Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​

Sidharth Malhotra Kiara Advani Marriage: ತುಂಬ ಖಾಸಗಿಯಾಗಿ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​
ಕಂಗನಾ ರಣಾವತ್, ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ
Follow us
ಮದನ್​ ಕುಮಾರ್​
|

Updated on: Feb 04, 2023 | 9:30 AM

ಹಿಂದಿ ಚಿತ್ರರಂಗದ ಖ್ಯಾತ ಕಲಾವಿದರಾದ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ (Kiara Advani) ಅವರು ಹಸೆಮಣೆ ಏರುತ್ತಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿಯ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಅನೇಕ ಅತಿಥಿಗಳು ಮುಂಬೈನಿಂದ ರಾಜಸ್ಥಾನಕ್ಕೆ ಬರುತ್ತಿದ್ದಾರೆ. ಸೂರ್ಯಗಡ ಪ್ಯಾಲೇಸ್​ನಲ್ಲಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ (Sidharth Malhotra) ಅವರು ಸಪ್ತಪದಿ ತುಳಿಯಲಿದ್ದಾರೆ. ಇಷ್ಟೆಲ್ಲ ಸುದ್ದಿ ಹರಿದಾಡುತ್ತಿದ್ದರೂ ಕೂಡ ಈ ಜೋಡಿಯ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ನಡುವೆ ನಟಿ ಕಂಗನಾ ರಣಾವತ್​ (Kangana Ranaut) ಅವರು ‘ಇವರಿಬ್ಬರದ್ದು ನಿಜವಾದ ಪ್ರೀತಿ’ ಎಂದು ಹೊಗಳಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ಜೋಡಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ಜೊತೆಯಾಗಿ ಇರುವ ಅಪರೂಪದ ವಿಡಿಯೋವನ್ನು ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಈ ಜೋಡಿ ಎಷ್ಟು ಚೆನ್ನಾಗಿ ಕಾಣುತ್ತಿದೆ. ಚಿತ್ರರಂಗದಲ್ಲಿ ನಾವು ನಿಜವಾದ ಪ್ರೀತಿಯನ್ನು ನೋಡುವುದು ತುಂಬ ವಿರಳ’ ಎಂದು ಕಂಗನಾ ಅವರು ಕ್ಯಾಪ್ಷನ್​ ನೀಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರನ್ನು ಟ್ಯಾಗ್​ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ತುಂಬ ಖಾಸಗಿಯಾಗಿ ಈ ಜೋಡಿಯ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಕರಣ್​ ಜೋಹರ್​, ಮನೀಶ್​ ಮಲ್ಹೋತ್ರಾ, ಶಾಹಿದ್​ ಕಪೂರ್​ ಮುಂತಾದವರು ಹಾಜರಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ಬಗ್ಗೆ ಯಾರೂ ಕೂಡ ಬಾಯಿ ಬಿಡುತ್ತಿಲ್ಲ. ಹೀಗಿರುವಾಗ ಕಂಗನಾ ರಣಾವತ್​ ಅವರು ವಿಡಿಯೋ ಹಂಚಿಕೊಂಡು ಮೆಚ್ಚುಗೆ ಸೂಚಿಸಿದ್ದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಬಾಲಿವುಡ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರಿಗೆ ಸಖತ್ ಬೇಡಿಕೆ ಇದೆ. ಇಬ್ಬರೂ ‘ಶೇರ್ಷಾ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಅವರ ಕೆಮಿಸ್ಟ್ರಿ ಜನರಿಗೆ ಇಷ್ಟ ಆಗಿದೆ. ರಿಯಲ್​ ಲೈಫ್​ನಲ್ಲಿಯೂ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಬ್ಬರ ಲವ್​ ಸ್ಟೋರಿ ಬಗ್ಗೆ ಹಲವು ಬಗೆಯ ಅಂತೆ-ಕಂತೆಗಳು ಹರಿದಾಡುತ್ತಿವೆ. ಆದರೆ ಆ ಕುರಿತು ಇವರಿಬ್ಬರು ಬಹಿರಂಗವಾಗಿ ಮಾತನಾಡಿಲ್ಲ.

ಸಿದ್ದಾರ್ಥ್​ ಮಲ್ಹೋತ್ರಾ ಅವರಿಗೆ ಈ ವರ್ಷದ ಆರಂಭದಲ್ಲೇ ಗೆಲುವು ಸಿಕ್ಕಿದೆ. ಅವರು ನಟಿಸಿದ ‘ಮಿಷನ್​ ಮಜ್ನು’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿದೆ. ಈ ಖುಷಿಯ ಬೆನ್ನಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ