AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​

‘ಬಿಲ್ಕಿಸ್​​ ಬಾನು ಜೀವನದ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ಆದರೂ ಕೂಡ ಈ ಸಿನಿಮಾ ಸಿದ್ಧವಾಗಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಅಸಲಿ ಕಾರಣವನ್ನು ವಿವರಿಸಿದ್ದಾರೆ.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​
ಕಂಗನಾ ರಣಾವತ್​, ಬಿಲ್ಕಿಸ್​ ಬಾನು
ಮದನ್​ ಕುಮಾರ್​
|

Updated on: Jan 09, 2024 | 5:42 PM

Share

ಬಿಲ್ಕಿಸ್​​ ಬಾನು ಪ್ರಕರಣದ (Bilkis Bano Case) ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ. 2002ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್​ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಲ್ಕಿಸ್​ ಬಾನು (Bilkis Bano) ಅವರ ಜೀವನದ ಕುರಿತು ಸಿನಿಮಾ ಮಾಡುತ್ತೀರಾ ಎಂದು ಕಂಗನಾ ರಣಾವತ್​ (Kangana Ranaut) ಅವರಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಕಂಗನಾ ಅವರು ಕೆಲವು ಶಾಕಿಂಗ್​ ಸಂಗತಿಗಳನ್ನು ತೆರೆದಿಟ್ಟಿದ್ದಾರೆ. ಈ ಪ್ರಕರಣದ ಕುರಿತು ಸ್ಕ್ರಿಪ್ಟ್​ ಸಿದ್ಧವಿದ್ದರೂ ಕೂಡ ಸಿನಿಮಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ತಿಳಿಸಿದ್ದಾರೆ.

‘ಆ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ. ಇಂಥ ರಾಜಕೀಯ ಪ್ರೇರಿತ ವಿಷಯವನ್ನು ಇಟ್ಟುಕೊಂಡ ಸಿನಿಮಾ ಮಾಡುವುದು ಬೇಡ ಎಂದು ನನಗೆ ಅಮೇಜಾನ್​ ಪ್ರೈಂ ವಿಡಿಯೋ ಮತ್ತು ನೆಟ್​ಫ್ಲಿಕ್ಸ್​ ಸಂಸ್ಥೆಗಳು ಹೇಳಿವೆ. ನಾನು ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂಬ ಕಾರಣಕ್ಕೆ ಜಿಯೋ ಸಿನಿಮಾದವರು ನನ್ನ ಜೊತೆ ಕೆಲಸ ಮಾಡಲ್ಲ ಅಂತ ಹೇಳಿದ್ದಾರೆ. ಜೀ ಸಂಸ್ಥೆ ಬೇರೆಯವರ ಜೊತೆ ವಿಲೀನ ಆಗುತ್ತಿದೆ. ನನಗೆ ಬೇರೆ ಆಯ್ಕೆ ಏನಿದೆ’ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ರಣಾವತ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಈ ಹಿಂದೆ ಅವರು ಆಕ್ಷೇಪಾರ್ಹವಾಗಿ ಪೋಸ್ಟ್​ ಮಾಡಿದ್ದಕ್ಕೆ ಅವರ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಬಳಿಕ ಅವರು ತಮ್ಮ ಖಾತೆಯನ್ನು ಮರಳಿ ಪಡೆದರು. ಈಗ ಅವರು ಅನೇಕ ವಿಚಾರಗಳ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಹಲವು ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿಯಾಗಿ ಮತ್ತು ನಿರ್ಮಾಪಕಿಯಾಗಿಯೂ ಕಂಗನಾ ರಣಾವತ್​ ಅವರು ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ಎಮರ್ಜೆನ್ಸಿ’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ದಿನಾಂಕ ತಡವಾಗಿದೆ. ‘ಎಮರ್ಜೆನ್ಸಿ’ ಸಿನಿಮಾದ ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ