AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ರವೀನಾ ಟಂಡನ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಶನಿವಾರ (ಜೂ.1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲಿ ಗಲಾಟೆ ನಡೆದಿದೆ. ಆ ಘಟನೆಯನ್ನು ಕಂಗನಾ ರಣಾವತ್​ ಅವರು ಖಂಡಿಸಿದ್ದಾರೆ.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ರವೀನ್ ಟಂಡನ್​
ಮದನ್​ ಕುಮಾರ್​
|

Updated on: Jun 03, 2024 | 4:32 PM

Share

ನಟಿ ರವೀನಾ ಟಂಡನ್​ ಅವರ ಮೇಲೆ ಕೆಲವರು ಇತ್ತೀಚೆಗೆ ಹಲ್ಲೆ (Assault) ಮಾಡಿದರು. ಆ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ನೋಡಿ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut) ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರವೀನಾ ಟಂಡನ್​ (Raveena Tandon) ಪರವಾಗಿ ಕಂಗನಾ ಬ್ಯಾಟ್​ ಬೀಸಿದ್ದಾರೆ. ನಟಿಯ ಮೇಲೆ ಹಲ್ಲೆ ಮಾಡಿದವರನ್ನು ಸುಮ್ಮನೆ ಬಿಡಬಾರದು ಎಂದು ಕಂಗನಾ ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ರವೀನಾ ಟಂಡನ್ ಅವರ ಮೇಲೆ ಆದ ಹಲ್ಲೆ ನಿಜಕ್ಕೂ ಒಂದು ಎಚ್ಚರಿಕೆ ಗಂಟೆ. ವಿರುದ್ಧ ಗುಂಪಿನಲ್ಲಿ 5-6 ಜನರು ಇದ್ದರು. ರವೀನಾ ಮೇಲೆ ಗುಂಪು ಹಲ್ಲೆ ಆಗುವುದರಲ್ಲಿತ್ತು. ಇಂಥ ಬೀದಿ ಜಗಳವನ್ನು ನಾವು ಖಂಡಿಸಬೇಕು. ಅಂಥವರಿಗೆ ಶಿಕ್ಷೆ ಆಗಬೇಕು. ಈ ರೀತಿ ಕ್ರೂರ ಮತ್ತು ವಿಷಕಾರಿ ಕೆಲಸ ಮಾಡಿದವರನ್ನು ಸುಮ್ಮನೆ ಬಿಡಬಾರದು’ ಎಂದಿದ್ದಾರೆ ಕಂಗನಾ ರಣಾವತ್​. ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಅವರು ಪ್ರಚಾರ ಮಾಡಿದ್ದಾರೆ. ಜೂನ್​ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಶನಿವಾರ (ಜೂನ್​ 1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲೇ ಈ ಗಲಾಟೆ ನಡೆದಿದೆ. ರವೀನಾ ಟಂಡನ್​ ಅವರ ಕಾರು ರಿವರ್ಸ್​ ತೆಗೆಯುವಾಗ ಪಾದಚಾರಿಗಳಿಗೆ ಡಿಕ್ಕಿ ಆಗಿದೆ ಎನ್ನಲಾಗಿದೆ. ಆ ಬಳಿಕ ನಟಿ ಮತ್ತು ಚಾಲಕನ ವಿರುದ್ಧ ಜನರು ಗರಂ ಆಗಿದ್ದಾರೆ. ಈ ಸಂದರ್ಭದಲ್ಲಿ ರವೀನಾ ಕೂಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ತನಿಖೆ ಬಳಿಕ ಪೂರ್ಣ ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ರವೀನಾ ಟಂಡನ್​ ಅವರ ಗಲಾಟೆ ಬಗ್ಗೆ ಮೊಹಮ್ಮದ್​ ಎಂಬ ವ್ಯಕ್ತಿಯ ಹೇಳಿಕೆ ವೈರಲ್​ ಆಗಿದೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದಿದ್ದಾರೆ ಮೊಹಮ್ಮದ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್