Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ಮನೆಗೆ ಬಂತು 1 ಲಕ್ಷ ರೂಪಾಯಿ ಕರೆಂಟ್ ಬಿಲ್; ಶಾಕ್ ಆದ ನಟಿ

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಕಂಗನಾ ರಣಾವತ್ ಅವರ ಮನೆ ಇದೆ. ಅಲ್ಲಿ ಅವರು ಸದ್ಯಕ್ಕೆ ವಾಸಿಸುತ್ತಿಲ್ಲ. ಆದರೂ ಆ ಮನೆಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ ಎಂಬ ವಿಷಯವನ್ನು ಕಂಗನಾ ಬಹಿರಂಗಪಡಿಸಿದ್ದಾರೆ. ಈ ಮೂಲಕ ಅವರು ರಾಜ್ಯ ಸರ್ಕಾರದ ಕೆಲಸವನ್ನು ಟೀಕಿಸಿದ್ದಾರೆ.

ಕಂಗನಾ ಮನೆಗೆ ಬಂತು 1 ಲಕ್ಷ ರೂಪಾಯಿ ಕರೆಂಟ್ ಬಿಲ್; ಶಾಕ್ ಆದ ನಟಿ
Kangana Ranaut
Follow us
ಮದನ್​ ಕುಮಾರ್​
|

Updated on: Apr 09, 2025 | 7:00 PM

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದೆ ಆಗಿರುವ ಅವರು ಹಲವು ಕಡೆಗಳಿಗೆ ತೆರಳಿ ರಾಜಕೀಯದ ಭಾಷಣ ಮಾಡುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇರುವ ಕಾಂಗ್ರೆಸ್ ಸರ್ಕಾರವನ್ನು ಅವರು ಟೀಕಿಸಿದ್ದಾರೆ. ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ತಮ್ಮ ಮನೆಯ (Kangana Ranaut Home) ವಿದ್ಯುತ್ ಬಿಲ್ ಬಗ್ಗೆ ಅಚ್ಚರಿಯ ವಿಷಯ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇರುವ ಅವರ ಮನೆಗೆ ಬರೋಬ್ಬರಿ 1 ಲಕ್ಷ ರೂಪಾಯಿ ಕರೆಂಟ್ ಬಿಲ್ (Electricity Bill) ಬಂದಿದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

‘ಈ ತಿಂಗಳು ಮನಾಲಿಯಲ್ಲಿ ಇರುವ ನನ್ನ ಮನೆಗೆ ಒಂದು ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ. ಆ ಮನೆಯಲ್ಲಿ ನಾನು ವಾಸ ಮಾಡುತ್ತಿಲ್ಲ. ಇದು ನಿಜಕ್ಕೂ ಶೋಚನೀಯ ಪರಿಸ್ಥಿತಿ. ಅದನ್ನು ಓದಿ ನನಗೆ ನಾಚಿಕೆ ಆಯಿತು. ಎಂಥ ಸ್ಥಿತಿ ಬಂತು ಎನಿಸಿತು. ಆದರೆ ನಮಗೆಲ್ಲರಿಗೂ ಒಂದು ಅವಕಾಶ ಇದೆ. ನೀವೆಲ್ಲರೂ ಬೇರುಮಟ್ಟದಲ್ಲಿ ಕೆಲಸ ಮಾಡುತ್ತಿದ್ದೀರಿ’ ಎಂದಿದ್ದಾರೆ ಕಂಗನಾ ರಣಾವತ್.

ಇದನ್ನೂ ಓದಿ
Image
ಕಂಗನಾ-ಹೃತಿಕ್ ಮಧ್ಯೆ ನಡೆದಿತ್ತು ಫೈಟ್; ಕಾರಣವಾಗಿದ್ದು ಆ ಒಂದು ಪದ
Image
19 ವರ್ಷಗಳ ವೃತ್ತಿ ಬದುಕಲ್ಲಿ ಸಾಕಷ್ಟು ಏಳು-ಬೀಳು; ಕಂಗನಾ ಆಸ್ತಿ ಎಷ್ಟು?
Image
‘ಎಮರ್ಜೆನ್ಸಿ’ ಸಿನಿಮಾ ಹೊಗಳಿದವರಿಗೂ ಕ್ಲಾಸ್ ತೆಗೆದುಕೊಂಡ ಕಂಗನಾ
Image
ಕಂಗನಾ ರಣಾವತ್, ಜಾವೇದ್ ಅಖ್ತರ್ ನಡುವಿನ ಸುದೀರ್ಘ ಕೋರ್ಟ್ ಕೇಸ್ ಅಂತ್ಯ

‘ಇಡೀ ದೇಶದಲ್ಲಿ ಮೋದಿ ಅಲೆ ಇದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ನವರು ಎಂಥ ದುರ್ಗತಿ ತಂದಿದ್ದಾರೆ. ನಾವೆಲ್ಲರೂ ಹಿಮಾಚಲ ಪ್ರದೇಶವನ್ನು ಉನ್ನತಿಯ ಕಡೆಗೆ ತೆಗೆದುಕೊಂಡು ಹೋಗಬೇಕು’ ಎಂದು ಕಂಗನಾ ಅವರು ಹೇಳಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ಸದ್ಯಕ್ಕೆ ಕಂಗನಾ ರಣಾವತ್ ಅವರಿಗೆ ಹಿನ್ನಡೆ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಅವರು ನಟಿಸಿದ ಸಿನಿಮಾಗಳು ಗೆದ್ದಿಲ್ಲ. ‘ಎಮರ್ಜೆನ್ಸಿ’ ಸಿನಿಮಾವನ್ನು ಕಂಗನಾ ಅವರು ಕಷ್ಟಪಟ್ಟು ಮಾಡಿದ್ದರು. ಇಂದಿರಾ ಗಾಂಧಿ ಬಯೋಪಿಕ್ ಆಗಿ ಮೂಡಿಬಂದಿದ್ದ ಆ ಸಿನಿಮಾಗೆ ಸ್ವತಃ ಕಂಗನಾ ಅವರು ನಿರ್ದೇಶನ ಮಾಡಿದ್ದರು. ಆದರೆ ಬಾಕ್ಸ್ ಆಫೀಸ್​ನಲ್ಲಿ ಆ ಸಿನಿಮಾ ಗೆಲ್ಲಲೇ ಇಲ್ಲ.

ಇದನ್ನೂ ಓದಿ: ಡಿಕೆಶಿ ನಟ್ಟು ಬೋಲ್ಟು ಹೇಳಿಕೆ: ಕರ್ನಾಟಕಕ್ಕೆ ಬಂದು ತಿರುಗೇಟು ನೀಡಿದ ಕಂಗನಾ ರಣಾವತ್

ಬಿಡುಗಡೆಗೂ ಮುನ್ನವೇ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಎಂಟಾಗಿತ್ತು. ರಿಲೀಸ್ ದಿನಾಂಕವನ್ನು ಮುಂದೂಡಲಾಗಿತ್ತು. ಅಂತಿಮವಾಗಿ ಜನವರಿ 17ರಂದು ತೆರೆಕಂಡ ಆ ಸಿನಿಮಾಗೆ ವಿಶ್ರ ಪ್ರತಿಕ್ರಿಯೆ ಸಿಕ್ಕಿತು. ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ