AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಜಾವೇದ್​ ಅಖ್ತರ್​ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ಅವರು ತಪ್ಪಿಸಿಲ್ಲ.

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​
ಕಂಗನಾ ರಣಾವತ್
TV9 Web
| Edited By: |

Updated on: Sep 20, 2021 | 3:59 PM

Share

ನಟಿ ಕಂಗನಾ ರಣಾವತ್​ ವಿರುದ್ಧ ಕವಿ, ಚಿತ್ರಸಾಹಿತಿ ಜಾವೇದ್​ ಅಖ್ತರ್​ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆದಿದೆ. ಸೋಮವಾರ (ಸೆ.20) ಅಂಧೇರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಂಗನಾ ಹಾಜರಾದರು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದರೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗುವುದು ಎಂದು ಈ ಹಿಂದೆ ಕಂಗನಾಗೆ ಕೋರ್ಟ್​ ಎಚ್ಚರಿಕೆ ನೀಡಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಬರುವುದು ನಟಿಗೆ ಅನಿವಾರ್ಯ ಆಗಿತ್ತು. ಕೋರ್ಟ್​ ಹಾಜರಾಗುವುದಕ್ಕೂ ಮುನ್ನ ಜಾವೇದ್​ ಅಖ್ತರ್​ ವಿರುದ್ಧ ಕಂಗನಾ ಪ್ರತಿದೂರು ಸಲ್ಲಿಸಿದ್ದಾರೆ. ತಮಗೆ ಜಾವೇದ್​ ಅಖ್ತರ್​ ಬೆದರಿಕೆ ಹಾಕಿದ್ದಾರೆ ಎಂದು ಈ ದೂರಿನಲ್ಲಿ ಕಂಗನಾ ಆರೋಪಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ನಿಧನದ ಬಳಿಕ ಮಾಧ್ಯಮವೊಂದರ ಜೊತೆ ಮಾತನಾಡುವಾಗ ಕಂಗನಾ ಅವರು ಜಾವೇದ್​ ಅಖ್ತರ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಆಗ ಮಾನಹಾನಿ ಆಗುವ ರೀತಿಯಲ್ಲಿ ತಮ್ಮ ಬಗ್ಗೆ ಕಂಗನಾ ಮಾತನಾಡಿದ್ದರು ಎಂದು ಜಾವೇದ್​ ಅಖ್ತರ್​ ದೂರು ನೀಡಿದ್ದರು. ಈ ಕೇಸ್​ನ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕಂಗನಾ ಮನವಿ ಸಲ್ಲಿಸಿದ್ದಾರೆ. ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್​ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ!​

ಕೋರ್ಟ್​ಗೆ​ ಹೋಗಿ ಬಂದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ಇಂಥ ಸಂದರ್ಭದಲ್ಲೂ ಅವರು ಸಿನಿಮೀಯ ಡೈಲಾಗ್​ ಹೊಡೆಯುವುದನ್ನು ತಪ್ಪಿಸಿಲ್ಲ. ‘ನಿಮ್ಮನ್ನು ಬೆಳೆಸಲು ಯಾರಿಗೆ ಸಾಧ್ಯವಿಲ್ಲವೋ ಅವರಿಗೆ ನಿಮ್ಮನ್ನು ನಾಶ ಮಾಡಲು ಕೂಡ ಸಾಧ್ಯವಿಲ್ಲ. ಶಿವ ಸೇನಾ ಒತ್ತಡದಿಂದ ಜಾವೇದ್​ ಅಖ್ತರ್​ ದಾಖಲಿಸಿರುವ ಕೇಸ್​ನ ವಿಚಾರಣೆ ಇಂದು ನಡೆಯಿತು. ಕತ್ತೆಕಿರುಬಗಳನ್ನು ಸಿಂಹದ ರೀತಿ ಎದುರಿಸುತ್ತಿದ್ದೇನೆ. ಅದು ಕೂಡ ಸ್ಟೈಲ್​ನಲ್ಲಿ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ವಿರುದ್ಧ ಹಲವು ಕಡೆಗಳಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್​ ದಾಖಲಾಗಿವೆ. ಹಾಗಾಗಿ ಅವರ ಪಾಸ್​ಪೋರ್ಟ್​ ನವೀಕರಣಗೊಳ್ಳುತ್ತಿಲ್ಲ. ಈ ಸಂಬಂಧ ಅವರು ಬಾಂಬೆ ಹೈಕೋರ್ಟ್​ಗೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಹಿನ್ನಡೆ ಆಯಿತು. ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ:

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ