AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್ ಅಂಶ್’ ಮೆಚ್ಚಿದ ಕಂಗನಾ: ಆದರೆ ಚಿತ್ರತಂಡಕ್ಕೆ ಪ್ರೇಮಾನಂದ್ ಮಹಾರಾಜ್ ಎಚ್ಚರಿಕೆ

ಹಲವು ಕಡೆಗಳಲ್ಲಿ ‘ಹನುಮಾನ್ ಅಂಶ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಭಕ್ತಿಪ್ರಧಾನ ಕಥೆ ಇರುವ ಈ ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನಟಿ ಕಂಗನಾ ರಣಾವತ್ ಅವರು ಈ ಸಿನಿಮಾವನ್ನು ಒಂದು ಸತ್ಸಂಗ ಎಂದು ಹೊಗಳಿದ್ದಾರೆ. ಈ ನಡುವೆ ಪ್ರೇಮಾನಂದ್ ಮಹಾರಾಜ್ ಅವರು ಚಿತ್ರತಂಡಕ್ಕೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

‘ಹನುಮಾನ್ ಅಂಶ್’ ಮೆಚ್ಚಿದ ಕಂಗನಾ: ಆದರೆ ಚಿತ್ರತಂಡಕ್ಕೆ ಪ್ರೇಮಾನಂದ್ ಮಹಾರಾಜ್ ಎಚ್ಚರಿಕೆ
Hanuman Ansh Poster Image Credit source: SWAMbhu Media Network
ಮದನ್​ ಕುಮಾರ್​
|

Updated on:Sep 02, 2026 | 11:07 PM

Share

ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿ ಸಿದ್ಧವಾಗಿರುವ ‘ಹನುಮಾನ್ ಅಂಶ್’ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ನಡುವೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಈ ಚಿತ್ರವನ್ನು ಬಹುವಾಗಿ ಶ್ಲಾಘಿಸಿದ್ದಾರೆ. ಕೇವಲ 2 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡು ಈಗಾಗಲೇ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ 2026ರ ಅತ್ಯಂತ ಲಾಭದಾಯಕ ಸಿನಿಮಾ ಎನಿಸಿಕೊಂಡಿದೆ.

ಯಾವುದೇ ಸ್ಟಾರ್ ಕಲಾವಿದರು ಹಾಗೂ ಅಬ್ಬರದ ಪ್ರಚಾರ ಇಲ್ಲದೇ ಇದ್ದರೂ ಕೂಡ ‘ಹನುಮಾನ್ ಅಂಶ್’ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಮೊದಲು ‘ಫ್ಯಾಷನ್’ ಖ್ಯಾತಿಯ ನಿರ್ದೇಶಕ ಮಧುರ್ ಭಂಡಾರ್ಕರ್ ಕೂಡ ‘ಹನುಮಾನ್ ಅಂಶ್’ ಚಿತ್ರದ ನಿರ್ದೇಶಕ ವಿಶಾಲ್ ಚತುರ್ವೇದಿ ಹಾಗೂ ಬಾಬಾ ಪಾತ್ರಧಾರಿ ಶೋಭಿನವ್ ಸತ್ಯಾ ಅವರ ಅಭಿನಯವನ್ನು ಕೊಂಡಾಡಿದ್ದರು. ಈಗ ಕಂಗನಾ ಅವರು ಚಿತ್ರಕ್ಕೆ ಮೆಚ್ಚಿಗೆ ಸೂಚಿಸಿದ್ದಾರೆ.

‘ಹನುಮಾನ್ ಅಂಶ್’ ಬಗ್ಗೆ ಕಂಗನಾ ಮಾತು:

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನೀಮ್ ಕರೋಲಿ ಬಾಬಾ ಅವರ ಚಿತ್ರವನ್ನು ಹಂಚಿಕೊಂಡಿರುವ ಕಂಗನಾ ರಣಾವತ್, ‘ಹನುಮಾನ್ ಅಂಶ್ ಬರೀ ಸಿನಿಮಾವಲ್ಲ, ಅದೊಂದು ಸತ್ಸಂಗ. ನೀಮ್ ಕರೋಲಿ ಬಾಬಾ ಅವರ ಪವಾಡಗಳನ್ನು ಅನುಭವಿಸಿದ ಜನರ ಕಥೆಗಳನ್ನು ಸುಂದರವಾಗಿ ಹೆಣೆಯಲಾಗಿದೆ. ಥೆರಪಿಗೆ ಹೋಗುವುದನ್ನು ಬಿಟ್ಟು ಈ ಸಿನಿಮಾ ನೋಡಿ’ ಎಂದು ಬರೆದುಕೊಂಡಿದ್ದಾರೆ.

ಪ್ರೇಮಾನಂದ್ ಎಚ್ಚರಿಕೆ ಏನು?

ಇನ್ನೊಂದೆಡೆ, ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜ್ ಅವರು ಈ ಚಿತ್ರತಂಡಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ‘ಸಂತರ ಜೀವನಧಾರಿತ ಸಿನಿಮಾಗಳು ಕೇವಲ ಮನರಂಜನೆ ನೀಡುವುದಕ್ಕೆ ಸೀಮಿತವಾಗಬಾರದು. ಅವು ಪ್ರೇಕ್ಷಕರಲ್ಲಿ ಭಕ್ತಿ, ವೈರಾಗ್ಯ ಹಾಗೂ ಜ್ಞಾನವನ್ನು ಮೂಡಿಸಬೇಕು. ಸೃಜನಶೀಲ ಸ್ವಾತಂತ್ರ್ಯದ ಹೆಸರಿನಲ್ಲಿ ರಂಜನೆ ಅಥವಾ ಕಮರ್ಷಿಯಲ್ ಯಶಸ್ಸಿಗಾಗಿ ಸಂತರ ನಿಜ ಜೀವನದ ಕಥೆಯನ್ನು ತಿರುಚುವುದು ಅಥವಾ ಕಾಲ್ಪನಿಕ ದೃಶ್ಯಗಳನ್ನು ಸೇರಿಸುವುದು ತಪ್ಪು. ಸಂತರ ಚರಿತ್ರೆಗೆ ಧಕ್ಕೆ ತರುವುದು ಅಪರಾಧಕ್ಕೆ ಸಮಾನ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಹನುಮಾನ್ ಅಂಶ್’ ವರ್ಷದ ಟಾಪ್ ಲಾಭದಾಯಕ ಸಿನಿಮಾ, ಗಳಿಸಿರುವುದೆಷ್ಟು?

ಹನುಮಾನ್ ಅಂಶ್ ಬಾಕ್ಸ್ ಆಫೀಸ್‌ ಕಲೆಕ್ಷನ್:

ಕೇವಲ 2 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದ್ದ ಈ ಸಿನಿಮಾ ಆಗಸ್ಟ್ 7ರಂದು ಬಹಳ ಕಡಿಮೆ ಸದ್ದಿನೊಂದಿಗೆ ಚಿತ್ರಮಂದಿರಗಳಿಗೆ ಪ್ರವೇಶಿಸಿತ್ತು. ಆರಂಭದ ಮೊದಲ ಎರಡು ವಾರಗಳಲ್ಲಿ ಬರಿ 1.48 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದ್ದ ಈ ಚಿತ್ರ, ಮೂರನೇ ವಾರದಿಂದ ಬಾಕ್ಸ್ ಆಫೀಸ್‌ನಲ್ಲಿ ಅಚ್ಚರಿಯ ಚೇತರಿಕೆ ಕಂಡಿತು. ಪ್ರೇಕ್ಷಕರ ಬಾಯ್ಮಾತಿನ ಪ್ರಚಾರದಿಂದಾಗಿ ಭಾರಿ ಪ್ರದರ್ಶನ ಕಾಣುತ್ತಿರುವ ‘ಹನುಮಾನ್ ಅಂಶ್’, ಇಲ್ಲಿಯವರೆಗೆ 54.13 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಪ್ರದರ್ಶನ ಮುಂದುವರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 pm, Wed, 2 September 26

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು