AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​

Kangana Ranaut | Salman Khan: ಸಲ್ಮಾನ್​ ಖಾನ್​ ಮತ್ತು ಕಂಗನಾ ರಣಾವತ್​ ನಡುವಿನ ಈ ಆತ್ಮೀಯತೆ ಬಗ್ಗೆ ಬಿ-ಟೌನ್​ನಲ್ಲಿ ಚರ್ಚೆ ಆಗುತ್ತಿದೆ. ಅಭಿಮಾನಿಗಳಂತೂ ಖುಷಿ ಆಗಿದ್ದಾರೆ.

‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​
ಕಂಗನಾ ರಣಾವತ್, ಸಲ್ಮಾನ್ ಖಾನ್
TV9 Web
| Edited By: |

Updated on: May 14, 2022 | 11:29 AM

Share

ಬಾಲಿವುಡ್​ನಲ್ಲಿ ಕಾಂಟ್ರವರ್ಸಿಗಳ ಕಾರಣದಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ ನಟಿ ಕಂಗನಾ ರಣಾವತ್​. ಹಿಂದಿ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ನೆಪೋಟಿಸಂ ಮಾಡುವ ಗ್ಯಾಂಗ್​ ಕಂಡರೆ ಅವರಿಗೆ ಎಲ್ಲಿಲ್ಲದ ಅಸಮಾಧಾನ. ಸಲ್ಮಾನ್​ ಖಾನ್​, ಕರಣ್​ ಜೋಹರ್​ ಮುಂತಾದವರು ಕೇವಲ ಫಿಲ್ಮಿ ಕುಟುಂಬದ ಪ್ರತಿಭೆಗಳಿಗೆ ಮಾತ್ರ ಬೆಂಬಲ ನೀಡುತ್ತಾರೆ ಎಂಬುದು ಕಂಗನಾ ರಣಾವತ್​ (Kangana Ranaut) ಆರೋಪ. ಹಾಗಾಗಿ ಅವರು ಎಂದಿಗೂ ಸಲ್ಲು ಅಥವಾ ಕರಣ್​ ಜೋಹರ್​ ಗ್ಯಾಂಗ್​ ಜೊತೆ ಗುರುತಿಸಿಕೊಂಡಿಲ್ಲ. ಆದರೆ ಈಗ ಏಕಾಏಕಿ ಕಂಗನಾ ರಣಾವತ್​ ಅವರಿಗೆ ಸಲ್ಮಾನ್​ ಖಾನ್​ ಮೇಲೆ ಪ್ರೀತಿ ಉಕ್ಕಿದೆ. ಅದನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ (Dhaakad Movie) ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ತೆರೆಕಾಣಲಿರುವ ಈ ಸಿನಿಮಾದ ಟ್ರೇಲರ್​ ಈಗಾಗಲೇ ಸದ್ದು ಮಾಡಿದೆ. ಸಲ್ಮಾನ್​ ಖಾನ್​ (Salman Khan) ಅವರ ಗಮನವನ್ನೂ ಈ ಚಿತ್ರದ ಟ್ರೇಲರ್ ಸೆಳೆದುಕೊಂಡಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಲ್ಲು ಪೋಸ್ಟ್​ ಮಾಡಿದ್ದು, ಅದಕ್ಕಾಗಿ ಕಂಗನಾ ರಣಾವತ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

ಕಂಗನಾ ರಣಾವತ್​ ಅವರ ಕಿರಿಕ್​ ವ್ಯಕ್ತಿತ್ವದಿಂದಾಗಿ ಬಾಲಿವುಡ್​ನ ಬಹುತೇಕರು ಅವರ ತಂಟೆಗೆ ಹೋಗುವುದಿಲ್ಲ. ಅವರ ಸಿನಿಮಾಗಳ ಬಗ್ಗೆಯೂ ಮಾತನಾಡುವುದಿಲ್ಲ. ತಮ್ಮ ಚಿತ್ರಕ್ಕೆ ಸ್ಟಾರ್​ ನಟರಿಂದ ಬೆಂಬಲ ಸಿಗುವುದಿಲ್ಲ ಎಂಬುದು ಕಂಗನಾ ಅವರ ಆರೋಪ ಆಗಿತ್ತು. ಆದರೆ ಅದನ್ನು ಈಗ ಸಲ್ಮಾನ್​ ಖಾನ್​ ಸುಳ್ಳು ಮಾಡಿದ್ದಾರೆ. ‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ಟ್ವಿಟರ್​ನಲ್ಲಿ ಅವರು ಹಂಚಿಕೊಂಡಿದ್ದಾರೆ. ಜತೆಗೆ ಇಡೀ ಟೀಮ್​ಗೆ ಅವರು ಶುಭ ಹಾರೈಸಿದ್ದಾರೆ.

ಸಲ್ಮಾನ್ ಖಾನ್​ ಅವರಿಂದ ಸಿಕ್ಕ ಈ ಬೆಂಬಲಕ್ಕೆ ಕಂಗನಾ ಫುಲ್​ ಖುಷ್​ ಆಗಿದ್ದಾರೆ. ಇದಕ್ಕೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ನನ್ನ ದಬಂಗ್​ ಹೀರೋಗೆ ಧನ್ಯವಾದಗಳು. ಚಿನ್ನದಂತಹ ಹೃದಯ ನಿಮ್ಮದು. ಇನ್ಮುಂದೆ ಚಿತ್ರರಂಗದಲ್ಲಿ ನಾನು ಒಂಟಿ ಎಂದು ಹೇಳುವುದಿಲ್ಲ. ಇಡೀ ಧಾಕಡ್​ ಚಿತ್ರತಂಡ ಪರವಾಗಿ ಧನ್ಯವಾದಗಳು’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ. ತಮ್ಮ ನೆಚ್ಚಿನ ನಟಿಗೆ ಸಲ್ಮಾನ್​ ಖಾನ್​ ಅವರಂತಹ ಸ್ಟಾರ್​ ಹೀರೋ ಕಡೆಯಿಂದ ಶುಭ ಹಾರೈಕೆ ಸಿಕ್ಕಿದ್ದಕ್ಕೆ ಕಂಗನಾ ಫ್ಯಾನ್ಸ್​ ಸಖತ್​ ಖುಷಿ ಆಗಿದ್ದಾರೆ. Source

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

ನಟಿಯಾಗಿ ಮಾತ್ರವಲ್ಲದೇ ನಿರೂಪಕಿ ಆಗಿಯೂ ಕಂಗನಾ ಯಶಸ್ವಿ ಆಗಿದ್ದಾರೆ. ಅವರು ನಡೆಸಿಕೊಡುತ್ತಿದ್ದ ‘ಲಾಕಪ್​’ ಶೋ ಯಶಸ್ವಿಯಾಗಿ ಮುಕ್ತಾಯ ಆಗಿದೆ. ಈ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ‘ಧಾಕಡ್’ ಸಿನಿಮಾ ಮೇಲೆ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳ ಎದುರು ಅನೇಕ ಬಾಲಿವುಡ್​ ಸಿನಿಮಾಗಳು ನೆಲಕಚ್ಚಿವೆ. ಈಗ ‘ಧಾಕಡ್​’ ಯಾವ ರೀತಿ ಕಲೆಕ್ಷನ್​ ಮಾಡಲಿದೆ ಎಂಬ ಕೌತುಕ ಮೂಡಿದೆ. ಈ ಸಿನಿಮಾದಲ್ಲಿ ಏಜೆಂಟ್​ ಅಗ್ನಿ ಎಂಬ ಸ್ಪೈ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲೂ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​