AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ನಾನು ಗಾಂಧಿವಾದಿ ಅಲ್ಲ, ನೇತಾವಾದಿ’: ಕರ್ತವ್ಯ ಪಥ ಉದ್ಘಾಟನೆ ಬಳಿಕ ನಟಿ ಕಂಗನಾ ಹೇಳಿಕೆ

Kartavya Path: ‘ನಾನು ಗಾಂಧಿವಾದಿ ಅಲ್ಲ, ನೇತಾವಾದಿ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಹಾಗಾಗಿ ನಾನು ಮಾತನಾಡುವ ರೀತಿಯಿಂದಾಗಿ ಕೆಲವರಿಗೆ ತೊಂದರೆ ಆಗಿದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Kangana Ranaut: ‘ನಾನು ಗಾಂಧಿವಾದಿ ಅಲ್ಲ, ನೇತಾವಾದಿ’: ಕರ್ತವ್ಯ ಪಥ ಉದ್ಘಾಟನೆ ಬಳಿಕ ನಟಿ ಕಂಗನಾ ಹೇಳಿಕೆ
ಕಂಗನಾ ರಣಾವತ್
TV9 Web
| Updated By: ಮದನ್​ ಕುಮಾರ್​|

Updated on: Sep 09, 2022 | 1:06 PM

Share

ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗೆ ಹೊಸದಾಗಿ ನಾಮಕರಣಗೊಂಡ ಕರ್ತವ್ಯ ಪಥವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ (ಸೆ.8) ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಟಿ ಕಂಗನಾ ರಣಾವತ್​ (Kangana Ranaut) ಕೂಡ ಹಾಜರಿ ಹಾಕಿದರು. ಕರ್ತವ್ಯ ಪಥ (Kartavya Path) ಉದ್ಘಾಟನೆ ಬಳಿಕ ಅವರು ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ‘ನಾನು ಗಾಂಧಿವಾದಿ ಅಲ್ಲ, ನೇತಾವಾದಿ’ ಎಂದು ಕಂಗನಾ ಹೇಳಿಕೆ ನೀಡಿದ್ದಾರೆ. ‘ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್​ ಚಂದ್ರ ಬೋಸ್​ (Subhash Chandra Bose) ಹಾಗೂ ವೀರ ಸಾವರ್ಕರ್​ ಅವರನ್ನು ಕಡೆಗಣಿಸಲಾಗಿದೆ. ಕೇವಲ ಉಪವಾಸ ಸತ್ಯಾಗ್ರಹ ಹಾಗೂ ದಂಡಿ ಸತ್ಯಾಗ್ರಹದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದಲ್ಲ’ ಎಂದು ಕಂಗನಾ ಹೇಳಿದ್ದಾರೆ.

ತಮ್ಮ ನೇರ ನಡೆ-ನುಡಿಯ ಕಾರಣಕ್ಕೆ ಕಂಗನಾ ರಣಾವತ್​ ಅವರು ಆಗಾಗ ಟೀಕೆಗೆ ಒಳಗಾಗುತ್ತಾರೆ. ಸಿನಿಮಾಗಿಂತಲೂ ಹೆಚ್ಚಾಗಿ ಅವರು ಬೇರೆ ಕಾರಣದಿಂದಲೇ ಸುದ್ದಿ ಆಗುತ್ತಾರೆ. ಇದರಿಂದ ಕಂಗನಾ ಅನೇಕ ವಿವಾದಗಳನ್ನೂ ಮೈಮೇಲೆ ಎಳೆದುಕೊಳ್ಳುತ್ತಾರೆ. ರಾಜಕೀಯದ ಹಲವು ವಿಷಯಗಳಲ್ಲಿ ಅವರು ಮೂಗು ತೂರಿಸುತ್ತಾರೆ.

‘ನಾನು ಗಾಂಧಿವಾದಿ ಅಲ್ಲ, ನೇತಾವಾದಿ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಹಾಗಾಗಿ ನಾನು ಮಾತನಾಡುವ ರೀತಿಯಿಂದಾಗಿ ಕೆಲವರಿಗೆ ತೊಂದರೆ ಆಗಿದೆ. ಎಲ್ಲರಿಗೂ ಅವರದ್ದೇ ಆದಂತಹ ಆಲೋಚನಾ ರೀತಿ ಇರುತ್ತದೆ. ಲಕ್ಷಾಂತರ ಜನರು ಪ್ರಾಣ ತ್ಯಾಗ ಮಾಡಿದರು. 2ನೇ ವಿಶ್ವ ಯುದ್ಧದಲ್ಲಿ ಭಾಗವಹಿಸಿ ಭಾರತವನ್ನು ಹೀನಾಯ ಸ್ಥಿತಿಯಿಂದ ಹೊರತರಲು ನೇತಾಜಿ ಪ್ರಪಂಚಾದ್ಯಂತ ಅಭಿಯಾನ ಮಾಡಿದರು. ಅವರು ತಮ್ಮದೇ ಸೈನ್ಯ ಕಟ್ಟಿದ್ದರು. ಅವರಿಗೆ ಸ್ವಾತಂತ್ರ್ಯದ ಹಸಿವು ಇತ್ತು. ಅಧಿಕಾರದ ಹಸಿವು ಇರಲಿಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಕರ್ತ್ಯವ ಪಥದ ಉದ್ಘಾಟನೆ ಬಗ್ಗೆಯೂ ಕಂಗನಾ ಮಾತನಾಡಿದ್ದಾರೆ. ‘ಇದು ಕರ್ತವ್ಯದ ಪಥ. ಅನೇಕ ತಲೆಮಾರುಗಳಿಗೆ ಇದು ಮಾದರಿ ಆಗಲಿದೆ. ರಾಜಪಥ ಎಂದಿದ್ದರೆ ಅದು ಮಾದರಿ ಆಗುವುದಿಲ್ಲ. ಕರ್ತವ್ಯ ಪಥ ಎಂಬುದು ಜನರಿಗೆ ಮಾರ್ಗದರ್ಶನ ನೀಡುತ್ತದೆ’ ಎಂಬುದು ಕಂಗನಾ ಅಭಿಪ್ರಾಯ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಕಂಗನಾ ರಣಾವತ್​ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಗೆಲುವು ಸಿಕ್ಕಿಲ್ಲ. ಮಾಡಿದ ಎಲ್ಲ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿವೆ. ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಧಾಕಡ್​’ ಸಿನಿಮಾ ತೀರಾ ಹೀನಾಯವಾಗಿ ಸೋತಿತು. ಅದಕ್ಕೂ ಮುನ್ನ ನಟಿಸಿದ್ದ ‘ಪಂಗ’, ‘ತಲೈವಿ’, ‘ಜಡ್ಜ್​ಮೆಂಟಲ್​ ಹೈ ಕ್ಯಾ’ ಸಿನಿಮಾಗಳು ಕೂಡ ಲಾಭ ಕಾಣದೆ ಸೋಲು ಅನುಭವಿಸಿದವು. ಈಗ ‘ಎಮರ್ಜೆನ್ಸಿ’ ಚಿತ್ರದ ಕೆಲಸಗಳಲ್ಲಿ ಕಂಗನಾ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?