ್​ ಮುಗಿಸಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: ‘ಸಿನಿಮಾ ಅಂದ್ರೆ ಇದು’; ‘ಕಾಂತಾರ’ ನೋಡಿ ಹ್ಯಾಂಗೋವರ್​ಗೆ ಹೋದ ನಟಿ ಕಂಗನಾ ರಣಾವತ್  

‘ಎಮರ್ಜೆನ್ಸಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾದ ಖುಷಿಯಲ್ಲಿ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರ ಹಂಚಿಕೊಂಡಿದ್ದಾರೆ. ಶೂಟಿಂಗ್​ ವೇಳೆ ಡೆಂಗ್ಯೂ ಬಂದಿದ್ದರಿಂದ ತುಂಬ ಕಷ್ಟ ಆಗಿತ್ತು ಎಂಬುದನ್ನು ಕೂಡ ಅವರ ತಿಳಿಸಿದ್ದಾರೆ. ಎಷ್ಟೇ ಅಡೆತಡೆಗಳು ಬಂದರೂ ಕೂಡ ಅದನ್ನೆಲ್ಲ ಧೈರ್ಯವಾಗಿ ಎದುರಿಸಿ ಅವರು ಮುನ್ನುಗ್ಗುತ್ತಿದ್ದಾರೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ಬಿಜೆಪಿ ಸೇರ್ಪಡೆ ಆಗ್ತಾರಾ? ರಾಜಕೀಯದ ಆಸಕ್ತಿ ಬಗ್ಗೆ ಬಾಯ್ಬಿಟ್ಟ ನಟಿ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ‘ಎಮರ್ಜೆನ್ಸಿ’ ಸಿನಿಮಾ ತಯಾರಾಗುತ್ತಿದೆ. ಕೆಲವು ತಿಂಗಳ ಹಿಂದೆ ಈ ಚಿತ್ರದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ಕಂಗನಾ ರಣಾವತ್​ ಅವರ ಲುಕ್​ ನೋಡಿ ಎಲ್ಲರಿಗೂ ಅಚ್ಚರಿ ಆಗಿತ್ತು. ಪಕ್ಕಾ ಇಂದಿರಾ ಗಾಂಧಿ ರೀತಿ ಕಾಣುವಂತೆ ಕಂಗನಾಗೆ ಮೇಕಪ್​ ಮಾಡಲಾಗಿದೆ. ಆದಷ್ಟು ಬೇಗ ಈ ಚಿತ್ರ ಬಿಡುಗಡೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ ಎಂಬುದನ್ನು ಅಭಿಮಾನಿಗಳಿಗೆ ತಿಳಿಸಲು ಕೆಲವು ಮೇಕಿಂಗ್​ ಸ್ಟಿಲ್​ಗಳನ್ನು ಕಂಗನಾ ರಣಾವತ್​ ಅವರು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶ್ರೇಯಸ್​ ತಲ್ಪಡೆ, ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಸತೀಶ್​ ಕೌಶಿಕ್​, ಮಹಿಮಾ ಚೌಧರಿ ಮುಂತಾದವರು ನಟಿಸುತ್ತಿದ್ದಾರೆ. 1975ರ ಕಾಲಘಟದ ನೈಜ ಘಟನೆಗಳನ್ನು ಆಧರಿಸಿ ‘ಎಮರ್ಜೆನ್ಸಿ’ ಚಿತ್ರ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:10 pm, Sat, 21 January 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು