AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ

ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆ ಆಗಿರುವ ಕಂಗನಾ ರಣಾವತ್​ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟನೆಯ ಹಿಂದಿರುವ ಅಸಲಿ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on:Jun 06, 2024 | 6:20 PM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರ ಬಗ್ಗೆ ಒಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ನೂತನ ಸಂಸದೆ ಆಗಿರುವ ಅವರು ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿಯಾಗಿ ಚುನಾವಣೆಗೆ (Lok Sabha Election) ಸ್ಪರ್ಧಿಸಿದ್ದ ಕಂಗನಾ ಜಯ ಸಾಧಿಸಿದ್ದಾರೆ. ಸಂಸದೆ ಆಗಿರುವ ಖುಷಿಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ತಲುಪಿದ ಕೂಡಲೇ ಕಂಗನಾ ರಣಾವತ್​ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕರಾದ ನೀನಾ ಸಿಂಗ್​ ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದ ನಿರ್ಬಂಧಿತ ಸ್ಥಳದಲ್ಲಿ ತಾವು ನಿಂತಿದ್ದಾಗ ಸಿಐಎಸ್​ಎಫ್​ ಮಹಿಳಾ ಕಾನ್ಸ್​ಟೇಬಲ್​ ಬಂದು ಕಪಾಳಕ್ಕೆ ಹೊಡೆದರು ಎಂದು ಕಂಗನಾ ರಣಾವತ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾಗೆ ಗೆಲುವು; ಮೊದಲ ಪ್ರಯತ್ನದಲ್ಲಿ ಪಡೆದ ಮತಗಳು ಎಷ್ಟು?

ಕಂಗನಾ ರಣಾವತ್​ ಅವರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾದ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ವಿಚಾರಣೆ ನಡೆಯುತ್ತಿದೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ಕಂಗನಾ ರಣಾವತ್​ ಅವರು ಈ ವರ್ಷ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆದರು. ಮೂಲತಃ ಹಿಮಾಚಲ ಪ್ರದೇಶದವರಾದ ಅವರು ಮಂಡಿ ಕ್ಷೇತ್ರದಿಂದ ಟಿಕೆಟ್​ ಪಡೆದರು. ಮೊದಲ ಪ್ರಯತ್ನದಲ್ಲೇ ಅವರು ಸಂಸದೆ ಆಗಿದ್ದಾರೆ. ಕಂಗನಾ ಎದುರು ಚುನಾವಣೆಗೆ ನಿಂತಿದ್ದ ಕಾಂಗ್ರೆಸ್​ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್​ ಅವರು 4,62,267 ಮತಗಳನ್ನು ಪಡೆದರು. 5,37,022 ಮತಗಳನ್ನು ಪಡೆದ ಕಂಗನಾ ಅವರಿಗೆ ಗೆಲುವಿನ ನಗೆ ಬೀರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:52 pm, Thu, 6 June 24

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್