AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​

‘ಬಿಲ್ಕಿಸ್​​ ಬಾನು ಜೀವನದ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ಆದರೂ ಕೂಡ ಈ ಸಿನಿಮಾ ಸಿದ್ಧವಾಗಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಅಸಲಿ ಕಾರಣವನ್ನು ವಿವರಿಸಿದ್ದಾರೆ.

‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​
ಕಂಗನಾ ರಣಾವತ್​, ಬಿಲ್ಕಿಸ್​ ಬಾನು
ಮದನ್​ ಕುಮಾರ್​
|

Updated on: Jan 09, 2024 | 5:42 PM

Share

ಬಿಲ್ಕಿಸ್​​ ಬಾನು ಪ್ರಕರಣದ (Bilkis Bano Case) ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ. 2002ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್​ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಲ್ಕಿಸ್​ ಬಾನು (Bilkis Bano) ಅವರ ಜೀವನದ ಕುರಿತು ಸಿನಿಮಾ ಮಾಡುತ್ತೀರಾ ಎಂದು ಕಂಗನಾ ರಣಾವತ್​ (Kangana Ranaut) ಅವರಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಕಂಗನಾ ಅವರು ಕೆಲವು ಶಾಕಿಂಗ್​ ಸಂಗತಿಗಳನ್ನು ತೆರೆದಿಟ್ಟಿದ್ದಾರೆ. ಈ ಪ್ರಕರಣದ ಕುರಿತು ಸ್ಕ್ರಿಪ್ಟ್​ ಸಿದ್ಧವಿದ್ದರೂ ಕೂಡ ಸಿನಿಮಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ತಿಳಿಸಿದ್ದಾರೆ.

‘ಆ ಕಥೆಯನ್ನು ನಾನು ಸಿನಿಮಾ ಮಾಡಲು ಬಯಸಿದ್ದೇನೆ. ಸ್ಕ್ರಿಪ್ಟ್​ ಕೂಡ ಸಿದ್ಧವಿದೆ. ಆ ವಿಷಯದ ಮೇಲೆ ಮೂರು ವರ್ಷ ಅಧ್ಯಯನ ಮಾಡಿದ್ದೇನೆ. ಇಂಥ ರಾಜಕೀಯ ಪ್ರೇರಿತ ವಿಷಯವನ್ನು ಇಟ್ಟುಕೊಂಡ ಸಿನಿಮಾ ಮಾಡುವುದು ಬೇಡ ಎಂದು ನನಗೆ ಅಮೇಜಾನ್​ ಪ್ರೈಂ ವಿಡಿಯೋ ಮತ್ತು ನೆಟ್​ಫ್ಲಿಕ್ಸ್​ ಸಂಸ್ಥೆಗಳು ಹೇಳಿವೆ. ನಾನು ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂಬ ಕಾರಣಕ್ಕೆ ಜಿಯೋ ಸಿನಿಮಾದವರು ನನ್ನ ಜೊತೆ ಕೆಲಸ ಮಾಡಲ್ಲ ಅಂತ ಹೇಳಿದ್ದಾರೆ. ಜೀ ಸಂಸ್ಥೆ ಬೇರೆಯವರ ಜೊತೆ ವಿಲೀನ ಆಗುತ್ತಿದೆ. ನನಗೆ ಬೇರೆ ಆಯ್ಕೆ ಏನಿದೆ’ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ರಣಾವತ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಈ ಹಿಂದೆ ಅವರು ಆಕ್ಷೇಪಾರ್ಹವಾಗಿ ಪೋಸ್ಟ್​ ಮಾಡಿದ್ದಕ್ಕೆ ಅವರ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಬಳಿಕ ಅವರು ತಮ್ಮ ಖಾತೆಯನ್ನು ಮರಳಿ ಪಡೆದರು. ಈಗ ಅವರು ಅನೇಕ ವಿಚಾರಗಳ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಹಲವು ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿಯಾಗಿ ಮತ್ತು ನಿರ್ಮಾಪಕಿಯಾಗಿಯೂ ಕಂಗನಾ ರಣಾವತ್​ ಅವರು ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ಎಮರ್ಜೆನ್ಸಿ’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ದಿನಾಂಕ ತಡವಾಗಿದೆ. ‘ಎಮರ್ಜೆನ್ಸಿ’ ಸಿನಿಮಾದ ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ