ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ

ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆ ಆಗಿರುವ ಕಂಗನಾ ರಣಾವತ್​ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟನೆಯ ಹಿಂದಿರುವ ಅಸಲಿ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ
ಕಂಗನಾ ರಣಾವತ್​
Follow us
|

Updated on:Jun 06, 2024 | 6:20 PM

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರ ಬಗ್ಗೆ ಒಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ನೂತನ ಸಂಸದೆ ಆಗಿರುವ ಅವರು ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿಯಾಗಿ ಚುನಾವಣೆಗೆ (Lok Sabha Election) ಸ್ಪರ್ಧಿಸಿದ್ದ ಕಂಗನಾ ಜಯ ಸಾಧಿಸಿದ್ದಾರೆ. ಸಂಸದೆ ಆಗಿರುವ ಖುಷಿಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ತಲುಪಿದ ಕೂಡಲೇ ಕಂಗನಾ ರಣಾವತ್​ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕರಾದ ನೀನಾ ಸಿಂಗ್​ ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದ ನಿರ್ಬಂಧಿತ ಸ್ಥಳದಲ್ಲಿ ತಾವು ನಿಂತಿದ್ದಾಗ ಸಿಐಎಸ್​ಎಫ್​ ಮಹಿಳಾ ಕಾನ್ಸ್​ಟೇಬಲ್​ ಬಂದು ಕಪಾಳಕ್ಕೆ ಹೊಡೆದರು ಎಂದು ಕಂಗನಾ ರಣಾವತ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾಗೆ ಗೆಲುವು; ಮೊದಲ ಪ್ರಯತ್ನದಲ್ಲಿ ಪಡೆದ ಮತಗಳು ಎಷ್ಟು?

ಕಂಗನಾ ರಣಾವತ್​ ಅವರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾದ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ವಿಚಾರಣೆ ನಡೆಯುತ್ತಿದೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ಕಂಗನಾ ರಣಾವತ್​ ಅವರು ಈ ವರ್ಷ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆದರು. ಮೂಲತಃ ಹಿಮಾಚಲ ಪ್ರದೇಶದವರಾದ ಅವರು ಮಂಡಿ ಕ್ಷೇತ್ರದಿಂದ ಟಿಕೆಟ್​ ಪಡೆದರು. ಮೊದಲ ಪ್ರಯತ್ನದಲ್ಲೇ ಅವರು ಸಂಸದೆ ಆಗಿದ್ದಾರೆ. ಕಂಗನಾ ಎದುರು ಚುನಾವಣೆಗೆ ನಿಂತಿದ್ದ ಕಾಂಗ್ರೆಸ್​ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್​ ಅವರು 4,62,267 ಮತಗಳನ್ನು ಪಡೆದರು. 5,37,022 ಮತಗಳನ್ನು ಪಡೆದ ಕಂಗನಾ ಅವರಿಗೆ ಗೆಲುವಿನ ನಗೆ ಬೀರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:52 pm, Thu, 6 June 24

ತಾಜಾ ಸುದ್ದಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್