AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಜಾವೇದ್​ ಅಖ್ತರ್​ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ಅವರು ತಪ್ಪಿಸಿಲ್ಲ.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​
ಕಂಗನಾ ರಣಾವತ್
TV9 Web
| Edited By: |

Updated on: Sep 20, 2021 | 3:59 PM

Share

ನಟಿ ಕಂಗನಾ ರಣಾವತ್​ ವಿರುದ್ಧ ಕವಿ, ಚಿತ್ರಸಾಹಿತಿ ಜಾವೇದ್​ ಅಖ್ತರ್​ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆದಿದೆ. ಸೋಮವಾರ (ಸೆ.20) ಅಂಧೇರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಂಗನಾ ಹಾಜರಾದರು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದರೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗುವುದು ಎಂದು ಈ ಹಿಂದೆ ಕಂಗನಾಗೆ ಕೋರ್ಟ್​ ಎಚ್ಚರಿಕೆ ನೀಡಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಬರುವುದು ನಟಿಗೆ ಅನಿವಾರ್ಯ ಆಗಿತ್ತು. ಕೋರ್ಟ್​ ಹಾಜರಾಗುವುದಕ್ಕೂ ಮುನ್ನ ಜಾವೇದ್​ ಅಖ್ತರ್​ ವಿರುದ್ಧ ಕಂಗನಾ ಪ್ರತಿದೂರು ಸಲ್ಲಿಸಿದ್ದಾರೆ. ತಮಗೆ ಜಾವೇದ್​ ಅಖ್ತರ್​ ಬೆದರಿಕೆ ಹಾಕಿದ್ದಾರೆ ಎಂದು ಈ ದೂರಿನಲ್ಲಿ ಕಂಗನಾ ಆರೋಪಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ನಿಧನದ ಬಳಿಕ ಮಾಧ್ಯಮವೊಂದರ ಜೊತೆ ಮಾತನಾಡುವಾಗ ಕಂಗನಾ ಅವರು ಜಾವೇದ್​ ಅಖ್ತರ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಆಗ ಮಾನಹಾನಿ ಆಗುವ ರೀತಿಯಲ್ಲಿ ತಮ್ಮ ಬಗ್ಗೆ ಕಂಗನಾ ಮಾತನಾಡಿದ್ದರು ಎಂದು ಜಾವೇದ್​ ಅಖ್ತರ್​ ದೂರು ನೀಡಿದ್ದರು. ಈ ಕೇಸ್​ನ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕಂಗನಾ ಮನವಿ ಸಲ್ಲಿಸಿದ್ದಾರೆ. ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್​ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ!​

ಕೋರ್ಟ್​ಗೆ​ ಹೋಗಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಅವರು ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ತಪ್ಪಿಸಿಲ್ಲ. ‘ನಿಮ್ಮನ್ನು ಬೆಳೆಸಲು ಯಾರಿಗೆ ಸಾಧ್ಯವಿಲ್ಲವೋ ಅವರಿಗೆ ನಿಮ್ಮನ್ನು ನಾಶ ಮಾಡಲು ಕೂಡ ಸಾಧ್ಯವಿಲ್ಲ. ಶಿವ ಸೇನಾ ಒತ್ತಡದಿಂದ ಜಾವೇದ್​ ಅಖ್ತರ್​ ದಾಖಲಿಸಿರುವ ಕೇಸ್​ನ ವಿಚಾರಣೆ ಇಂದು ನಡೆಯಿತು. ಕತ್ತೆಕಿರುಬಗಳನ್ನು ಸಿಂಹದ ರೀತಿ ಎದುರಿಸುತ್ತಿದ್ದೇನೆ. ಅದು ಕೂಡ ಸ್ಟೈಲ್​ನಲ್ಲಿ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ವಿರುದ್ಧ ಹಲವು ಕಡೆಗಳಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್​ ದಾಖಲಾಗಿವೆ. ಹಾಗಾಗಿ ಅವರ ಪಾಸ್​ಪೋರ್ಟ್​ ನವೀಕರಣಗೊಳ್ಳುತ್ತಿಲ್ಲ. ಈ ಸಂಬಂಧ ಅವರು ಬಾಂಬೆ ಹೈಕೋರ್ಟ್​ಗೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಹಿನ್ನಡೆ ಆಯಿತು. ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ:

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು