AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ

‘ಹೊಸ ಯುಗದ ಸಿನಿಮಾ ಎಂಬ ಹೆಸರಿನಲ್ಲಿ ತ್ಯಾಜ್ಯವನ್ನೆಲ್ಲ ಮಾರಾಟ ಮಾಡಬೇಡಿ. ಕೆಟ್ಟ ಸಿನಿಮಾ ಯಾವಾಗಲೂ ಕೆಟ್ಟ ಸಿನಿಮಾವೇ ಆಗಿರುತ್ತದೆ’ ಎಂದು ಕಂಗನಾ ರಣಾವತ್​ ಟೀಕಿಸಿದ್ದಾರೆ.

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ
ಕಂಗನಾ ರಣಾವತ್, ದೀಪಿಕಾ ಪಡುಕೋಣೆ, ಸಿದ್ದಾಂತ್ ಚತುರ್ವೇದಿ
TV9 Web
| Edited By: |

Updated on: Feb 13, 2022 | 9:13 AM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ ಎಂಬುದನ್ನು ಸುಲಭವಾಗಿ ಹೇಳಬಹುದು. ಅವರ ಪ್ರತಿ ಮಾತುಗಳು ಕೂಡ ವಿವಾದವನ್ನು ಹುಟ್ಟು ಹಾಕುತ್ತವೆ. ಬಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳನ್ನೂ ಕಂಗನಾ ಎದುರು ಹಾಕಿಕೊಂಡಿದ್ದಾರೆ. ಈಗ ಅವರು ದೀಪಿಕಾ ಪಡುಕೋಣೆ (Deepika Padukone) ಬಗ್ಗೆ ವ್ಯಂಗ್ಯವಾಡಿದ್ದಾರೆ. ದೀಪಿಕಾ ನಟನೆಯ ‘ಗೆಹರಾಯಿಯಾ’ ಸಿನಿಮಾ (Gehraiyaan Movie) ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಬೋಲ್ಡ್​ ದೃಶ್ಯಗಳು ಇವೆ ಎಂಬ ಕಾರಣಕ್ಕೆ ಕೆಲವರು ‘ಗೆಹರಾಯಿಯಾ’ ಸಿನಿಮಾ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ. ಕಂಗನಾ ರಣಾವತ್​ ಕೂಡ ‘ಗೆಹರಾಯಿಯಾ’ ಸಿನಿಮಾವನ್ನು ಟೀಕಿಸಿದ್ದಾರೆ. ಅದು ಕೂಡ ಖಾರದ ಮಾತುಗಳಲ್ಲಿ. ‘ಇದೊಂದು ಕೆಟ್ಟ ಸಿನಿಮಾ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ದೀಪಿಕಾ ಪಡುಕೋಣೆ ಅಭಿಮಾನಿಗಳ ಕೋಪಕ್ಕೆ ಗುರಿ ಆಗಿದ್ದಾರೆ.

‘ಗೆಹರಾಯಿಯಾ’ ಚಿತ್ರಕ್ಕೆ ಶಕುನ್​ ಭಾತ್ರ ನಿರ್ದೇಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಜೊತೆಗೆ ಸಿದ್ಧಾಂತ್​ ಚರ್ತುವೇದಿ, ಅನನ್ಯಾ ಪಾಂಡೆ, ಧೈರ್ಯ ಕರ್ವ ಮುಂತಾದವರು ನಟಿಸಿದ್ದಾರೆ. ದೀಪಿಕಾ ಮತ್ತು ಸಿದ್ಧಾಂತ್​ ನಡುವಿನ ಕಿಸ್ಸಿಂಗ್​ ಮತ್ತು ಇಂಟಿಮೇಟ್​ ದೃಶ್ಯಗಳು ಅನೇಕರ ಕಣ್ಣು ಕುಕ್ಕಿವೆ. ಇದು ಹೊಸ ಯುಗದ ಸಿನಿಮಾ ಎಂದು ಕೆಲವರು ಬ್ರ್ಯಾಂಡ್​ ಮಾಡಿದ್ದಾರೆ. ಅದೇ ವಿಚಾರವನ್ನು ಇಟ್ಟುಕೊಂಡು ಕಂಗನಾ ರಣಾವತ್​ ಕುಟುಕಿದ್ದಾರೆ.

ಫೆ.11ರಂದು ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ‘ಗೆಹರಾಯಿಯಾ’ ಚಿತ್ರ ರಿಲೀಸ್​ ಆಯಿತು. ಒಂದು ದಿನದ ಬಳಿಕ, ಅಂದರೆ ಫೆ.12ರ ರಾತ್ರಿ ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿರುವ ಕೆಲವು ಸಾಲುಗಳು ಸಖತ್​ ವೈರಲ್​ ಆಗುತ್ತಿವೆ. ‘ನಾನೂ ಕೂಡ ಈ ಕಾಲದವಳು. ಈ ಬಗೆಯ ರೊಮ್ಯಾನ್ಸ್​ ಅನ್ನು ಗುರುತಿಸಿ, ಅರ್ಥ ಮಾಡಿಕೊಳ್ಳಬಲ್ಲೆ. ಹೊಸ ಯುಗದ ಸಿನಿಮಾ, ನಗರ ಪ್ರದೇಶದ ಸಿನಿಮಾ ಎಂಬ ಹೆಸರಿನಲ್ಲಿ ತ್ಯಾಜ್ಯವನ್ನೆಲ್ಲ ಮಾರಾಟ ಮಾಡಬೇಡಿ. ಕೆಟ್ಟ ಸಿನಿಮಾ ಯಾವಾಗಲೂ ಕೆಟ್ಟ ಸಿನಿಮಾವೇ ಆಗಿರುತ್ತದೆ. ಎಷ್ಟೇ ಪ್ರಮಾಣದಲ್ಲಿ ಅಶ್ಲೀಲತೆ ಮತ್ತು ಮೈ ತೋರಿಸಿದರೂ ಈ ಸಿನಿಮಾವನ್ನು ಗೆಲ್ಲಿಸಲು ಸಾಧ್ಯವಿಲ್ಲ. ಇದು ಬೇಸಿಕ್​ ಸತ್ಯ. ಯಾವುದೇ ಆಳವಾದ (ಗೆಹರಾಯಿಯಾ) ವಿಷಯ ಅಲ್ಲ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್​. ಖಾನ್​ ಅವರು ಕೂಡ ‘ಗೆಹರಾಯಿಯಾ’ ಚಿತ್ರವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಈ ಸಿನಿಮಾ ಸಾಫ್ಟ್​ ಪೋರ್ನ್​ ಎಂದು ಹೀಗಳೆದಿರುವ ಅವರು​, ದೀಪಿಕಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ‘ಗೆಹರಾಯಿಯಾ ಚಿತ್ರ ದೀಪಿಕಾ ಪಡುಕೋಣೆ ಅವರ ಬಯೋಪಿಕ್​. ಏಕೆಂದರೆ ಅವರು ಹಣವನ್ನು ಮಾತ್ರ ಇಷ್ಪಡುತ್ತಾರೆ’ ಎಂದು ಕಮಾಲ್​ ಆರ್​. ಖಾನ್ ಬರೆದುಕೊಂಡಿದ್ದಾರೆ. ಈ ಮಾತನ್ನು ಕೆಲವರು ವಿರೋಧಿಸಿದ್ದು, ಕಮಾಲ್​ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

ಪತ್ರಕರ್ತರಿಗೆ ಖಡಕ್​ ತಿರುಗೇಟು ಕೊಟ್ಟ ಕಂಗನಾ; ದೀಪಿಕಾ ಬಟ್ಟೆ ಬಗ್ಗೆ ಮಾತಾಡಲು ಬಂದವರು ಗಪ್​ಚುಪ್​

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ