AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ರವೀನಾ ಟಂಡನ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಶನಿವಾರ (ಜೂ.1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲಿ ಗಲಾಟೆ ನಡೆದಿದೆ. ಆ ಘಟನೆಯನ್ನು ಕಂಗನಾ ರಣಾವತ್​ ಅವರು ಖಂಡಿಸಿದ್ದಾರೆ.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ರವೀನ್ ಟಂಡನ್​
ಮದನ್​ ಕುಮಾರ್​
|

Updated on: Jun 03, 2024 | 4:32 PM

Share

ನಟಿ ರವೀನಾ ಟಂಡನ್​ ಅವರ ಮೇಲೆ ಕೆಲವರು ಇತ್ತೀಚೆಗೆ ಹಲ್ಲೆ (Assault) ಮಾಡಿದರು. ಆ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ನೋಡಿ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut) ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರವೀನಾ ಟಂಡನ್​ (Raveena Tandon) ಪರವಾಗಿ ಕಂಗನಾ ಬ್ಯಾಟ್​ ಬೀಸಿದ್ದಾರೆ. ನಟಿಯ ಮೇಲೆ ಹಲ್ಲೆ ಮಾಡಿದವರನ್ನು ಸುಮ್ಮನೆ ಬಿಡಬಾರದು ಎಂದು ಕಂಗನಾ ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ರವೀನಾ ಟಂಡನ್ ಅವರ ಮೇಲೆ ಆದ ಹಲ್ಲೆ ನಿಜಕ್ಕೂ ಒಂದು ಎಚ್ಚರಿಕೆ ಗಂಟೆ. ವಿರುದ್ಧ ಗುಂಪಿನಲ್ಲಿ 5-6 ಜನರು ಇದ್ದರು. ರವೀನಾ ಮೇಲೆ ಗುಂಪು ಹಲ್ಲೆ ಆಗುವುದರಲ್ಲಿತ್ತು. ಇಂಥ ಬೀದಿ ಜಗಳವನ್ನು ನಾವು ಖಂಡಿಸಬೇಕು. ಅಂಥವರಿಗೆ ಶಿಕ್ಷೆ ಆಗಬೇಕು. ಈ ರೀತಿ ಕ್ರೂರ ಮತ್ತು ವಿಷಕಾರಿ ಕೆಲಸ ಮಾಡಿದವರನ್ನು ಸುಮ್ಮನೆ ಬಿಡಬಾರದು’ ಎಂದಿದ್ದಾರೆ ಕಂಗನಾ ರಣಾವತ್​. ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಅವರು ಪ್ರಚಾರ ಮಾಡಿದ್ದಾರೆ. ಜೂನ್​ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಶನಿವಾರ (ಜೂನ್​ 1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲೇ ಈ ಗಲಾಟೆ ನಡೆದಿದೆ. ರವೀನಾ ಟಂಡನ್​ ಅವರ ಕಾರು ರಿವರ್ಸ್​ ತೆಗೆಯುವಾಗ ಪಾದಚಾರಿಗಳಿಗೆ ಡಿಕ್ಕಿ ಆಗಿದೆ ಎನ್ನಲಾಗಿದೆ. ಆ ಬಳಿಕ ನಟಿ ಮತ್ತು ಚಾಲಕನ ವಿರುದ್ಧ ಜನರು ಗರಂ ಆಗಿದ್ದಾರೆ. ಈ ಸಂದರ್ಭದಲ್ಲಿ ರವೀನಾ ಕೂಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ತನಿಖೆ ಬಳಿಕ ಪೂರ್ಣ ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ರವೀನಾ ಟಂಡನ್​ ಅವರ ಗಲಾಟೆ ಬಗ್ಗೆ ಮೊಹಮ್ಮದ್​ ಎಂಬ ವ್ಯಕ್ತಿಯ ಹೇಳಿಕೆ ವೈರಲ್​ ಆಗಿದೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದಿದ್ದಾರೆ ಮೊಹಮ್ಮದ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?