AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಜಾವೇದ್​ ಅಖ್ತರ್​ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ಅವರು ತಪ್ಪಿಸಿಲ್ಲ.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​
ಕಂಗನಾ ರಣಾವತ್
TV9 Web
| Edited By: |

Updated on: Sep 20, 2021 | 3:59 PM

Share

ನಟಿ ಕಂಗನಾ ರಣಾವತ್​ ವಿರುದ್ಧ ಕವಿ, ಚಿತ್ರಸಾಹಿತಿ ಜಾವೇದ್​ ಅಖ್ತರ್​ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆದಿದೆ. ಸೋಮವಾರ (ಸೆ.20) ಅಂಧೇರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಂಗನಾ ಹಾಜರಾದರು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದರೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗುವುದು ಎಂದು ಈ ಹಿಂದೆ ಕಂಗನಾಗೆ ಕೋರ್ಟ್​ ಎಚ್ಚರಿಕೆ ನೀಡಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಬರುವುದು ನಟಿಗೆ ಅನಿವಾರ್ಯ ಆಗಿತ್ತು. ಕೋರ್ಟ್​ ಹಾಜರಾಗುವುದಕ್ಕೂ ಮುನ್ನ ಜಾವೇದ್​ ಅಖ್ತರ್​ ವಿರುದ್ಧ ಕಂಗನಾ ಪ್ರತಿದೂರು ಸಲ್ಲಿಸಿದ್ದಾರೆ. ತಮಗೆ ಜಾವೇದ್​ ಅಖ್ತರ್​ ಬೆದರಿಕೆ ಹಾಕಿದ್ದಾರೆ ಎಂದು ಈ ದೂರಿನಲ್ಲಿ ಕಂಗನಾ ಆರೋಪಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ನಿಧನದ ಬಳಿಕ ಮಾಧ್ಯಮವೊಂದರ ಜೊತೆ ಮಾತನಾಡುವಾಗ ಕಂಗನಾ ಅವರು ಜಾವೇದ್​ ಅಖ್ತರ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಆಗ ಮಾನಹಾನಿ ಆಗುವ ರೀತಿಯಲ್ಲಿ ತಮ್ಮ ಬಗ್ಗೆ ಕಂಗನಾ ಮಾತನಾಡಿದ್ದರು ಎಂದು ಜಾವೇದ್​ ಅಖ್ತರ್​ ದೂರು ನೀಡಿದ್ದರು. ಈ ಕೇಸ್​ನ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕಂಗನಾ ಮನವಿ ಸಲ್ಲಿಸಿದ್ದಾರೆ. ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್​ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ!​

ಕೋರ್ಟ್​ಗೆ​ ಹೋಗಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಅವರು ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ತಪ್ಪಿಸಿಲ್ಲ. ‘ನಿಮ್ಮನ್ನು ಬೆಳೆಸಲು ಯಾರಿಗೆ ಸಾಧ್ಯವಿಲ್ಲವೋ ಅವರಿಗೆ ನಿಮ್ಮನ್ನು ನಾಶ ಮಾಡಲು ಕೂಡ ಸಾಧ್ಯವಿಲ್ಲ. ಶಿವ ಸೇನಾ ಒತ್ತಡದಿಂದ ಜಾವೇದ್​ ಅಖ್ತರ್​ ದಾಖಲಿಸಿರುವ ಕೇಸ್​ನ ವಿಚಾರಣೆ ಇಂದು ನಡೆಯಿತು. ಕತ್ತೆಕಿರುಬಗಳನ್ನು ಸಿಂಹದ ರೀತಿ ಎದುರಿಸುತ್ತಿದ್ದೇನೆ. ಅದು ಕೂಡ ಸ್ಟೈಲ್​ನಲ್ಲಿ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ವಿರುದ್ಧ ಹಲವು ಕಡೆಗಳಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್​ ದಾಖಲಾಗಿವೆ. ಹಾಗಾಗಿ ಅವರ ಪಾಸ್​ಪೋರ್ಟ್​ ನವೀಕರಣಗೊಳ್ಳುತ್ತಿಲ್ಲ. ಈ ಸಂಬಂಧ ಅವರು ಬಾಂಬೆ ಹೈಕೋರ್ಟ್​ಗೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಹಿನ್ನಡೆ ಆಯಿತು. ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ:

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್