AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

Uddhav Thackeray | Hanuman Chalisa: ‘ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್​ ಚಾಲೀಸವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​
ಕಂಗನಾ ರಣಾವತ್
TV9 Web
| Edited By: |

Updated on:Jun 30, 2022 | 2:02 PM

Share

​ಉದ್ಧವ್​ ಠಾಕ್ರೆಯ ಪ್ರತಿಷ್ಠೆ ಮಣ್ಣಾಗಲಿದೆ ಎಂದು ನಟಿ ಕಂಗನಾ ರಣಾವತ್​ (Kangana Ranaut) ಅವರು 2020ರಲ್ಲಿಯೇ ಹೇಳಿದ್ದರು. ಈಗ ಅವರು ಮತ್ತೆ ಉದ್ಧವ್​ ಠಾಕ್ರೆ ವಿರುದ್ಧ ಧ್ವನಿ ಎತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು ಹನುಮಾನ್​ ಚಾಲೀಸ (Hanuman Chalisa) ಬಗ್ಗೆಯೂ ಮಾತನಾಡಿದ್ದಾರೆ. ಶಿವ ಸೇನಾ ಅಧ್ಯಕ್ಷ ಉದ್ಧವ್​ ಠಾಕ್ರೆ (Uddhav Thackeray) ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಂಗನಾ ಅವರು ಈ ವಿಡಿಯೋ ಹರಿಬಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ. ಕಂಗನಾ ಮಾತಿಗೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.  ಕೇವಲ ಒಂದು ಗಂಟೆಯಲ್ಲಿ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಸಾವಿರಾರು ಜನರು ಕಮೆಂಟ್​ ಮಾಡಿದ್ದಾರೆ.

‘1975ರ ಬಳಿಕ ಇತಿಹಾಸದಲ್ಲಿ ಇದು ತುಂಬ ಮಹತ್ವವಾದ ಸಮಯ. 1975ರಲ್ಲಿ ಜೆಪಿ ನಾರಾಯಣ್​ ಅವರ ಘೋಷಣೆಯಿಂದ ಸಿಂಹಾಸನ ಅಲುಗಾಡಿತ್ತು. ಪ್ರಜಾಪ್ರಭುತ್ವ ಎಂಬುದು ಒಂದು ವಿಶ್ವಾಸ. ಅಧಿಕಾರದ ಅಹಂಕಾರದಿಂದ ಆ ವಿಶ್ವಾಸವನ್ನು ಮುರಿದರೆ ಅಂಥವರ ಪ್ರತಿಷ್ಠೆ ನುಚ್ಚುನೂರಾಗುತ್ತದೆ ಎಂದು ನಾನು 2020ರಲ್ಲೇ ಹೇಳಿದ್ದೆ. ಇದು ಯಾವುದೇ ವ್ಯಕ್ತಿಯ ಶಕ್ತಿ ಅಲ್ಲ. ಇದು ಚರಿತ್ರೆಯ ಶಕ್ತಿ’ ಎಂದಿ​ದ್ದಾರೆ ಕಂಗನಾ ರಣಾವತ್​.

ಇದನ್ನೂ ಓದಿ
Image
ನಿರ್ಮಾಪಕರ​ ಹೊಟ್ಟೆ ಮೇಲೆ ಹೊಡೆದ ಕಂಗನಾ; ಒಟಿಟಿಯಲ್ಲೂ ‘ಧಾಕಡ್​’ ಚಿತ್ರಕ್ಕೆ ಬೇಡಿಕೆ ಇಲ್ಲ
Image
ಕಂಗನಾ ನಟನೆಯ ‘ಧಾಕಡ್​’ ಚಿತ್ರ ನೋಡಲು ಒಬ್ಬರೂ ಬರಲಿಲ್ಲ; ಹಲವು ಕಡೆಗಳಲ್ಲಿ ಶೋ ಕ್ಯಾನ್ಸಲ್​
Image
ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ
Image
‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​

‘ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್​ ಚಾಲೀಸವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ. ಹರಹರ ಮಹದೇವ್​’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಂಗನಾ ರಣಾವತ್​ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಮುಂಬೈನಲ್ಲಿ ಇರುವ ಕಂಗನಾ ರಣಾವತ್ ಅವರ ಕಟ್ಟಡವು ನಿಯಮಬಾಹಿರವಾಗಿ ಕಟ್ಟಲ್ಪಟ್ಟಿದೆ ಎಂದು ಆರೋಪಿಸಿ 2020ರಲ್ಲಿ ಅದನ್ನು ತೆರವುಗೊಳಿಸಲಾಗಿತ್ತು. ಆಗ ಉದ್ಧವ್​ ಠಾಕ್ರೆ ಸರ್ಕಾರದ ವಿರುದ್ಧ ಕಂಗನಾ ಆಕ್ರೋಶಭರಿತವಾಗಿ ವಿಡಿಯೋ ಮಾಡಿದ್ದರು. ‘ನೀನು ನನ್ನ ವಿರುದ್ಧ ಸೇಡು ತೀರಿಕೊಂಡೆ ಅಂತ ತಿಳಿದಿದ್ದೀಯಾ ಉದ್ಧವ್​ ಠಾಕ್ರೆ? ಇಂದು ನನ್ನ ಮನೆ ಮರಿದಿದೆ. ನಾಳೆ ನಿನ್ನ ಗರ್ವ ಮುರಿದುಹೋಗಲಿದೆ’ ಎಂದು ಕಂಗನಾ ಶಾಪ ಹಾಕಿದ್ದರು. ಆ ವಿಡಿಯೋ ಕೂಡ ಈಗ ವೈರಲ್​ ಆಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಕಂಗನಾ ರಣಾವತ್​ ಅಭಿನಯಿಸಿದ ‘ಧಾಕಡ್​’ ಸಿನಿಮಾ ಮೇ 20ರಂದು ಬಿಡುಗಡೆ ಆಯಿತು. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಕೇವಲ ಮೂರು ಮತ್ತೊಂದು ಕೋಟಿ ರೂಪಾಯಿ. ಆ ಸೋಲಿನ ಬಳಿಕ ಸೈಲೆಂಟ್​ ಆಗಿದ್ದ ಕಂಗನಾ ಅವರು ಉದ್ಧವ್​ ಠಾಕ್ರೆ ರಾಜೀನಾಮೆ ಬೆನ್ನಲ್ಲೇ ಮತ್ತೆ ಆ್ಯಕ್ಟೀವ್​ ಆಗಿದ್ದಾರೆ.

ಇದನ್ನೂ ಓದಿ: 10 ಪರ್ಸೆಂಟ್ ಕೂಡ ಕಲೆಕ್ಷನ್ ಆಗಿಲ್ಲ: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ಕಂಗನಾ ಚಿತ್ರ

ಸ್ಪೂಫ್ ವಿಡಿಯೊವನ್ನು ನಿಜವೆಂದು ಭಾವಿಸಿ ಕತಾರ್​​ ಏರ್​​​ವೇಸ್ ಮುಖ್ಯಸ್ಥರನ್ನು ಈಡಿಯಟ್ ಎಂದ ಕಂಗನಾ

Published On - 2:02 pm, Thu, 30 June 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?