Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

| Updated By: ಮದನ್​ ಕುಮಾರ್​

Updated on: Jun 30, 2022 | 2:02 PM

Uddhav Thackeray | Hanuman Chalisa: ‘ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್​ ಚಾಲೀಸವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​
ಕಂಗನಾ ರಣಾವತ್
Follow us on

​ಉದ್ಧವ್​ ಠಾಕ್ರೆಯ ಪ್ರತಿಷ್ಠೆ ಮಣ್ಣಾಗಲಿದೆ ಎಂದು ನಟಿ ಕಂಗನಾ ರಣಾವತ್​ (Kangana Ranaut) ಅವರು 2020ರಲ್ಲಿಯೇ ಹೇಳಿದ್ದರು. ಈಗ ಅವರು ಮತ್ತೆ ಉದ್ಧವ್​ ಠಾಕ್ರೆ ವಿರುದ್ಧ ಧ್ವನಿ ಎತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು ಹನುಮಾನ್​ ಚಾಲೀಸ (Hanuman Chalisa) ಬಗ್ಗೆಯೂ ಮಾತನಾಡಿದ್ದಾರೆ. ಶಿವ ಸೇನಾ ಅಧ್ಯಕ್ಷ ಉದ್ಧವ್​ ಠಾಕ್ರೆ (Uddhav Thackeray) ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಂಗನಾ ಅವರು ಈ ವಿಡಿಯೋ ಹರಿಬಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ. ಕಂಗನಾ ಮಾತಿಗೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.  ಕೇವಲ ಒಂದು ಗಂಟೆಯಲ್ಲಿ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಸಾವಿರಾರು ಜನರು ಕಮೆಂಟ್​ ಮಾಡಿದ್ದಾರೆ.

‘1975ರ ಬಳಿಕ ಇತಿಹಾಸದಲ್ಲಿ ಇದು ತುಂಬ ಮಹತ್ವವಾದ ಸಮಯ. 1975ರಲ್ಲಿ ಜೆಪಿ ನಾರಾಯಣ್​ ಅವರ ಘೋಷಣೆಯಿಂದ ಸಿಂಹಾಸನ ಅಲುಗಾಡಿತ್ತು. ಪ್ರಜಾಪ್ರಭುತ್ವ ಎಂಬುದು ಒಂದು ವಿಶ್ವಾಸ. ಅಧಿಕಾರದ ಅಹಂಕಾರದಿಂದ ಆ ವಿಶ್ವಾಸವನ್ನು ಮುರಿದರೆ ಅಂಥವರ ಪ್ರತಿಷ್ಠೆ ನುಚ್ಚುನೂರಾಗುತ್ತದೆ ಎಂದು ನಾನು 2020ರಲ್ಲೇ ಹೇಳಿದ್ದೆ. ಇದು ಯಾವುದೇ ವ್ಯಕ್ತಿಯ ಶಕ್ತಿ ಅಲ್ಲ. ಇದು ಚರಿತ್ರೆಯ ಶಕ್ತಿ’ ಎಂದಿ​ದ್ದಾರೆ ಕಂಗನಾ ರಣಾವತ್​.

ಇದನ್ನೂ ಓದಿ
ನಿರ್ಮಾಪಕರ​ ಹೊಟ್ಟೆ ಮೇಲೆ ಹೊಡೆದ ಕಂಗನಾ; ಒಟಿಟಿಯಲ್ಲೂ ‘ಧಾಕಡ್​’ ಚಿತ್ರಕ್ಕೆ ಬೇಡಿಕೆ ಇಲ್ಲ
ಕಂಗನಾ ನಟನೆಯ ‘ಧಾಕಡ್​’ ಚಿತ್ರ ನೋಡಲು ಒಬ್ಬರೂ ಬರಲಿಲ್ಲ; ಹಲವು ಕಡೆಗಳಲ್ಲಿ ಶೋ ಕ್ಯಾನ್ಸಲ್​
ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ
‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​

‘ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್​ ಚಾಲೀಸವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ. ಹರಹರ ಮಹದೇವ್​’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಂಗನಾ ರಣಾವತ್​ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಮುಂಬೈನಲ್ಲಿ ಇರುವ ಕಂಗನಾ ರಣಾವತ್ ಅವರ ಕಟ್ಟಡವು ನಿಯಮಬಾಹಿರವಾಗಿ ಕಟ್ಟಲ್ಪಟ್ಟಿದೆ ಎಂದು ಆರೋಪಿಸಿ 2020ರಲ್ಲಿ ಅದನ್ನು ತೆರವುಗೊಳಿಸಲಾಗಿತ್ತು. ಆಗ ಉದ್ಧವ್​ ಠಾಕ್ರೆ ಸರ್ಕಾರದ ವಿರುದ್ಧ ಕಂಗನಾ ಆಕ್ರೋಶಭರಿತವಾಗಿ ವಿಡಿಯೋ ಮಾಡಿದ್ದರು. ‘ನೀನು ನನ್ನ ವಿರುದ್ಧ ಸೇಡು ತೀರಿಕೊಂಡೆ ಅಂತ ತಿಳಿದಿದ್ದೀಯಾ ಉದ್ಧವ್​ ಠಾಕ್ರೆ? ಇಂದು ನನ್ನ ಮನೆ ಮರಿದಿದೆ. ನಾಳೆ ನಿನ್ನ ಗರ್ವ ಮುರಿದುಹೋಗಲಿದೆ’ ಎಂದು ಕಂಗನಾ ಶಾಪ ಹಾಕಿದ್ದರು. ಆ ವಿಡಿಯೋ ಕೂಡ ಈಗ ವೈರಲ್​ ಆಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಕಂಗನಾ ರಣಾವತ್​ ಅಭಿನಯಿಸಿದ ‘ಧಾಕಡ್​’ ಸಿನಿಮಾ ಮೇ 20ರಂದು ಬಿಡುಗಡೆ ಆಯಿತು. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಕೇವಲ ಮೂರು ಮತ್ತೊಂದು ಕೋಟಿ ರೂಪಾಯಿ. ಆ ಸೋಲಿನ ಬಳಿಕ ಸೈಲೆಂಟ್​ ಆಗಿದ್ದ ಕಂಗನಾ ಅವರು ಉದ್ಧವ್​ ಠಾಕ್ರೆ ರಾಜೀನಾಮೆ ಬೆನ್ನಲ್ಲೇ ಮತ್ತೆ ಆ್ಯಕ್ಟೀವ್​ ಆಗಿದ್ದಾರೆ.

ಇದನ್ನೂ ಓದಿ: 10 ಪರ್ಸೆಂಟ್ ಕೂಡ ಕಲೆಕ್ಷನ್ ಆಗಿಲ್ಲ: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ಕಂಗನಾ ಚಿತ್ರ

ಸ್ಪೂಫ್ ವಿಡಿಯೊವನ್ನು ನಿಜವೆಂದು ಭಾವಿಸಿ ಕತಾರ್​​ ಏರ್​​​ವೇಸ್ ಮುಖ್ಯಸ್ಥರನ್ನು ಈಡಿಯಟ್ ಎಂದ ಕಂಗನಾ

Published On - 2:02 pm, Thu, 30 June 22