AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ರವೀನಾ ಟಂಡನ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಶನಿವಾರ (ಜೂ.1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲಿ ಗಲಾಟೆ ನಡೆದಿದೆ. ಆ ಘಟನೆಯನ್ನು ಕಂಗನಾ ರಣಾವತ್​ ಅವರು ಖಂಡಿಸಿದ್ದಾರೆ.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ರವೀನ್ ಟಂಡನ್​
ಮದನ್​ ಕುಮಾರ್​
|

Updated on: Jun 03, 2024 | 4:32 PM

Share

ನಟಿ ರವೀನಾ ಟಂಡನ್​ ಅವರ ಮೇಲೆ ಕೆಲವರು ಇತ್ತೀಚೆಗೆ ಹಲ್ಲೆ (Assault) ಮಾಡಿದರು. ಆ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ನೋಡಿ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut) ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರವೀನಾ ಟಂಡನ್​ (Raveena Tandon) ಪರವಾಗಿ ಕಂಗನಾ ಬ್ಯಾಟ್​ ಬೀಸಿದ್ದಾರೆ. ನಟಿಯ ಮೇಲೆ ಹಲ್ಲೆ ಮಾಡಿದವರನ್ನು ಸುಮ್ಮನೆ ಬಿಡಬಾರದು ಎಂದು ಕಂಗನಾ ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ರವೀನಾ ಟಂಡನ್ ಅವರ ಮೇಲೆ ಆದ ಹಲ್ಲೆ ನಿಜಕ್ಕೂ ಒಂದು ಎಚ್ಚರಿಕೆ ಗಂಟೆ. ವಿರುದ್ಧ ಗುಂಪಿನಲ್ಲಿ 5-6 ಜನರು ಇದ್ದರು. ರವೀನಾ ಮೇಲೆ ಗುಂಪು ಹಲ್ಲೆ ಆಗುವುದರಲ್ಲಿತ್ತು. ಇಂಥ ಬೀದಿ ಜಗಳವನ್ನು ನಾವು ಖಂಡಿಸಬೇಕು. ಅಂಥವರಿಗೆ ಶಿಕ್ಷೆ ಆಗಬೇಕು. ಈ ರೀತಿ ಕ್ರೂರ ಮತ್ತು ವಿಷಕಾರಿ ಕೆಲಸ ಮಾಡಿದವರನ್ನು ಸುಮ್ಮನೆ ಬಿಡಬಾರದು’ ಎಂದಿದ್ದಾರೆ ಕಂಗನಾ ರಣಾವತ್​. ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಅವರು ಪ್ರಚಾರ ಮಾಡಿದ್ದಾರೆ. ಜೂನ್​ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಶನಿವಾರ (ಜೂನ್​ 1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲೇ ಈ ಗಲಾಟೆ ನಡೆದಿದೆ. ರವೀನಾ ಟಂಡನ್​ ಅವರ ಕಾರು ರಿವರ್ಸ್​ ತೆಗೆಯುವಾಗ ಪಾದಚಾರಿಗಳಿಗೆ ಡಿಕ್ಕಿ ಆಗಿದೆ ಎನ್ನಲಾಗಿದೆ. ಆ ಬಳಿಕ ನಟಿ ಮತ್ತು ಚಾಲಕನ ವಿರುದ್ಧ ಜನರು ಗರಂ ಆಗಿದ್ದಾರೆ. ಈ ಸಂದರ್ಭದಲ್ಲಿ ರವೀನಾ ಕೂಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ತನಿಖೆ ಬಳಿಕ ಪೂರ್ಣ ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ರವೀನಾ ಟಂಡನ್​ ಅವರ ಗಲಾಟೆ ಬಗ್ಗೆ ಮೊಹಮ್ಮದ್​ ಎಂಬ ವ್ಯಕ್ತಿಯ ಹೇಳಿಕೆ ವೈರಲ್​ ಆಗಿದೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದಿದ್ದಾರೆ ಮೊಹಮ್ಮದ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ