AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಜಾವೇದ್​ ಅಖ್ತರ್​ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ಅವರು ತಪ್ಪಿಸಿಲ್ಲ.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​
ಕಂಗನಾ ರಣಾವತ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 20, 2021 | 3:59 PM

ನಟಿ ಕಂಗನಾ ರಣಾವತ್​ ವಿರುದ್ಧ ಕವಿ, ಚಿತ್ರಸಾಹಿತಿ ಜಾವೇದ್​ ಅಖ್ತರ್​ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆದಿದೆ. ಸೋಮವಾರ (ಸೆ.20) ಅಂಧೇರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಂಗನಾ ಹಾಜರಾದರು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದರೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗುವುದು ಎಂದು ಈ ಹಿಂದೆ ಕಂಗನಾಗೆ ಕೋರ್ಟ್​ ಎಚ್ಚರಿಕೆ ನೀಡಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಬರುವುದು ನಟಿಗೆ ಅನಿವಾರ್ಯ ಆಗಿತ್ತು. ಕೋರ್ಟ್​ ಹಾಜರಾಗುವುದಕ್ಕೂ ಮುನ್ನ ಜಾವೇದ್​ ಅಖ್ತರ್​ ವಿರುದ್ಧ ಕಂಗನಾ ಪ್ರತಿದೂರು ಸಲ್ಲಿಸಿದ್ದಾರೆ. ತಮಗೆ ಜಾವೇದ್​ ಅಖ್ತರ್​ ಬೆದರಿಕೆ ಹಾಕಿದ್ದಾರೆ ಎಂದು ಈ ದೂರಿನಲ್ಲಿ ಕಂಗನಾ ಆರೋಪಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ನಿಧನದ ಬಳಿಕ ಮಾಧ್ಯಮವೊಂದರ ಜೊತೆ ಮಾತನಾಡುವಾಗ ಕಂಗನಾ ಅವರು ಜಾವೇದ್​ ಅಖ್ತರ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಆಗ ಮಾನಹಾನಿ ಆಗುವ ರೀತಿಯಲ್ಲಿ ತಮ್ಮ ಬಗ್ಗೆ ಕಂಗನಾ ಮಾತನಾಡಿದ್ದರು ಎಂದು ಜಾವೇದ್​ ಅಖ್ತರ್​ ದೂರು ನೀಡಿದ್ದರು. ಈ ಕೇಸ್​ನ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕಂಗನಾ ಮನವಿ ಸಲ್ಲಿಸಿದ್ದಾರೆ. ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್​ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ!​

ಕೋರ್ಟ್​ಗೆ​ ಹೋಗಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಅವರು ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ತಪ್ಪಿಸಿಲ್ಲ. ‘ನಿಮ್ಮನ್ನು ಬೆಳೆಸಲು ಯಾರಿಗೆ ಸಾಧ್ಯವಿಲ್ಲವೋ ಅವರಿಗೆ ನಿಮ್ಮನ್ನು ನಾಶ ಮಾಡಲು ಕೂಡ ಸಾಧ್ಯವಿಲ್ಲ. ಶಿವ ಸೇನಾ ಒತ್ತಡದಿಂದ ಜಾವೇದ್​ ಅಖ್ತರ್​ ದಾಖಲಿಸಿರುವ ಕೇಸ್​ನ ವಿಚಾರಣೆ ಇಂದು ನಡೆಯಿತು. ಕತ್ತೆಕಿರುಬಗಳನ್ನು ಸಿಂಹದ ರೀತಿ ಎದುರಿಸುತ್ತಿದ್ದೇನೆ. ಅದು ಕೂಡ ಸ್ಟೈಲ್​ನಲ್ಲಿ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ವಿರುದ್ಧ ಹಲವು ಕಡೆಗಳಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್​ ದಾಖಲಾಗಿವೆ. ಹಾಗಾಗಿ ಅವರ ಪಾಸ್​ಪೋರ್ಟ್​ ನವೀಕರಣಗೊಳ್ಳುತ್ತಿಲ್ಲ. ಈ ಸಂಬಂಧ ಅವರು ಬಾಂಬೆ ಹೈಕೋರ್ಟ್​ಗೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಹಿನ್ನಡೆ ಆಯಿತು. ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ:

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್