AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ

‘ಹೊಸ ಯುಗದ ಸಿನಿಮಾ ಎಂಬ ಹೆಸರಿನಲ್ಲಿ ತ್ಯಾಜ್ಯವನ್ನೆಲ್ಲ ಮಾರಾಟ ಮಾಡಬೇಡಿ. ಕೆಟ್ಟ ಸಿನಿಮಾ ಯಾವಾಗಲೂ ಕೆಟ್ಟ ಸಿನಿಮಾವೇ ಆಗಿರುತ್ತದೆ’ ಎಂದು ಕಂಗನಾ ರಣಾವತ್​ ಟೀಕಿಸಿದ್ದಾರೆ.

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ
ಕಂಗನಾ ರಣಾವತ್, ದೀಪಿಕಾ ಪಡುಕೋಣೆ, ಸಿದ್ದಾಂತ್ ಚತುರ್ವೇದಿ
TV9 Web
| Updated By: ಮದನ್​ ಕುಮಾರ್​|

Updated on: Feb 13, 2022 | 9:13 AM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ ಎಂಬುದನ್ನು ಸುಲಭವಾಗಿ ಹೇಳಬಹುದು. ಅವರ ಪ್ರತಿ ಮಾತುಗಳು ಕೂಡ ವಿವಾದವನ್ನು ಹುಟ್ಟು ಹಾಕುತ್ತವೆ. ಬಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳನ್ನೂ ಕಂಗನಾ ಎದುರು ಹಾಕಿಕೊಂಡಿದ್ದಾರೆ. ಈಗ ಅವರು ದೀಪಿಕಾ ಪಡುಕೋಣೆ (Deepika Padukone) ಬಗ್ಗೆ ವ್ಯಂಗ್ಯವಾಡಿದ್ದಾರೆ. ದೀಪಿಕಾ ನಟನೆಯ ‘ಗೆಹರಾಯಿಯಾ’ ಸಿನಿಮಾ (Gehraiyaan Movie) ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಬೋಲ್ಡ್​ ದೃಶ್ಯಗಳು ಇವೆ ಎಂಬ ಕಾರಣಕ್ಕೆ ಕೆಲವರು ‘ಗೆಹರಾಯಿಯಾ’ ಸಿನಿಮಾ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ. ಕಂಗನಾ ರಣಾವತ್​ ಕೂಡ ‘ಗೆಹರಾಯಿಯಾ’ ಸಿನಿಮಾವನ್ನು ಟೀಕಿಸಿದ್ದಾರೆ. ಅದು ಕೂಡ ಖಾರದ ಮಾತುಗಳಲ್ಲಿ. ‘ಇದೊಂದು ಕೆಟ್ಟ ಸಿನಿಮಾ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ದೀಪಿಕಾ ಪಡುಕೋಣೆ ಅಭಿಮಾನಿಗಳ ಕೋಪಕ್ಕೆ ಗುರಿ ಆಗಿದ್ದಾರೆ.

‘ಗೆಹರಾಯಿಯಾ’ ಚಿತ್ರಕ್ಕೆ ಶಕುನ್​ ಭಾತ್ರ ನಿರ್ದೇಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಜೊತೆಗೆ ಸಿದ್ಧಾಂತ್​ ಚರ್ತುವೇದಿ, ಅನನ್ಯಾ ಪಾಂಡೆ, ಧೈರ್ಯ ಕರ್ವ ಮುಂತಾದವರು ನಟಿಸಿದ್ದಾರೆ. ದೀಪಿಕಾ ಮತ್ತು ಸಿದ್ಧಾಂತ್​ ನಡುವಿನ ಕಿಸ್ಸಿಂಗ್​ ಮತ್ತು ಇಂಟಿಮೇಟ್​ ದೃಶ್ಯಗಳು ಅನೇಕರ ಕಣ್ಣು ಕುಕ್ಕಿವೆ. ಇದು ಹೊಸ ಯುಗದ ಸಿನಿಮಾ ಎಂದು ಕೆಲವರು ಬ್ರ್ಯಾಂಡ್​ ಮಾಡಿದ್ದಾರೆ. ಅದೇ ವಿಚಾರವನ್ನು ಇಟ್ಟುಕೊಂಡು ಕಂಗನಾ ರಣಾವತ್​ ಕುಟುಕಿದ್ದಾರೆ.

ಫೆ.11ರಂದು ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ‘ಗೆಹರಾಯಿಯಾ’ ಚಿತ್ರ ರಿಲೀಸ್​ ಆಯಿತು. ಒಂದು ದಿನದ ಬಳಿಕ, ಅಂದರೆ ಫೆ.12ರ ರಾತ್ರಿ ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿರುವ ಕೆಲವು ಸಾಲುಗಳು ಸಖತ್​ ವೈರಲ್​ ಆಗುತ್ತಿವೆ. ‘ನಾನೂ ಕೂಡ ಈ ಕಾಲದವಳು. ಈ ಬಗೆಯ ರೊಮ್ಯಾನ್ಸ್​ ಅನ್ನು ಗುರುತಿಸಿ, ಅರ್ಥ ಮಾಡಿಕೊಳ್ಳಬಲ್ಲೆ. ಹೊಸ ಯುಗದ ಸಿನಿಮಾ, ನಗರ ಪ್ರದೇಶದ ಸಿನಿಮಾ ಎಂಬ ಹೆಸರಿನಲ್ಲಿ ತ್ಯಾಜ್ಯವನ್ನೆಲ್ಲ ಮಾರಾಟ ಮಾಡಬೇಡಿ. ಕೆಟ್ಟ ಸಿನಿಮಾ ಯಾವಾಗಲೂ ಕೆಟ್ಟ ಸಿನಿಮಾವೇ ಆಗಿರುತ್ತದೆ. ಎಷ್ಟೇ ಪ್ರಮಾಣದಲ್ಲಿ ಅಶ್ಲೀಲತೆ ಮತ್ತು ಮೈ ತೋರಿಸಿದರೂ ಈ ಸಿನಿಮಾವನ್ನು ಗೆಲ್ಲಿಸಲು ಸಾಧ್ಯವಿಲ್ಲ. ಇದು ಬೇಸಿಕ್​ ಸತ್ಯ. ಯಾವುದೇ ಆಳವಾದ (ಗೆಹರಾಯಿಯಾ) ವಿಷಯ ಅಲ್ಲ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್​. ಖಾನ್​ ಅವರು ಕೂಡ ‘ಗೆಹರಾಯಿಯಾ’ ಚಿತ್ರವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಅವರು​, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ‘ಗೆಹರಾಯಿಯಾ ಚಿತ್ರ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​. ಖಾನ್ ಬರೆದುಕೊಂಡಿದ್ದಾರೆ. ಈ ಮಾತನ್ನು ಕೆಲವರು ವಿರೋಧಿಸಿದ್ದು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

ಪತ್ರಕರ್ತರಿಗೆ ಖಡಕ್​ ತಿರುಗೇಟು ಕೊಟ್ಟ ಕಂಗನಾ; ದೀಪಿಕಾ ಬಟ್ಟೆ ಬಗ್ಗೆ ಮಾತಾಡಲು ಬಂದವರು ಗಪ್​ಚುಪ್​

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ