AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ವ್ಯಾನಿಟಿ ವ್ಯಾನ್​ಗಾಗಿ 65 ಲಕ್ಷ ರೂಪಾಯಿ ಖರ್ಚು ಮಾಡಿದ ಕಂಗನಾ ರಣಾವತ್​; ಏನಿದರ ವಿಶೇಷ?

Kangana Ranaut Vanity Van: ಪಕ್ಕಾ ಸಾಂಪ್ರದಾಯಿಕ ಶೈಲಿಯಲ್ಲಿ ಕಂಗನಾ ರಣಾವತ್​ ಅವರ ವ್ಯಾನಿಟಿ ವ್ಯಾನ್​ ಇದೆ. ಇದರ ಒಳಾಂಗಣ ವಿನ್ಯಾಸ ನೋಡಿದರೆ ಅವರ ಮನೆಯನ್ನು ನೋಡಿದಂತೆ ಆಗುತ್ತದೆ.

Kangana Ranaut: ವ್ಯಾನಿಟಿ ವ್ಯಾನ್​ಗಾಗಿ 65 ಲಕ್ಷ ರೂಪಾಯಿ ಖರ್ಚು ಮಾಡಿದ ಕಂಗನಾ ರಣಾವತ್​; ಏನಿದರ ವಿಶೇಷ?
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: Mar 20, 2023 | 7:30 AM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಿರುತ್ತಾರೆ. ನಟಿ, ನಿರ್ದೇಶಕಿ, ನಿರ್ಮಾಪಕಿ ಆಗಿಯೂ ಅವರು ಗುರುತಿಸಿಕೊಂಡಿದ್ದಾರೆ. ವಿವಾದಗಳು ಕೂಡ ಅವರಿಗೆ ಹೊಸದೇನೂ ಅಲ್ಲ. ಈಗ ಬೇರೊಂದು ಕಾರಣಕ್ಕೆ ಅವರ ಬಗ್ಗೆ ಚರ್ಚೆ ಆಗುತ್ತಿದೆ. ಅದು ಅವರ ವ್ಯಾನಿಟಿ ವ್ಯಾನ್​ (Vanity Van) ವಿಚಾರ. ಹೌದು, ವ್ಯಾನಿಟಿ ವ್ಯಾನ್​ಗಾಗಿ ಕಂಗನಾ ರಣಾವತ್​ ಅವರು ಬರೋಬ್ಬರಿ 65 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಸುದ್ದಿ ಆಗಿದೆ. ನಟ-ನಟಿಯರು, ಸ್ಟಾರ್​ ನಿರ್ದೇಶಕರು ಶೂಟಿಂಗ್​ ಸ್ಥಳದಲ್ಲಿ ವಿಶ್ರಾಂತಿ ಪಡೆಯಲು ಮತ್ತು ಮೇಕಪ್​ ಮಾಡಿಕೊಳ್ಳಲು ಬಳಸುವ ವಾಹನಕ್ಕೆ ವ್ಯಾನಿಟಿ ವ್ಯಾನ್​ ಎನ್ನುತ್ತಾರೆ. ಕಂಗನಾ ರಣಾವತ್​ ಅವರು ಬಳಸುವ ವ್ಯಾನಿಟಿ ವ್ಯಾನ್​ (Kangana Ranaut Vanity Van) ಸಾಕಷ್ಟು ವಿಶೇಷತೆಗಳಿಂದ ಕೂಡಿದೆ.

ಬಾಲಿವುಡ್​ನಲ್ಲಿ ಸ್ಟಾರ್​ ನಟಿಯಾಗಿ ಕಂಗನಾ ರಣಾವತ್​ ಅವರು ಗುರುತಿಸಿಕೊಂಡಿದ್ದಾರೆ. ಸಾಲು ಸಾಲು ಸಿನಿಮಾಗಳು ಸೋತರೂ ಕೂಡ ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಸೈದ್ಧಾಂತಿಕ ಕಾರಣದಿಂದ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಅದೇನೇ ಇರಲಿ, ಕಂಗನಾ ಅವರನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ. ಅತಿ ದುಬಾರಿ ವ್ಯಾನಿಟಿ ವ್ಯಾನ್​ ಹೊಂದಿರುವ ಬಾಲಿವುಡ್​ ಸ್ಟಾರ್​ಗಳ ಪೈಕಿ ಕಂಗನಾ ರಣಾವತ್​ ಹೆಸರು ಕೂಡ ಮುಂಚೂಣಿಯಲ್ಲಿದೆ.

ಇದನ್ನೂ ಓದಿ: Kangana Ranaut: ದೀಪಿಕಾ ಪಡುಕೋಣೆ ವಿಚಾರದಲ್ಲಿ ಕಂಗನಾ ರಣಾವತ್​ ದ್ವಂದ್ವ ನೀತಿ; ಸ್ವಷ್ಟನೆ ನೀಡಿದ ನಟಿ

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ನಗರ ಪ್ರದೇಶದಿಂದ ದೂರು ಇರುವ ಸ್ಥಳಗಳಲ್ಲಿ ಚಿತ್ರೀಕರಣ ಮಾಡುವಾಗ ನಟಿಯರಿಗೆ ಕೆಲವು ಅನಾನುಕೂಲಗಳು ಆಗುತ್ತವೆ. ಆ ಬಗ್ಗೆ ಕಂಗನಾ ರಣಾವತ್​ ಅವರು ಕೆಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದುಂಟು. ಅಂಥ ಕಿರಿಕಿರಿಗಳನ್ನು ತಪ್ಪಿಸಲು ಹಾಗೂ ಚಿಂತೆಯಿಲ್ಲದೇ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲು ಸುಸಜ್ಜಿತವಾದ ವ್ಯಾನಿಟಿ ವ್ಯಾನ್​ ಇಟ್ಟುಕೊಳ್ಳಲಾಗುತ್ತದೆ. ಅದಕ್ಕಾಗಿ ಕಂಗನಾ ರಣಾವತ್​ ಅವರು 65 ಲಕ್ಷ ರೂಪಾಯಿ ವಿನಿಯೋಗಿಸಿದ್ದಾರೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ವಾಟ್ಸಪ್​ ಮೆಸೇಜ್​ ಲೀಕ್​; ಸ್ಟಾರ್​ ದಂಪತಿ ಮೇಲೆ ಅನುಮಾನ

ಪಕ್ಕಾ ಸಾಂಪ್ರದಾಯಿಕ ಶೈಲಿಯಲ್ಲಿ ಕಂಗನಾ ರಣಾವತ್​ ಅವರ ವ್ಯಾನಿಟಿ ವ್ಯಾನ್​ ಇದೆ. ಇದರ ಒಳಾಂಗಣ ವಿನ್ಯಾಸ ನೋಡಿದರೆ ಅವರ ಮನೆಯನ್ನು ನೋಡಿದಂತೆ ಆಗುತ್ತದೆ. ಮರದ ಕೆತ್ತನೆಗಳನ್ನು ಹೊಂದಿರುವ ಸೋಫಾ ಮತ್ತು ಕುರ್ಚಿಗಳು ಈ ವಾಹನದಲ್ಲಿವೆ. ಶೂಟಿಂಗ್​ಗೆ ತೆರಳಿದಾಗಲೂ ಕೂಡ ಮನೆಯಲ್ಲಿ ಇರುವಂತಹ ಕಂಫರ್ಟ್​ ಸಿಗಬೇಕು ಎಂಬ ಉದ್ದೇಶದಿಂದ ಈ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದರಲ್ಲಿ ಬಳಸುವ ಎಲ್ಲ ವಸ್ತುಗಳ ಬ್ರ್ಯಾಂಡ್​ಗಳನ್ನು ಕೂಡ ಕಂಗನಾ ಅವರೇ ಆಯ್ಕೆ ಮಾಡುತ್ತಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಕಂಗನಾ ಅವರು ಈಗ ‘ಎಮರ್ಜೆನ್ಸಿ’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ಅವರೇ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಇಂದಿರಾ ಗಾಂಧಿಯ ಪಾತ್ರಕ್ಕೆ ಕಂಗನಾ ಬಣ್ಣ ಹಚ್ಚಿದ್ದು, ನಿರ್ಮಾಣದಲ್ಲೂ ಪಾಲುದಾರಿಕೆ ಹೊಂದಿದ್ದಾರೆ. ಆಸ್ತಿ-ಮನೆಯನ್ನು ಅಡವಿಟ್ಟು ಈ ಚಿತ್ರಕ್ಕೆ ಹಣ ಹೂಡಿರುವುದಾಗಿ ಅವರು ಈ ಹಿಂದೆ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ