AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

Kangana Ranaut: ಕರಣ್​ ಜೋಹರ್​ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​
ಕಂಗನಾ ರಣಾವತ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jul 31, 2023 | 10:50 PM

Share

ನಟಿ ಕಂಗನಾ ರಣಾವತ್​ ಅವರು ಬಾಲಿವುಡ್​ನ (Bollywood) ಅನೇಕರ ಜೊತೆ ವಿರೋಧ ಕಟ್ಟಿಕೊಂಡಿದ್ದಾರೆ. ಅದರಲ್ಲೂ ಕರಣ್​ ಜೋಹರ್ ಅವರನ್ನು ಕಂಡರೆ ಕಂಗನಾ ಉರಿದು ಬೀಳುತ್ತಾರೆ. ಈಗಾಗಲೇ ಅನೇಕ ಸಂದರ್ಭಗಳಲ್ಲಿ ಅವರು ಕರಣ್​ ಜೋಹರ್​ (Karan Johar) ವಿರುದ್ಧ ಕಿಡಿಕಾರಿದ್ದಾಗಿದೆ. ಬಾಲಿವುಡ್​ನಲ್ಲಿ ನೆಪೋಟಿಸಂ ಇರುವುದಕ್ಕೆ ಕರಣ್​ ಜೋಹರ್​ ಅವರೇ ಪ್ರಮುಖ ಕಾರಣ ಎಂಬುದು ಕಂಗನಾ ರಣಾವತ್​ ಅವರ ವಾದ. ಈಗ ಅದಕ್ಕಿಂತಲೂ ಗಂಭೀರವಾದ ಆರೋಪವೊಂದನ್ನು ಕಂಗನಾ ರಣಾವತ್​ (Kangana Ranaut) ಮಾಡಿದ್ದಾರೆ. ಕರಣ್​ ಜೋಹರ್​ ಅವರು ಹಣ ಕೊಟ್ಟು ತಮಗೆ ಬೇಕಾದ ರೀತಿಯಲ್ಲಿ ಅಭಿಪ್ರಾಯವನ್ನು ಜನರ ಮೇಲೆ ಹೇರುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಅದಕ್ಕೆ ಸಾಕ್ಷಿ ನೀಡುವಂತಹ ಒಂದೆರಡು ವಿಡಿಯೋಗಳನ್ನೂ ಅವರು ಸೋಶಿಯಲ್​ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಂದು ಸಿನಿಮಾ ಚೆನ್ನಾಗಿ ಓಡಿಲ್ಲದ್ದಿದ್ದರೂ ಅದನ್ನು ಪಿಆರ್​ ಮೂಲಕ ನಾನು ಸೂಪರ್​ ಹಿಟ್​ ಅಂತ ಹೇಳಿಕೊಳ್ಳಬಲ್ಲೆ’ ಎಂದು ಕರಣ್​ ಜೋಹರ್​ ಅವರು ಹೇಳಿದ್ದ ವಿಡಿಯೋವನ್ನು ಕಂಗನಾ ರಣಾವತ್​ ಈಗ ಶೇರ್​ ಮಾಡಿಕೊಂಡಿದ್ದಾರೆ. ‘ದುಡ್ಡು ಕೊಟ್ಟು ನಾನು ಏನು ಬೇಕಾದರೂ ಬರೆಸಿಕೊಳ್ಳಬಲ್ಲೆ. ನಾನು ಹೇಳಿದ ಸುದ್ದಿಯೇ ಪ್ರಕಟ ಆಗುತ್ತದೆ’ ಎಂಬರ್ಥದಲ್ಲಿ ಕರಣ್​ ಜೋಹರ್​ ಮಾತನಾಡಿರುವ ಇನ್ನೊಂದು ವಿಡಿಯೋವನ್ನೂ ಕಂಗನಾ ಹಂಚಿಕೊಂಡಿದ್ದಾರೆ. ಇವುಗಳಿಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕರಣ್​ ಜೋಹರ್​ ಅವರು ಹಣ ಕೊಟ್ಟು ಕೇವಲ ತಮ್ಮ ಸಿನಿಮಾವನ್ನು ಹಿಟ್​ ಅಂತ ಕರೆಸಿಕೊಳ್ಳುತ್ತಾರಾ ಅಥವಾ ಬೇರೆಯವರ ಹಿಟ್​ ಸಿನಿಮಾವನ್ನು ಕೂಡ ಫ್ಲಾಪ್​ ಅಂತ ಹೇಳಿಸುತ್ತಾರಾ’ ಎಂದು ಕಂಗನಾ ರಣಾವತ್​ ಪ್ರಶ್ನೆ ಮಾಡಿದ್ದಾರೆ. ಕರಣ್​ ಜೋಹರ್​ ನಿರ್ದೇಶನ ಮಾಡಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ಇದನ್ನೂ ಓದಿ: Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​

ಕಂಗನಾ ರಣಾವತ್​ ಅವರ ಈ ಪೋಸ್ಟ್​ಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ಯಾವಾಗಲೂ ಬೇರೆಯವರ ಬಗ್ಗೆ ಯಾಕೆ ಮಾತನಾಡುತ್ತೀರಿ. ನಿಮ್ಮ ಕೆಲಸದ ಮೇಲೆ ಮಾತ್ರ ಫೋಕಸ್​ ಮಾಡಿ. ನಿಮ್ಮ ಸಿನಿಮಾಗಳು ಕೂಡ ಫ್ಲಾಪ್​ ಆಗಿವೆ ತಾನೇ? ಈ ರೀತಿ ಪೋಸ್ಟ್​ ಮಾಡುವುದರಿಂದ ನೀವು ಕರಣ್​ ಜೋಹರ್​ ಅವರ ಸಿನಿಮಾವನ್ನು ಪರೋಕ್ಷವಾಗಿ ಪ್ರಚಾರ ಮಾಡುತ್ತಿದ್ದೀರಿ’ ಎಂದು ಜನರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್