AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ

ಕಂಗನಾ ರಣಾವತ್ ಸದ್ಯ ‘ಧಾಕಡ್​’ ಸಿನಿಮಾ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನ ಅನೇಕ ಸಿನಿಮಾಗಳು ಸೋಲು ಕಾಣುತ್ತಿವೆ. ಈ ಸಂದರ್ಭದಲ್ಲಿ ಅವರು ಈ ಚಿತ್ರದ ಮೂಲಕ ಗೆಲುವು ಕಾಣುವ ತವಕದಲ್ಲಿದ್ದಾರೆ.

ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ
ಕಂಗನಾ
TV9 Web
| Edited By: |

Updated on: May 17, 2022 | 2:49 PM

Share

ಕಂಗನಾ ರಣಾವತ್​ಗೂ (Kangana Ranaut) ಕಾಂಟ್ರವರ್ಸಿಗೂ ಎಲ್ಲಿಲ್ಲದ ನಂಟು. ಅವರು ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಬಾಲಿವುಡ್​ನಲ್ಲೇ ಇದ್ದರೂ ಬಾಲಿವುಡ್​ನ (Bollywood) ಬಹುತೇಕರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಹಾಗಂದ ಮಾತ್ರಕ್ಕೆ ಅವರು ಮುಖವಾಡ ಹಾಕಿಕೊಂಡು ತಿರುಗಾಡುವುದಿಲ್ಲ. ಸತ್ಯ ಅದೆಷ್ಟೇ ಕಹಿ ಇದ್ದರೂ ಮುಖಕ್ಕೆ ಹೊಡೆದಂತೆ ಹೇಳಿ ಬರುತ್ತಾರೆ. ಈಗ ಕಂಗನಾ ಬಾಲಿವುಡ್​ ವಿಚಾರವಾಗಿ ಮಾತನಾಡಿದ್ದಾರೆ. ಇಂಡಸ್ಟ್ರಿಯಲ್ಲಿ ತಮಗೆ ಯಾರೂ ಗೆಳೆಯರಿಲ್ಲ ಎಂಬುದನ್ನು ಓಪನ್ ಆಗಿಯೇ ಹೇಳಿದ್ದಾರೆ.

ಕಂಗನಾ ರಣಾವತ್ ಸದ್ಯ ‘ಧಾಕಡ್​’ ಸಿನಿಮಾ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಅರ್ಜುನ್​ ರಾಮ್​ಪಾಲ್​ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಬಾಲಿವುಡ್​ನ ಅನೇಕ ಸಿನಿಮಾಗಳು ಸೋಲು ಕಾಣುತ್ತಿವೆ. ಈ ಸಂದರ್ಭದಲ್ಲಿ ಅವರು ಈ ಚಿತ್ರದ ಮೂಲಕ ಗೆಲುವು ಕಾಣುವ ತವಕದಲ್ಲಿದ್ದಾರೆ. ಸಿನಿಮಾ ಪ್ರಚಾರದ ವೇಳೆ ಕಂಗನಾ ನಾನಾ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ‘ಬಾಲಿವುಡ್​ನಲ್ಲಿ ನನಗಾಗಿ ಯಾರೂ ಇಲ್ಲ’ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ಕಂಗನಾ ಸಂದರ್ಶನ ನೀಡಿದ್ದಾರೆ. ‘ಬಾಲಿವುಡ್​ನ ಮೂವರನ್ನು ಮನೆಗೆ ಊಟಕ್ಕೆ ಕರೆಯುವುದಾದರೆ ಅವರು ಯಾರ್ಯಾರು’ ಎಂದು ಕಂಗನಾಗೆ ಕೇಳಲಾಯಿತು. ಇದಕ್ಕೆ ಕಂಗನಾ ಒಂದು ಕ್ಷಣವೂ ಯೋಚಿಸದೆ ಉತ್ತರ ನೀಡಿದ್ದಾರೆ. ‘ಇದಕ್ಕೆ ಬಾಲಿವುಡ್​ನ ಯಾರೊಬ್ಬರೂ ಅರ್ಹರಲ್ಲ. ಮನೆಯಿಂದ ಹೊರಗೆ ಅವರನ್ನು ಭೇಟಿ ಆಗುವುದು ಓಕೆ. ಆದರೆ, ಮನೆಗೆ ಆಮಂತ್ರಿಸಲು ಯಾರೂ ಅರ್ಹರಲ್ಲ’ ಎಂದಿದ್ದಾರೆ ಕಂಗನಾ.

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

‘ಬಾಲಿವುಡ್​ನಲ್ಲಿ ನಿಮ್ಮ ಪ್ರೀತಿ ಪಾತ್ರರು ಯಾರು’ ಎಂದು ಪ್ರಶ್ನಿಸಲಾಯಿತು. ಇದಕ್ಕೂ ಕಂಗನಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ‘ಬಾಲಿವುಡ್​ನಲ್ಲಿ ನನ್ನ ಜತೆ ಗೆಳೆತನ ಬೆಳೆಸಲು ಯಾರಿಗೂ ಯೋಗ್ಯತೆ ಇಲ್ಲ. ಹಾಗೆ ಗೆಳೆತನ ಬೆಳೆಸಬೇಕು ಎಂದರೆ ಅದಕ್ಕೆ ಅರ್ಹತೆ ಬೇಕು’ ಎಂದಿದ್ದಾರೆ ಅವರು.

‘ಧಾಕಡ್​​’ ಸಿನಿಮಾದಲ್ಲಿ ಸ್ಪೈ ಏಜೆಂಟ್ ಅಗ್ನಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕಂಡರೆ ಕಂಗನಾಗೆ ಅಷ್ಟಕ್ಕಷ್ಟೇ. ಹಾಗಿದ್ದರೂ ಸಲ್ಮಾನ್ ಅಚ್ಚರಿ ಎಂಬಂತೆ ‘ಧಾಕಡ್’ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಇದರಿಂದ ಕಂಗನಾ ಸಖತ್ ಖುಷಿಯಾಗಿದ್ದರು. ಈ ಸಿನಿಮಾ ಮೇ 20ರಂದು ತೆರೆಗೆ ಬರುತ್ತಿದೆ. ಸಿನಿಮಾ ತೆರೆಗೆ ಬರುವುದಕ್ಕೂ ಮೊದಲು ಕಂಗನಾ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ