AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯ್ತು ಕಂಗನಾ ಮನಸ್ಸು, ಹುಸಿ ಆಯ್ತು ನಿರೀಕ್ಷೆ; ಆಲಿಯಾ ಸಿನಿಮಾಗೆ ಕಿರಿಕ್​ ಕ್ವೀನ್​ ಮೆಚ್ಚುಗೆ​

ಆಲಿಯಾ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಕಂಗನಾ ರಣಾವತ್​ ಬೆರಗಾಗಿದ್ದಾರೆ. ಹಾಗಾಗಿ ಅವರು ಮನಸಾರೆ ಹೊಗಳಿದ್ದಾರೆ.

ಬದಲಾಯ್ತು ಕಂಗನಾ ಮನಸ್ಸು, ಹುಸಿ ಆಯ್ತು ನಿರೀಕ್ಷೆ; ಆಲಿಯಾ ಸಿನಿಮಾಗೆ ಕಿರಿಕ್​ ಕ್ವೀನ್​ ಮೆಚ್ಚುಗೆ​
ಕಂಗನಾ ರಣಾವತ್, ಆಲಿಯಾ ಭಟ್
TV9 Web
| Edited By: |

Updated on: Feb 27, 2022 | 8:01 AM

Share

ನಟಿ ಕಂಗನಾ ರಣಾವತ್​ (Kangana Ranaut) ಅವರ ಗುಣ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತು. ಅನೇಕ ವಿಚಾರಗಳಲ್ಲಿ ಅವರು ಮೂಗು ತೂರಿಸುತ್ತಾರೆ. ತುಂಬ ಕಟುವಾದ ಮಾತುಗಳಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಅದೇ ಕಾರಣಕ್ಕಾಗಿ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದುಂಟು. ಬಾಲಿವುಡ್​ನಲ್ಲಿ ಒಂದು ವರ್ಗದ ಫಿಲ್ಮ್​ ಮೇಕರ್​ಗಳನ್ನು ಅವರು ಖಾರವಾಗಿ ಟೀಕಿಸುತ್ತಾರೆ. ಆಲಿಯಾ ಭಟ್ (Alia Bhatt)​, ಕರಣ್​ ಜೋಹರ್​, ಮಹೇಶ್​ ಭಟ್​ ಮುಂತಾದವರನ್ನು ಕಂಡರೆ ಆಲಿಯಾ ಉರಿದುರಿದು ಬೀಳುತ್ತಾರೆ. ಆಲಿಯಾ ಭಟ್​ ಅಭಿನಯದ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನ ಕಂಗನಾ ಅಪಶಕುನ ನುಡಿದಿದ್ದರು. ‘ಈ ಸಿನಿಮಾದಿಂದ ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಸುಟ್ಟು ಹೋಗಲಿದೆ’ ಎಂದು ಭವಿಷ್ಯ ನಡಿದಿದ್ದರು. ಆದರೆ ಅವರ ಮಾತು ಸುಳ್ಳಾಗಿದೆ. ಫೆ.25ರಂದು ಬಿಡುಗಡೆ ಆಗಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಜನಮೆಚ್ಚುಗೆ ಗಳಿಸಿದೆ. ಮೊದಲ ದಿನವೇ 10 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಒಳ್ಳೆಯ ಓಪನಿಂಗ್​ ಪಡೆದುಕೊಂಡಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕಂಗನಾ ರಣಾವತ್​ ಕೂಡ ಚಪ್ಪಾಳೆ ತಟ್ಟಿದ್ದಾರೆ.

ಆಲಿಯಾ ಭಟ್​ ಅವರು ನೆಪೋಟಿಸಂ ಫಲಾಭವಿ ಎಂದು ಕಂಗನಾ ಯಾವಾಗಲೂ ಟೀಕೆ ಮಾಡುತ್ತಾರೆ. ಆ ಕಾರಣಕ್ಕಾಗಿ ಅವರು ಆಲಿಯಾ ನಟನೆಯ ಸಿನಿಮಾಗಳೆಂದರೆ ಮೂಗು ಮುರಿಯುತ್ತಾರೆ. ಆದರೆ ಈ ಬಾರಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಕಂಗನಾ ಬೆರಗಾಗಿದ್ದಾರೆ. ಹಾಗಾಗಿ ಅವರು ಈ ಚಿತ್ರವನ್ನು ಮನಸಾರೆ ಹೊಗಳಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ದಕ್ಷಿಣ ಭಾರತದ ಸಿನಿಮಾಗಳ ದಾಖಲೆಯ ಕಲೆಕ್ಷನ್​ನಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಕಳೆ ಬಂದಿದೆ ಎಂಬುದನ್ನು ಕೇಳಿ ಖುಷಿ ಆಯಿತು. ಸೂಪರ್​ ಸ್ಟಾರ್​ ಡೈರೆಕ್ಟರ್​, ಸ್ಟಾರ್​ ಹೀರೋ ಇರುವ ಒಂದು ಮಹಿಳಾ ಪ್ರಧಾನ ಸಿನಿಮಾದಿಂದ ಹಿಂದಿ ಚಿತ್ರರಂಗ ಕೂಡ ಪುಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಪುಟ್ಟ ಹೆಜ್ಜೆಗಳೇ ಆಗಿರಬಹುದು, ಆದರೆ ಅವು ಮಹತ್ವವಾದವು. ಕಷ್ಟದ ಪರಿಸ್ಥಿತಿಯಲ್ಲಿ ಇರುವ ಚಿತ್ರಮಂದಿರಗಳಿಗೆ ಈ ಬೆಳವಣಿಗೆ ತುಂಬ ಮುಖ್ಯ. ಗ್ರೇಟ್​! ಇಂಥ ಸಂದರ್ಭದಲ್ಲಿ ಮೂವೀ ಮಾಫಿಯಾದವರು ಒಳ್ಳೆಯ ಕೆಲಸ ಮಾಡ್ತಾರೆ ಅಂಥ ನಾನು ನಿರೀಕ್ಷಿಸಿರಲಿಲ್ಲ. ಅವರು ಒಳ್ಳೆಯದು ಮಾಡಿದಾಗ ನಾನು ಖಂಡಿತಾ ಹೊಗಳುತ್ತೇನೆ. ಇನ್ನೂ ಒಳ್ಳೆಯದನ್ನು ನಿರೀಕ್ಷಿಸುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದಾರೆ.

ಕಂಗನಾ ಅವರಿಗೆ ಕರಣ್​ ಜೋಹರ್​ ಅವರನ್ನು ಕಂಡರೆ ಕೂಡ ಆಗುವುದಿಲ್ಲ. ಆದರೆ ಈ ಹಿಂದೆ ಕರಣ್​ ಜೋಹರ್​ ನಿರ್ಮಾಣ ಮಾಡಿದ್ದ ‘ಶೇರ್​ಷಾ’ ಚಿತ್ರವನ್ನು ಕೂಡ ಕಂಗನಾ ಹೊಗಳಿದ್ದರು. ಈಗ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಅವರು ಮಾತ್ರವಲ್ಲದೇ ಬಾಲಿವುಡ್​ನ ಅನೇಕರು ಈ ಸಿನಿಮಾವನ್ನು ಹೊಗಳಿದ್ದಾರೆ.

ಬಾಲಿವುಡ್​ ಸೆಲೆಬ್ರಿಟಿಗಳಾದ ರಿತೇಶ್​ ದೇಶಮುಖ್​, ವಿಕ್ಕಿ ಕೌಶಲ್​, ಶಶಾಂತ್​ ಕೈತಾನ್​, ರಿದ್ಧಿಮಾ ಕಪೂರ್​ ಮುಂತಾದವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲರಿಗೂ ಈ ಚಿತ್ರ ಇಷ್ಟ ಆಗಿದೆ. ‘ಈ ಸಿನಿಮಾವನ್ನು ಕಟ್ಟಿಕೊಡುವಲ್ಲಿ ತೋರಿದ ಬುದ್ಧಿವಂತಿಕೆ ಕಂಡು ನಾನು ಬೆರಗಾದೆ. ಸಂಜಯ್​ ಲೀನಾ ಬನ್ಸಾಲಿ ಸರ್​.. ನೀವು ಮಾಸ್ಟರ್​! ಆಲಿಯಾ ಭಟ್​ ಬಗ್ಗೆ ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಗಂಗೂಬಾಯಿ ಪಾತ್ರದಲ್ಲಿ ಆಲಿಯಾ ನಟನೆ ಅಮೇಜಿಂಗ್​. ನಿಮಗೆ ಹ್ಯಾಟ್ಸ್​ಆಫ್​. ದೊಡ್ಡ ಪರದೆಯ ಮ್ಯಾಜಿಕ್​ ಇದು. ಈ ಸಿನಿಮಾವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ’ ಎಂದು ವಿಕ್ಕಿ ಕೌಶಲ್​ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ನೋಡಿ ಆಲಿಯಾ​ ಅಭಿಮಾನಿಗಳು ಏನಂದ್ರು? ಇಲ್ಲಿದೆ ಜನರ ವಿಮರ್ಶೆ

ಬ್ರೇಕಪ್​ಗಳ ರಾಜ ರಣಬೀರ್​ ಜತೆ ಆಲಿಯಾ ಮದುವೆ ಆಗ್ತಿರೋದು ಯಾಕೆ? ಕೊನೆಗೂ ಬಯಲಾಯ್ತು ಸತ್ಯ

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!