AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

Kangana Ranaut: ಕರಣ್​ ಜೋಹರ್​ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​
ಕಂಗನಾ ರಣಾವತ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jul 31, 2023 | 10:50 PM

Share

ನಟಿ ಕಂಗನಾ ರಣಾವತ್​ ಅವರು ಬಾಲಿವುಡ್​ನ (Bollywood) ಅನೇಕರ ಜೊತೆ ವಿರೋಧ ಕಟ್ಟಿಕೊಂಡಿದ್ದಾರೆ. ಅದರಲ್ಲೂ ಕರಣ್​ ಜೋಹರ್ ಅವರನ್ನು ಕಂಡರೆ ಕಂಗನಾ ಉರಿದು ಬೀಳುತ್ತಾರೆ. ಈಗಾಗಲೇ ಅನೇಕ ಸಂದರ್ಭಗಳಲ್ಲಿ ಅವರು ಕರಣ್​ ಜೋಹರ್​ (Karan Johar) ವಿರುದ್ಧ ಕಿಡಿಕಾರಿದ್ದಾಗಿದೆ. ಬಾಲಿವುಡ್​ನಲ್ಲಿ ನೆಪೋಟಿಸಂ ಇರುವುದಕ್ಕೆ ಕರಣ್​ ಜೋಹರ್​ ಅವರೇ ಪ್ರಮುಖ ಕಾರಣ ಎಂಬುದು ಕಂಗನಾ ರಣಾವತ್​ ಅವರ ವಾದ. ಈಗ ಅದಕ್ಕಿಂತಲೂ ಗಂಭೀರವಾದ ಆರೋಪವೊಂದನ್ನು ಕಂಗನಾ ರಣಾವತ್​ (Kangana Ranaut) ಮಾಡಿದ್ದಾರೆ. ಕರಣ್​ ಜೋಹರ್​ ಅವರು ಹಣ ಕೊಟ್ಟು ತಮಗೆ ಬೇಕಾದ ರೀತಿಯಲ್ಲಿ ಅಭಿಪ್ರಾಯವನ್ನು ಜನರ ಮೇಲೆ ಹೇರುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಅದಕ್ಕೆ ಸಾಕ್ಷಿ ನೀಡುವಂತಹ ಒಂದೆರಡು ವಿಡಿಯೋಗಳನ್ನೂ ಅವರು ಸೋಶಿಯಲ್​ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಂದು ಸಿನಿಮಾ ಚೆನ್ನಾಗಿ ಓಡಿಲ್ಲದ್ದಿದ್ದರೂ ಅದನ್ನು ಪಿಆರ್​ ಮೂಲಕ ನಾನು ಸೂಪರ್​ ಹಿಟ್​ ಅಂತ ಹೇಳಿಕೊಳ್ಳಬಲ್ಲೆ’ ಎಂದು ಕರಣ್​ ಜೋಹರ್​ ಅವರು ಹೇಳಿದ್ದ ವಿಡಿಯೋವನ್ನು ಕಂಗನಾ ರಣಾವತ್​ ಈಗ ಶೇರ್​ ಮಾಡಿಕೊಂಡಿದ್ದಾರೆ. ‘ದುಡ್ಡು ಕೊಟ್ಟು ನಾನು ಏನು ಬೇಕಾದರೂ ಬರೆಸಿಕೊಳ್ಳಬಲ್ಲೆ. ನಾನು ಹೇಳಿದ ಸುದ್ದಿಯೇ ಪ್ರಕಟ ಆಗುತ್ತದೆ’ ಎಂಬರ್ಥದಲ್ಲಿ ಕರಣ್​ ಜೋಹರ್​ ಮಾತನಾಡಿರುವ ಇನ್ನೊಂದು ವಿಡಿಯೋವನ್ನೂ ಕಂಗನಾ ಹಂಚಿಕೊಂಡಿದ್ದಾರೆ. ಇವುಗಳಿಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕರಣ್​ ಜೋಹರ್​ ಅವರು ಹಣ ಕೊಟ್ಟು ಕೇವಲ ತಮ್ಮ ಸಿನಿಮಾವನ್ನು ಹಿಟ್​ ಅಂತ ಕರೆಸಿಕೊಳ್ಳುತ್ತಾರಾ ಅಥವಾ ಬೇರೆಯವರ ಹಿಟ್​ ಸಿನಿಮಾವನ್ನು ಕೂಡ ಫ್ಲಾಪ್​ ಅಂತ ಹೇಳಿಸುತ್ತಾರಾ’ ಎಂದು ಕಂಗನಾ ರಣಾವತ್​ ಪ್ರಶ್ನೆ ಮಾಡಿದ್ದಾರೆ. ಕರಣ್​ ಜೋಹರ್​ ನಿರ್ದೇಶನ ಮಾಡಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಈ ಸಂದರ್ಭದಲ್ಲೇ ಕಂಗನಾ ಅವರು ಕರಣ್​ ಜೋಹರ್​ ವಿರುದ್ಧ ಗುಡುಗುತ್ತಿದ್ದಾರೆ.

ಇದನ್ನೂ ಓದಿ: Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​

ಕಂಗನಾ ರಣಾವತ್​ ಅವರ ಈ ಪೋಸ್ಟ್​ಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ಯಾವಾಗಲೂ ಬೇರೆಯವರ ಬಗ್ಗೆ ಯಾಕೆ ಮಾತನಾಡುತ್ತೀರಿ. ನಿಮ್ಮ ಕೆಲಸದ ಮೇಲೆ ಮಾತ್ರ ಫೋಕಸ್​ ಮಾಡಿ. ನಿಮ್ಮ ಸಿನಿಮಾಗಳು ಕೂಡ ಫ್ಲಾಪ್​ ಆಗಿವೆ ತಾನೇ? ಈ ರೀತಿ ಪೋಸ್ಟ್​ ಮಾಡುವುದರಿಂದ ನೀವು ಕರಣ್​ ಜೋಹರ್​ ಅವರ ಸಿನಿಮಾವನ್ನು ಪರೋಕ್ಷವಾಗಿ ಪ್ರಚಾರ ಮಾಡುತ್ತಿದ್ದೀರಿ’ ಎಂದು ಜನರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ