AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​

‘ಬಿಲ್ಕಿಸ್​​ ಬಾನು ಜೀವನದ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ಆದರೂ ಕೂಡ ಈ ಸಿನಿಮಾ ಸಿದ್ಧವಾಗಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಅಸಲಿ ಕಾರಣವನ್ನು ವಿವರಿಸಿದ್ದಾರೆ.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​
ಕಂಗನಾ ರಣಾವತ್​, ಬಿಲ್ಕಿಸ್​ ಬಾನು
Follow us
ಮದನ್​ ಕುಮಾರ್​
|

Updated on: Jan 09, 2024 | 5:42 PM

ಬಿಲ್ಕಿಸ್​​ ಬಾನು ಪ್ರಕರಣದ (Bilkis Bano Case) ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ. 2002ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್​ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಲ್ಕಿಸ್​ ಬಾನು (Bilkis Bano) ಅವರ ಜೀವನದ ಕುರಿತು ಸಿನಿಮಾ ಮಾಡುತ್ತೀರಾ ಎಂದು ಕಂಗನಾ ರಣಾವತ್​ (Kangana Ranaut) ಅವರಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಕಂಗನಾ ಅವರು ಕೆಲವು ಶಾಕಿಂಗ್​ ಸಂಗತಿಗಳನ್ನು ತೆರೆದಿಟ್ಟಿದ್ದಾರೆ. ಈ ಪ್ರಕರಣದ ಕುರಿತು ಸ್ಕ್ರಿಪ್ಟ್​ ಸಿದ್ಧವಿದ್ದರೂ ಕೂಡ ಸಿನಿಮಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ತಿಳಿಸಿದ್ದಾರೆ.

‘ಆ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ. ಇಂಥ ರಾಜಕೀಯ ಪ್ರೇರಿತ ವಿಷಯವನ್ನು ಇಟ್ಟುಕೊಂಡ ಸಿನಿಮಾ ಮಾಡುವುದು ಬೇಡ ಎಂದು ನನಗೆ ಅಮೇಜಾನ್​ ಪ್ರೈಂ ವಿಡಿಯೋ ಮತ್ತು ನೆಟ್​ಫ್ಲಿಕ್ಸ್​ ಸಂಸ್ಥೆಗಳು ಹೇಳಿವೆ. ನಾನು ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂಬ ಕಾರಣಕ್ಕೆ ಜಿಯೋ ಸಿನಿಮಾದವರು ನನ್ನ ಜೊತೆ ಕೆಲಸ ಮಾಡಲ್ಲ ಅಂತ ಹೇಳಿದ್ದಾರೆ. ಜೀ ಸಂಸ್ಥೆ ಬೇರೆಯವರ ಜೊತೆ ವಿಲೀನ ಆಗುತ್ತಿದೆ. ನನಗೆ ಬೇರೆ ಆಯ್ಕೆ ಏನಿದೆ’ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ರಣಾವತ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಈ ಹಿಂದೆ ಅವರು ಆಕ್ಷೇಪಾರ್ಹವಾಗಿ ಪೋಸ್ಟ್​ ಮಾಡಿದ್ದಕ್ಕೆ ಅವರ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಬಳಿಕ ಅವರು ತಮ್ಮ ಖಾತೆಯನ್ನು ಮರಳಿ ಪಡೆದರು. ಈಗ ಅವರು ಅನೇಕ ವಿಚಾರಗಳ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಹಲವು ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿಯಾಗಿ ಮತ್ತು ನಿರ್ಮಾಪಕಿಯಾಗಿಯೂ ಕಂಗನಾ ರಣಾವತ್​ ಅವರು ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ಎಮರ್ಜೆನ್ಸಿ’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ದಿನಾಂಕ ತಡವಾಗಿದೆ. ‘ಎಮರ್ಜೆನ್ಸಿ’ ಸಿನಿಮಾದ ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್