AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ರವೀನಾ ಟಂಡನ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಶನಿವಾರ (ಜೂ.1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲಿ ಗಲಾಟೆ ನಡೆದಿದೆ. ಆ ಘಟನೆಯನ್ನು ಕಂಗನಾ ರಣಾವತ್​ ಅವರು ಖಂಡಿಸಿದ್ದಾರೆ.

ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಖಂಡಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ರವೀನ್ ಟಂಡನ್​
ಮದನ್​ ಕುಮಾರ್​
|

Updated on: Jun 03, 2024 | 4:32 PM

Share

ನಟಿ ರವೀನಾ ಟಂಡನ್​ ಅವರ ಮೇಲೆ ಕೆಲವರು ಇತ್ತೀಚೆಗೆ ಹಲ್ಲೆ (Assault) ಮಾಡಿದರು. ಆ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ನೋಡಿ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut) ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರವೀನಾ ಟಂಡನ್​ (Raveena Tandon) ಪರವಾಗಿ ಕಂಗನಾ ಬ್ಯಾಟ್​ ಬೀಸಿದ್ದಾರೆ. ನಟಿಯ ಮೇಲೆ ಹಲ್ಲೆ ಮಾಡಿದವರನ್ನು ಸುಮ್ಮನೆ ಬಿಡಬಾರದು ಎಂದು ಕಂಗನಾ ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ರವೀನಾ ಟಂಡನ್ ಅವರ ಮೇಲೆ ಆದ ಹಲ್ಲೆ ನಿಜಕ್ಕೂ ಒಂದು ಎಚ್ಚರಿಕೆ ಗಂಟೆ. ವಿರುದ್ಧ ಗುಂಪಿನಲ್ಲಿ 5-6 ಜನರು ಇದ್ದರು. ರವೀನಾ ಮೇಲೆ ಗುಂಪು ಹಲ್ಲೆ ಆಗುವುದರಲ್ಲಿತ್ತು. ಇಂಥ ಬೀದಿ ಜಗಳವನ್ನು ನಾವು ಖಂಡಿಸಬೇಕು. ಅಂಥವರಿಗೆ ಶಿಕ್ಷೆ ಆಗಬೇಕು. ಈ ರೀತಿ ಕ್ರೂರ ಮತ್ತು ವಿಷಕಾರಿ ಕೆಲಸ ಮಾಡಿದವರನ್ನು ಸುಮ್ಮನೆ ಬಿಡಬಾರದು’ ಎಂದಿದ್ದಾರೆ ಕಂಗನಾ ರಣಾವತ್​. ಅವರು ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಆಗಿದ್ದಾರೆ. ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಅವರು ಪ್ರಚಾರ ಮಾಡಿದ್ದಾರೆ. ಜೂನ್​ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಶನಿವಾರ (ಜೂನ್​ 1) ರಾತ್ರಿ ರವೀನಾ ಟಂಡನ್​ ಅವರ ಮನೆಯ ಎದುರಲ್ಲೇ ಈ ಗಲಾಟೆ ನಡೆದಿದೆ. ರವೀನಾ ಟಂಡನ್​ ಅವರ ಕಾರು ರಿವರ್ಸ್​ ತೆಗೆಯುವಾಗ ಪಾದಚಾರಿಗಳಿಗೆ ಡಿಕ್ಕಿ ಆಗಿದೆ ಎನ್ನಲಾಗಿದೆ. ಆ ಬಳಿಕ ನಟಿ ಮತ್ತು ಚಾಲಕನ ವಿರುದ್ಧ ಜನರು ಗರಂ ಆಗಿದ್ದಾರೆ. ಈ ಸಂದರ್ಭದಲ್ಲಿ ರವೀನಾ ಕೂಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ತನಿಖೆ ಬಳಿಕ ಪೂರ್ಣ ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ರವೀನಾ ಟಂಡನ್​ ಅವರ ಗಲಾಟೆ ಬಗ್ಗೆ ಮೊಹಮ್ಮದ್​ ಎಂಬ ವ್ಯಕ್ತಿಯ ಹೇಳಿಕೆ ವೈರಲ್​ ಆಗಿದೆ. ‘ನನ್ನ ಹೆಸರು ಮೊಹಮ್ಮದ್​. ನಾನು ಬಾಂದ್ರಾ ನಿವಾಸಿ. ನನ್ನ ತಾಯಿ, ಸಹೋದರಿ ಮುಂತಾದವರ ಜತೆ ನಾವು ಹೊರಗೆ ಹೋಗಿದ್ದೆವು. ಅಲ್ಲಿಂದ ವಾಪಸ್​ ಬರುವಾಗ, ರವೀನಾ ಟಂಡನ್​ ಮನೆಯ ಬಳಿ ನನ್ನ ತಾಯಿ ಮೇಲೆ ಅವರ ಚಾಲಕ ಕಾರು ಹತ್ತಿಸಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತ ನಮ್ಮ ಮೇಲೆ ಹಲ್ಲೆ ಮಾಡಿದ’ ಎಂದಿದ್ದಾರೆ ಮೊಹಮ್ಮದ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು