AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​

Sidharth Malhotra Kiara Advani Marriage: ತುಂಬ ಖಾಸಗಿಯಾಗಿ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​
ಕಂಗನಾ ರಣಾವತ್, ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ
ಮದನ್​ ಕುಮಾರ್​
|

Updated on: Feb 04, 2023 | 9:30 AM

Share

ಹಿಂದಿ ಚಿತ್ರರಂಗದ ಖ್ಯಾತ ಕಲಾವಿದರಾದ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ (Kiara Advani) ಅವರು ಹಸೆಮಣೆ ಏರುತ್ತಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿಯ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಅನೇಕ ಅತಿಥಿಗಳು ಮುಂಬೈನಿಂದ ರಾಜಸ್ಥಾನಕ್ಕೆ ಬರುತ್ತಿದ್ದಾರೆ. ಸೂರ್ಯಗಡ ಪ್ಯಾಲೇಸ್​ನಲ್ಲಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ (Sidharth Malhotra) ಅವರು ಸಪ್ತಪದಿ ತುಳಿಯಲಿದ್ದಾರೆ. ಇಷ್ಟೆಲ್ಲ ಸುದ್ದಿ ಹರಿದಾಡುತ್ತಿದ್ದರೂ ಕೂಡ ಈ ಜೋಡಿಯ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ನಡುವೆ ನಟಿ ಕಂಗನಾ ರಣಾವತ್​ (Kangana Ranaut) ಅವರು ‘ಇವರಿಬ್ಬರದ್ದು ನಿಜವಾದ ಪ್ರೀತಿ’ ಎಂದು ಹೊಗಳಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ಜೋಡಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ಜೊತೆಯಾಗಿ ಇರುವ ಅಪರೂಪದ ವಿಡಿಯೋವನ್ನು ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಈ ಜೋಡಿ ಎಷ್ಟು ಚೆನ್ನಾಗಿ ಕಾಣುತ್ತಿದೆ. ಚಿತ್ರರಂಗದಲ್ಲಿ ನಾವು ನಿಜವಾದ ಪ್ರೀತಿಯನ್ನು ನೋಡುವುದು ತುಂಬ ವಿರಳ’ ಎಂದು ಕಂಗನಾ ಅವರು ಕ್ಯಾಪ್ಷನ್​ ನೀಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರನ್ನು ಟ್ಯಾಗ್​ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ತುಂಬ ಖಾಸಗಿಯಾಗಿ ಈ ಜೋಡಿಯ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಕರಣ್​ ಜೋಹರ್​, ಮನೀಶ್​ ಮಲ್ಹೋತ್ರಾ, ಶಾಹಿದ್​ ಕಪೂರ್​ ಮುಂತಾದವರು ಹಾಜರಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ಬಗ್ಗೆ ಯಾರೂ ಕೂಡ ಬಾಯಿ ಬಿಡುತ್ತಿಲ್ಲ. ಹೀಗಿರುವಾಗ ಕಂಗನಾ ರಣಾವತ್​ ಅವರು ವಿಡಿಯೋ ಹಂಚಿಕೊಂಡು ಮೆಚ್ಚುಗೆ ಸೂಚಿಸಿದ್ದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಬಾಲಿವುಡ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರಿಗೆ ಸಖತ್ ಬೇಡಿಕೆ ಇದೆ. ಇಬ್ಬರೂ ‘ಶೇರ್ಷಾ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಅವರ ಕೆಮಿಸ್ಟ್ರಿ ಜನರಿಗೆ ಇಷ್ಟ ಆಗಿದೆ. ರಿಯಲ್​ ಲೈಫ್​ನಲ್ಲಿಯೂ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಬ್ಬರ ಲವ್​ ಸ್ಟೋರಿ ಬಗ್ಗೆ ಹಲವು ಬಗೆಯ ಅಂತೆ-ಕಂತೆಗಳು ಹರಿದಾಡುತ್ತಿವೆ. ಆದರೆ ಆ ಕುರಿತು ಇವರಿಬ್ಬರು ಬಹಿರಂಗವಾಗಿ ಮಾತನಾಡಿಲ್ಲ.

ಸಿದ್ದಾರ್ಥ್​ ಮಲ್ಹೋತ್ರಾ ಅವರಿಗೆ ಈ ವರ್ಷದ ಆರಂಭದಲ್ಲೇ ಗೆಲುವು ಸಿಕ್ಕಿದೆ. ಅವರು ನಟಿಸಿದ ‘ಮಿಷನ್​ ಮಜ್ನು’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿದೆ. ಈ ಖುಷಿಯ ಬೆನ್ನಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು