AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

Kangana Ranaut: ಕರಣ್​ ಜೋಹರ್​ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​
ಕಂಗನಾ ರಣಾವತ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jul 31, 2023 | 10:50 PM

Share

ನಟಿ ಕಂಗನಾ ರಣಾವತ್​ ಅವರು ಬಾಲಿವುಡ್​ನ (Bollywood) ಅನೇಕರ ಜೊತೆ ವಿರೋಧ ಕಟ್ಟಿಕೊಂಡಿದ್ದಾರೆ. ಅದರಲ್ಲೂ ಕರಣ್​ ಜೋಹರ್ ಅವರನ್ನು ಕಂಡರೆ ಕಂಗನಾ ಉರಿದು ಬೀಳುತ್ತಾರೆ. ಈಗಾಗಲೇ ಅನೇಕ ಸಂದರ್ಭಗಳಲ್ಲಿ ಅವರು ಕರಣ್​ ಜೋಹರ್​ (Karan Johar) ವಿರುದ್ಧ ಕಿಡಿಕಾರಿದ್ದಾಗಿದೆ. ಬಾಲಿವುಡ್​ನಲ್ಲಿ ನೆಪೋಟಿಸಂ ಇರುವುದಕ್ಕೆ ಕರಣ್​ ಜೋಹರ್​ ಅವರೇ ಪ್ರಮುಖ ಕಾರಣ ಎಂಬುದು ಕಂಗನಾ ರಣಾವತ್​ ಅವರ ವಾದ. ಈಗ ಅದಕ್ಕಿಂತಲೂ ಗಂಭೀರವಾದ ಆರೋಪವೊಂದನ್ನು ಕಂಗನಾ ರಣಾವತ್​ (Kangana Ranaut) ಮಾಡಿದ್ದಾರೆ. ಕರಣ್​ ಜೋಹರ್​ ಅವರು ಹಣ ಕೊಟ್ಟು ತಮಗೆ ಬೇಕಾದ ರೀತಿಯಲ್ಲಿ ಅಭಿಪ್ರಾಯವನ್ನು ಜನರ ಮೇಲೆ ಹೇರುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಅದಕ್ಕೆ ಸಾಕ್ಷಿ ನೀಡುವಂತಹ ಒಂದೆರಡು ವಿಡಿಯೋಗಳನ್ನೂ ಅವರು ಸೋಶಿಯಲ್​ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಂದು ಸಿನಿಮಾ ಚೆನ್ನಾಗಿ ಓಡಿಲ್ಲದ್ದಿದ್ದರೂ ಅದನ್ನು ಪಿಆರ್​ ಮೂಲಕ ನಾನು ಸೂಪರ್​ ಹಿಟ್​ ಅಂತ ಹೇಳಿಕೊಳ್ಳಬಲ್ಲೆ’ ಎಂದು ಕರಣ್​ ಜೋಹರ್​ ಅವರು ಹೇಳಿದ್ದ ವಿಡಿಯೋವನ್ನು ಕಂಗನಾ ರಣಾವತ್​ ಈಗ ಶೇರ್​ ಮಾಡಿಕೊಂಡಿದ್ದಾರೆ. ‘ದುಡ್ಡು ಕೊಟ್ಟು ನಾನು ಏನು ಬೇಕಾದರೂ ಬರೆಸಿಕೊಳ್ಳಬಲ್ಲೆ. ನಾನು ಹೇಳಿದ ಸುದ್ದಿಯೇ ಪ್ರಕಟ ಆಗುತ್ತದೆ’ ಎಂಬರ್ಥದಲ್ಲಿ ಕರಣ್​ ಜೋಹರ್​ ಮಾತನಾಡಿರುವ ಇನ್ನೊಂದು ವಿಡಿಯೋವನ್ನೂ ಕಂಗನಾ ಹಂಚಿಕೊಂಡಿದ್ದಾರೆ. ಇವುಗಳಿಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕರಣ್​ ಜೋಹರ್​ ಅವರು ಹಣ ಕೊಟ್ಟು ಕೇವಲ ತಮ್ಮ ಸಿನಿಮಾವನ್ನು ಹಿಟ್​ ಅಂತ ಕರೆಸಿಕೊಳ್ಳುತ್ತಾರಾ ಅಥವಾ ಬೇರೆಯವರ ಹಿಟ್​ ಸಿನಿಮಾವನ್ನು ಕೂಡ ಫ್ಲಾಪ್​ ಅಂತ ಹೇಳಿಸುತ್ತಾರಾ’ ಎಂದು ಕಂಗನಾ ರಣಾವತ್​ ಪ್ರಶ್ನೆ ಮಾಡಿದ್ದಾರೆ. ಕರಣ್​ ಜೋಹರ್​ ನಿರ್ದೇಶನ ಮಾಡಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ಇದನ್ನೂ ಓದಿ: Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​

ಕಂಗನಾ ರಣಾವತ್​ ಅವರ ಈ ಪೋಸ್ಟ್​ಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ಯಾವಾಗಲೂ ಬೇರೆಯವರ ಬಗ್ಗೆ ಯಾಕೆ ಮಾತನಾಡುತ್ತೀರಿ. ನಿಮ್ಮ ಕೆಲಸದ ಮೇಲೆ ಮಾತ್ರ ಫೋಕಸ್​ ಮಾಡಿ. ನಿಮ್ಮ ಸಿನಿಮಾಗಳು ಕೂಡ ಫ್ಲಾಪ್​ ಆಗಿವೆ ತಾನೇ? ಈ ರೀತಿ ಪೋಸ್ಟ್​ ಮಾಡುವುದರಿಂದ ನೀವು ಕರಣ್​ ಜೋಹರ್​ ಅವರ ಸಿನಿಮಾವನ್ನು ಪರೋಕ್ಷವಾಗಿ ಪ್ರಚಾರ ಮಾಡುತ್ತಿದ್ದೀರಿ’ ಎಂದು ಜನರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್