AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸಿನಿಮಾಗಳಲ್ಲಿ ‘ಅನಿಮಲ್​’ ಸಿನಿಮಾಗೆ ಪ್ರಮುಖ ಸ್ಥಾನ ಇದೆ. ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ಈ ಚಿತ್ರದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಬಿಡುಗಡೆಯಾಗಿ ಎರಡು ತಿಂಗಳು ಕಳೆದಿದ್ದರೂ ಕೂಡ ಇದರ ಬಗೆಗಿನ ಚರ್ಚೆ ನಿಂತಿಲ್ಲ. ಕಂಗನಾ ರಣಾವತ್​ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ಸಂದೀಪ್​ ರೆಡ್ಡಿ ವಂಗ
ಮದನ್​ ಕುಮಾರ್​
|

Updated on: Feb 06, 2024 | 11:24 AM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಅವರಿಗೆ ಈಗ ಸಖತ್​ ಬೇಡಿಕೆ ಇದೆ. ಅದಕ್ಕೆ ಕಾರಣ ಆಗಿರುವುದು ‘ಅನಿಮಲ್​’ (Animal Movie) ಸಿನಿಮಾದ ಭರ್ಜರಿ ಯಶಸ್ಸು. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಅಂದಾಜು 900 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅವರ ಕೆಲಸವನ್ನು ಕೆಲವರು ಟೀಕಿಸಿದ್ದಾರೆ. ಇನ್ನೂ ಕೆಲವರು ಮೆಚ್ಚಿಕೊಂಡಿದ್ದಾರೆ. ಸಂದೀಪ್ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ಕಲಾವಿದರು ಬಯಸುತ್ತಿದ್ದಾರೆ. ಆದರೆ ನಟಿ ಕಂಗನಾ ರಣಾವತ್​ (Kangana Ranaut) ಅವರು ಈ ವಿಚಾರದಲ್ಲಿ ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕಡೆಯಿಂದ ಬಂದ ಆಫರ್​ ಅನ್ನು ಕಂಗನಾ ನೇರವಾಗಿ ತಿರಸ್ಕರಿಸಿದ್ದಾರೆ. ಅಲ್ಲದೇ, ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.

‘ಅನಿಮಲ್​’ ಸಿನಿಮಾವನ್ನು ವೀಕ್ಷಿಸಿದ ಬಳಿಕ ಕಂಗನಾ ರಣಾವತ್​ ಅವರು ತಮ್ಮ ವಿಮರ್ಶೆ ತಿಳಿಸಿದ್ದರು. ಈ ಸಿನಿಮಾ ಸ್ತ್ರೀ ವಿರೋಧಿಯಾಗಿದೆ ಎಂದು ಅವರು ಹೇಳಿದ್ದರು. ಆದರೂ ಕೂಡ ಅವರ ವಿಮರ್ಶೆಯನ್ನು ಸಂದೀಪ್​ ಅವರು ಪಾಸಿಟಿವ್​ ಆಗಿ ತೆಗೆದುಕೊಂಡಿದ್ದಾರೆ. ಯಾಕೆಂದರೆ, ಕಂಗನಾ ಅವರ ಪ್ರತಿಭೆಯ ಬಗ್ಗೆ ಸಂದೀಪ್​ಗೆ ಅಭಿಮಾನ ಇದೆ. ಕಂಗನಾ ನಟನೆಯ ಸಿನಿಮಾಗಳನ್ನು ಸಂದೀಪ್ ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ನಿರ್ದೇಶಕನ ಹೆಂಡತಿ ಮೇಲೆ ಸರಣಿ ಆರೋಪ ಮಾಡಿದ ಕಂಗನಾ ರಣಾವತ್​

‘ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ ಅವರ ಬಳಿ ಹೋಗಿ ಕಥೆ ಹೇಳುತ್ತೇನೆ. ‘ಕ್ವೀನ್​’ ಮತ್ತು ಇತರೆ ಸಿನಿಮಾಗಳಲ್ಲಿ ಅವರ ನಟನೆಯನ್ನು ನಾನು ಇಷ್ಟಪಟ್ಟಿದ್ದೇನೆ. ನನ್ನ ‘ಅನಿಮಲ್​’ ಚಿತ್ರದ ಬಗ್ಗೆ ಅವರು ನೆಗೆಟಿವ್​ ಕಮೆಂಟ್​ ಮಾಡಿದ್ದರೂ ನನಗೆ ಕೋಪ ಬರುವುದಿಲ್ಲ. ರಾಜಕೀಯವಾಗಿ ಸರಿ-ತಪ್ಪು ಬಗ್ಗೆ ನಾನು ಮಾತನಾಡುತ್ತಿಲ್ಲ. ಒಟ್ಟಿನಲ್ಲಿ ಅವರ ಪರ್ಫಾರ್ಮೆನ್ಸ್​ ನನಗೆ ನಿಜಕ್ಕೂ ಇಷ್ಟವಾಗಿದೆ’ ಎಂದು ಸಂದೀಪ್​ ರೆಡ್ಡಿ ವಂಗ ಹೇಳಿದ್ದಾರೆ.

ಕಂಗನಾ ರಣಾವತ್​ ಟ್ವೀಟ್​:

ಕಂಗನಾ ಪ್ರತಿಕ್ರಿಯೆ:

‘ವಿಮರ್ಶೆ ಮತ್ತು ಟೀಕೆ ಬೇರೆ ಬೇರೆ ಆಗಿರುತ್ತವೆ. ಎಲ್ಲ ಬಗೆಯ ಕಲೆ ಕೂಡ ವಿಮರ್ಶೆಗೆ ಮತ್ತು ಚರ್ಚೆಗೆ ಒಳಪಡಬೇಕು. ಅದು ಸಹಜವಾದ ವಿಷಯ. ಸಂದೀಪ್​ ಅವರು ನನ್ನ ವಿಮರ್ಶೆಗೆ ಗೌರವ ನೀಡಿದ್ದು ನೋಡಿದರೆ ತಿಳಿಯುತ್ತದೆ. ಅವರು ಕೇವಲ ಗಂಡಸುತನದ ಸಿನಿಮಾ ಮಾಡುವುದಷ್ಟೇ ಅಲ್ಲ, ಅವರ ಆ್ಯಟಿಟ್ಯೂಡ್​ ಕೂಡ ಹಾಗೆಯೇ ಇದೆ. ಧನ್ಯವಾದಗಳು ಸರ್​. ಆದರೆ ನೀವು ನನಗೆ ಯಾವುದೇ ಪಾತ್ರ ನೀಡಬೇಡಿ. ನೀಡಿದರೆ ನಿಮ್ಮ ಆಲ್ಫಾ ಮೇಲ್​ ಪಾತ್ರಗಳು ಸ್ತ್ರೀವಾದಿ ಆಗಿಬಿಡುತ್ತವೆ. ಆಗ ನಿಮ್ಮ ಸಿನಿಮಾಗಳು ಸೋಲುತ್ತವೆ. ನೀವು ಬ್ಲಾಕ್​ ಬಸ್ಟರ್​ ಸಿನಿಮಾ ಮಾಡುವವರು. ಇಂಡಸ್ಟ್ರಿಗೆ ನಿಮ್ಮ ಅಗತ್ಯ ಇದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!