AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸಿನಿಮಾಗಳಲ್ಲಿ ‘ಅನಿಮಲ್​’ ಸಿನಿಮಾಗೆ ಪ್ರಮುಖ ಸ್ಥಾನ ಇದೆ. ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ಈ ಚಿತ್ರದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಬಿಡುಗಡೆಯಾಗಿ ಎರಡು ತಿಂಗಳು ಕಳೆದಿದ್ದರೂ ಕೂಡ ಇದರ ಬಗೆಗಿನ ಚರ್ಚೆ ನಿಂತಿಲ್ಲ. ಕಂಗನಾ ರಣಾವತ್​ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ಸಂದೀಪ್​ ರೆಡ್ಡಿ ವಂಗ
Follow us
ಮದನ್​ ಕುಮಾರ್​
|

Updated on: Feb 06, 2024 | 11:24 AM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಅವರಿಗೆ ಈಗ ಸಖತ್​ ಬೇಡಿಕೆ ಇದೆ. ಅದಕ್ಕೆ ಕಾರಣ ಆಗಿರುವುದು ‘ಅನಿಮಲ್​’ (Animal Movie) ಸಿನಿಮಾದ ಭರ್ಜರಿ ಯಶಸ್ಸು. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಅಂದಾಜು 900 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅವರ ಕೆಲಸವನ್ನು ಕೆಲವರು ಟೀಕಿಸಿದ್ದಾರೆ. ಇನ್ನೂ ಕೆಲವರು ಮೆಚ್ಚಿಕೊಂಡಿದ್ದಾರೆ. ಸಂದೀಪ್ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ಕಲಾವಿದರು ಬಯಸುತ್ತಿದ್ದಾರೆ. ಆದರೆ ನಟಿ ಕಂಗನಾ ರಣಾವತ್​ (Kangana Ranaut) ಅವರು ಈ ವಿಚಾರದಲ್ಲಿ ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕಡೆಯಿಂದ ಬಂದ ಆಫರ್​ ಅನ್ನು ಕಂಗನಾ ನೇರವಾಗಿ ತಿರಸ್ಕರಿಸಿದ್ದಾರೆ. ಅಲ್ಲದೇ, ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.

‘ಅನಿಮಲ್​’ ಸಿನಿಮಾವನ್ನು ವೀಕ್ಷಿಸಿದ ಬಳಿಕ ಕಂಗನಾ ರಣಾವತ್​ ಅವರು ತಮ್ಮ ವಿಮರ್ಶೆ ತಿಳಿಸಿದ್ದರು. ಈ ಸಿನಿಮಾ ಸ್ತ್ರೀ ವಿರೋಧಿಯಾಗಿದೆ ಎಂದು ಅವರು ಹೇಳಿದ್ದರು. ಆದರೂ ಕೂಡ ಅವರ ವಿಮರ್ಶೆಯನ್ನು ಸಂದೀಪ್​ ಅವರು ಪಾಸಿಟಿವ್​ ಆಗಿ ತೆಗೆದುಕೊಂಡಿದ್ದಾರೆ. ಯಾಕೆಂದರೆ, ಕಂಗನಾ ಅವರ ಪ್ರತಿಭೆಯ ಬಗ್ಗೆ ಸಂದೀಪ್​ಗೆ ಅಭಿಮಾನ ಇದೆ. ಕಂಗನಾ ನಟನೆಯ ಸಿನಿಮಾಗಳನ್ನು ಸಂದೀಪ್ ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ನಿರ್ದೇಶಕನ ಹೆಂಡತಿ ಮೇಲೆ ಸರಣಿ ಆರೋಪ ಮಾಡಿದ ಕಂಗನಾ ರಣಾವತ್​

‘ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ ಅವರ ಬಳಿ ಹೋಗಿ ಕಥೆ ಹೇಳುತ್ತೇನೆ. ‘ಕ್ವೀನ್​’ ಮತ್ತು ಇತರೆ ಸಿನಿಮಾಗಳಲ್ಲಿ ಅವರ ನಟನೆಯನ್ನು ನಾನು ಇಷ್ಟಪಟ್ಟಿದ್ದೇನೆ. ನನ್ನ ‘ಅನಿಮಲ್​’ ಚಿತ್ರದ ಬಗ್ಗೆ ಅವರು ನೆಗೆಟಿವ್​ ಕಮೆಂಟ್​ ಮಾಡಿದ್ದರೂ ನನಗೆ ಕೋಪ ಬರುವುದಿಲ್ಲ. ರಾಜಕೀಯವಾಗಿ ಸರಿ-ತಪ್ಪು ಬಗ್ಗೆ ನಾನು ಮಾತನಾಡುತ್ತಿಲ್ಲ. ಒಟ್ಟಿನಲ್ಲಿ ಅವರ ಪರ್ಫಾರ್ಮೆನ್ಸ್​ ನನಗೆ ನಿಜಕ್ಕೂ ಇಷ್ಟವಾಗಿದೆ’ ಎಂದು ಸಂದೀಪ್​ ರೆಡ್ಡಿ ವಂಗ ಹೇಳಿದ್ದಾರೆ.

ಕಂಗನಾ ರಣಾವತ್​ ಟ್ವೀಟ್​:

ಕಂಗನಾ ಪ್ರತಿಕ್ರಿಯೆ:

‘ವಿಮರ್ಶೆ ಮತ್ತು ಟೀಕೆ ಬೇರೆ ಬೇರೆ ಆಗಿರುತ್ತವೆ. ಎಲ್ಲ ಬಗೆಯ ಕಲೆ ಕೂಡ ವಿಮರ್ಶೆಗೆ ಮತ್ತು ಚರ್ಚೆಗೆ ಒಳಪಡಬೇಕು. ಅದು ಸಹಜವಾದ ವಿಷಯ. ಸಂದೀಪ್​ ಅವರು ನನ್ನ ವಿಮರ್ಶೆಗೆ ಗೌರವ ನೀಡಿದ್ದು ನೋಡಿದರೆ ತಿಳಿಯುತ್ತದೆ. ಅವರು ಕೇವಲ ಗಂಡಸುತನದ ಸಿನಿಮಾ ಮಾಡುವುದಷ್ಟೇ ಅಲ್ಲ, ಅವರ ಆ್ಯಟಿಟ್ಯೂಡ್​ ಕೂಡ ಹಾಗೆಯೇ ಇದೆ. ಧನ್ಯವಾದಗಳು ಸರ್​. ಆದರೆ ನೀವು ನನಗೆ ಯಾವುದೇ ಪಾತ್ರ ನೀಡಬೇಡಿ. ನೀಡಿದರೆ ನಿಮ್ಮ ಆಲ್ಫಾ ಮೇಲ್​ ಪಾತ್ರಗಳು ಸ್ತ್ರೀವಾದಿ ಆಗಿಬಿಡುತ್ತವೆ. ಆಗ ನಿಮ್ಮ ಸಿನಿಮಾಗಳು ಸೋಲುತ್ತವೆ. ನೀವು ಬ್ಲಾಕ್​ ಬಸ್ಟರ್​ ಸಿನಿಮಾ ಮಾಡುವವರು. ಇಂಡಸ್ಟ್ರಿಗೆ ನಿಮ್ಮ ಅಗತ್ಯ ಇದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್