AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ

ನಟಿ ಕಂಗನಾ ರಣಾವತ್​ ಅವರು ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರೀಗ ಮನೆ ಮಾರಾಟ ಮಾಡುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿಗೆ ಮನೆ ಮಾರಿಕೊಳ್ಳುವ ಸ್ಥಿತಿ ಯಾಕೆ ಬಂದಿದೆ ಎಂಬುದು ನೆಟ್ಟಿಗರ ಪ್ರಶ್ನೆ.

ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Aug 04, 2024 | 11:01 PM

Share

ನಟಿಯಾಗಿ ಯಶಸ್ವಿ ಆದ ಬಳಿಕ ಕಂಗನಾ ರಣಾವತ್​ ಅವರು ರಾಜಕೀಯದಲ್ಲೂ ಗೆಲುವು ಕಂಡಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಸಂಸದೆ ಆಗಿದ್ದು, ಸಂಪೂರ್ಣ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ರಾಜಕೀಯಕ್ಕೆ ಸೇರಿದ ಮೇಲೆ ಸಿಕ್ಕಾಪಟ್ಟೆ ಆಸ್ತಿ ಮಾಡಿದವರು ಅನೇಕರಿದ್ದಾರೆ. ಆದರೆ ಕಂಗನಾ ರಣಾವತ್​ ಅವರು ಮನೆ ಮಾರಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಮುಂಬೈನಲ್ಲಿ ಇರುವ ಕಟ್ಟಡವನ್ನು ಕಂಗನಾ ರಣಾವತ್​ ಮಾರಲಿದ್ದಾರೆ ಎಂದು ಗಾಸಿಪ್​ ಹಬ್ಬಿದೆ. ಈ ವಿಷಯ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.

ಹಲವು ವರ್ಷಗಳಿಂದ ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಮುಂಬೈನಲ್ಲಿ ಅವರು ಆಸ್ತಿ ಹೊಂದಿದ್ದರು. ಅದನ್ನು ಅವರೀಗ 40 ಕೋಟಿ ರೂಪಾಯಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಯೂಟ್ಯೂಬ್​ ಚಾನೆಲ್​ವೊಂದರಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕೇವಲ ಕಟ್ಟಡವನ್ನು ಮಾತ್ರ ತೋರಿಸಲಾಗಿದೆ. ಆದರೆ ನಟಿಯ ಹೆಸರನ್ನು ಪ್ರಸ್ತಾಪಿಸಿಲ್ಲ. ಕಟ್ಟಡ ನೋಡಿದರೆ ಅದು ಕಂಗನಾ ರಣಾವತ್​ ಅವರದ್ದೇ ಬಿಲ್ಡಿಂಗ್​ ಎಂಬುದು ಗೊತ್ತಾಗುತ್ತದೆ. ಅನೇಕರು ನಟಿಯ ಹೆಸರನ್ನು ಕಮೆಂಟ್​ ಮಾಡಿದ್ದಾರೆ. ನಿಜಕ್ಕೂ ಕಂಗನಾ ರಣಾವತ್​ ಅವರಿಗೆ ಆಸ್ತಿ ಮಾರಿಕೊಳ್ಳುವ ಸ್ಥಿತಿ ಬಂದಿದೆಯಾ ಎಂಬುದರ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ: ‘ಕಂಗನಾ ಅಂದ್ರೆ ಯಾರು? ಸುಂದರಿಯೇ?’: ಖ್ಯಾತ ನಟ ಅನ್ನು ಕಪೂರ್ ಪ್ರಶ್ನೆ

ಕಂಗನಾ ರಣಾವತ್​ ಅವರ ಇದೇ ಕಟ್ಟಡ ಈ ಮೊದಲು ಕೂಡ ಸುದ್ದಿ ಆಗಿತ್ತು. ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕಟ್ಟಡವನ್ನು ವಿಸ್ತರಿಸಲಾಗಿತ್ತು ಎಂಬ ಕಾರಣಕ್ಕೆ ಮುಂಬೈ ಪಾಲಿಕೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದರು. ಅದರ ವಿರುದ್ಧ ಕಂಗನಾ ಗರಂ ಆಗಿದ್ದರು. ಆ ಕಾರಣದಿಂದ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ಕಟ್ಟಡ ಈಗ ಮಾರಾಟಕ್ಕೆ ಇದೆ ಎಂಬುದು ತಿಳಿದು ಅಭಿಮಾನಿಗಳಿಗೆ ಶಾಕ್​ ಆಗಿದೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ಕಂಗನಾ ಅವರು ‘ಎಮರ್ಜೆಸ್ಸಿ’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ