AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾಗೆ ನೆನಪಾಗುತ್ತಿದೆ ಆಮಿರ್​ ಖಾನ್​ ಜತೆ ಕಳೆದ ಆ ದಿನಗಳು; ಸಂಬಂಧ ಕೆಟ್ಟಿದ್ದಕ್ಕೆ ಕಾರಣ ತಿಳಿಸಿದ ನಟಿ

‘ಕೆಲವೊಮ್ಮೆ ನನಗೆ ಆ ದಿನಗಳು ನೆನಪಾಗುತ್ತವೆ. ಆ ಕಾಲ ಎಲ್ಲಿ ಹೋಯಿತು ಅಂತ ಆಶ್ಚರ್ಯ ಆಗತ್ತೆ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

Kangana Ranaut: ಕಂಗನಾಗೆ ನೆನಪಾಗುತ್ತಿದೆ ಆಮಿರ್​ ಖಾನ್​ ಜತೆ ಕಳೆದ ಆ ದಿನಗಳು; ಸಂಬಂಧ ಕೆಟ್ಟಿದ್ದಕ್ಕೆ ಕಾರಣ ತಿಳಿಸಿದ ನಟಿ
ಕಂಗನಾ ರಣಾವತ್, ಆಮಿರ್ ಖಾನ್
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 19, 2023 | 7:15 AM

ನಟಿ ಕಂಗನಾ ರಣಾವತ್​ (Kangana Ranaut) ಅವರು ಬಾಲಿವುಡ್​ನಲ್ಲಿ ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಇರುವ ಒಳರಾಜಕೀಯವನ್ನು ಅವರು ಬಯಲು ಮಾಡುತ್ತಿದ್ದಾರೆ. ನೆಪೋಟಿಸಂ ವಿರುದ್ಧ ಆಗಾಗ ಕಿಡಿಕಾರುತ್ತಾರೆ. ಗುಂಪುಗಾರಿಕೆ ಕಂಡರೂ ಅವರು ಉರಿದುಬೀಳುತ್ತಾರೆ. ಆದರೆ ಒಂದಷ್ಟು ವರ್ಷಗಳ ಹಿಂದೆ ವಾತಾವರಣ ಹೀಗಿರಲಿಲ್ಲ. ಬಹುತೇಕ ಎಲ್ಲರ ಜೊತೆ ಕಂಗನಾ ಅವರು ಸ್ನೇಹಪೂರ್ವಕವಾಗಿ ನಡೆದುಕೊಳ್ಳುತ್ತಿದ್ದರು. ಆಮಿರ್ ಖಾನ್​ ಜೊತೆಗೂ ಕಂಗನಾ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. ಆದರೆ ನಂತರದ ದಿನಗಳಲ್ಲಿ ಅವರ ಸ್ನೇಹ ಅಂತ್ಯವಾಯ್ತು. ಆ ದಿನಗಳನ್ನು ಈಗ ಕಂಗನಾ ಮತ್ತೆ ನೆನಪು ಮಾಡಿಕೊಂಡಿದ್ದಾರೆ. ಅಂದಹಾಗೆ, ಆಮಿರ್​ ಖಾನ್​ (Aamir Khan) ಜೊತೆಗಿನ ತಮ್ಮ ಗೆಳೆತನ ಕೊನೆಯಾಗಲು ಹೃತಿಕ್​ ರೋಷನ್​ (Hrithik Roshan) ಕಾರಣ ಎಂಬುದನ್ನು ಕೂಡ ಅವರು ಹೇಳಿದ್ದಾರೆ.

ಈ ಹಿಂದೆ ಆಮಿರ್​ ಖಾನ್​ ಅವರು ‘ಸತ್ಯಮೇವ ಜಯತೆ’ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಅದರಲ್ಲಿ ಕಂಗನಾ ರಣಾವತ್​ ಕೂಡ ಭಾಗಿಯಾಗಿದ್ದರು. ಆ ವಿಡಿಯೋವನ್ನು ಈಗ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಕಂಗನಾ ಶೇರ್​ ಮಾಡಿಕೊಂಡಿದ್ದಾರೆ. ‘ಕೆಲವೊಮ್ಮೆ ನನಗೆ ಆ ದಿನಗಳು ನೆನಪಾಗುತ್ತವೆ. ಆಮಿರ್​ ಖಾನ್​ ಅವರು ನನ್ನ ಬೆಸ್ಟ್​ ಫ್ರೆಂಡ್​ ಆಗಿದ್ದರು. ಆ ಕಾಲ ಎಲ್ಲಿ ಹೋಯಿತು ಅಂತ ಆಶ್ಚರ್ಯ ಆಗತ್ತೆ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

ತಬ್ಬಿಕೊಂಡು ರಾಜಿಯಾದ ಪ್ರಿಯಾಂಕಾ-ಕರಣ್​ ಜೋಹರ್​; ಮಧ್ಯ ಮಾತಾಡಿ ನಿಷ್ಠುರವಾಗಿದ್ದು ಕಂಗನಾ

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

‘ಒಂದಂತೂ ಖಚಿತ. ಆಮಿರ್​ ಖಾನ್​ ಅವರು ನನಗೆ ಮಾರ್ಗದರ್ಶನ ಮಾಡಿದರು. ನನ್ನ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು. ಆಯ್ಕೆಗಳ ವಿಚಾರದಲ್ಲಿ ನನ್ನನ್ನು ತಿದ್ದಿದರು. ಇದೆಲ್ಲವೂ ಆಗಿದ್ದು ಹೃತಿಕ್​ ರೋಷನ್​ ನನ್ನ ವಿರುದ್ಧ ಕೇಸ್​ ಹಾಕುವುದಕ್ಕೂ ಮುನ್ನ. ಆ ಬಳಿಕ ಅವರೆಲ್ಲರ ಉದ್ದೇಶ ಸ್ಪಷ್ಟವಾಯಿತು. ಇಡೀ ಚಿತ್ರರಂಗದ ವಿರು​ದ್ಧ ಒಬ್ಬಳೇ ಮಹಿಳೆಯಾಗಿ ನಿಂತುಕೊಂಡೆ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

Kangana Ranaut: ಎಲ್ಲರ ಬಳಿ ಕ್ಷಮೆ ಕೇಳಿದ ಕಂಗನಾ ರಣಾವತ್​; ಬರ್ತ್​ಡೇ ದಿನವೇ ಬದಲಾಯಿತು ಮನಸ್ಸು

ಹೃತಿಕ್​ ರೋಷನ್​ ಮತ್ತು ಕಂಗನಾ ರಣಾವತ್​ ಅವರು ಡೇಟಿಂಗ್​ ಮಾಡುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಇಬ್ಬರ ನಡುವೆ ಬಿರುಕು ಮೂಡಿತು. ಕಂಗನಾ ಜೊತೆಗಿನ ಸಂಬಂಧವನ್ನು ಹೃತಿಕ್​ ರೋಷನ್​ ಬಹಿರಂಗವಾಗಿ ಒಪ್ಪಿಕೊಳ್ಳಲಿಲ್ಲ. ಬಳಿಕ ಇಬ್ಬರ ಜಗಳ ಕಾನೂನಿನ ಸಮರವಾಗಿ ಮಾರ್ಪಟ್ಟಿತು. ಆ ನಂತರ ಬಾಲಿವುಡ್​ನ ಬಹುತೇಕ ಸೆಲೆಬ್ರಿಟಿಗಳು ತಮ್ಮಿಂದ ದೂರವಾದರು ಎಂಬುದು ಕಂಗನಾ ವಾದ.

ಪ್ರಸ್ತುತ ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?