AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Nov 03, 2023 | 7:08 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈ ಕೊಟ್ಟಿದೆ. ಮಾಡಿದ ಸಿನಿಮಾಗಳೆಲ್ಲ ಸಾಲು ಸಾಲು ಫ್ಲಾಪ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗಲೇ ಇಲ್ಲ ಎಂದರೂ ತಪ್ಪಾಗಲಾರದು. ಒಂದು ಗೆಲುವು ಸಿಗಬಹುದು ಎಂದು ಕಂಗನಾ ಕಾದು ಕೂತಿದ್ದರು. ಆದರೆ, ಆ ರೀತಿ ಆಗಿಲ್ಲ. ಮತ್ತಷ್ಟು ಚಿತ್ರಗಳು ಸೋಲುತ್ತಲೇ ಇವೆ. ಈ ಕಾರಣಕ್ಕೆ ಅವರು ಅಪ್ಸೆಟ್ ಆಗಿದ್ದಾರೆ. ಮನಸ್ಸನ್ನು ತಿಳಿಗೊಳಿಸಿಕೊಳ್ಳಲು ಅವರು ದೇವಾಲಯದ ಮೊರೆ ಹೋಗಿದ್ದಾರೆ. ಫೋಟೋ ಹಂಚಿಕೊಂಡು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದ್ವಾರಕೆಗೆ ಕಂಗನಾ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿರುವ ಅವರು ಅದಕ್ಕೆ ಕ್ಯಾಪ್ಶನ್ ನಿಡಿದ್ದಾರೆ. ‘ಕೆಲವು ದಿನಗಳಿಂದ ನನ್ನ ಹೃದಯವು ತುಂಬಾ ತೊಂದರೆಗೀಡಾಗಿತ್ತು. ನನಗೆ ದ್ವಾರಕಾಧೀಶನನ್ನು ಭೇಟಿ ಮಾಡಬೇಕೆಂದು ಅನಿಸಿತು. ನಾನು ಈ ಶ್ರೀ ಕೃಷ್ಣನ ನಗರ ದ್ವಾರಕಾಗೆ ಬಂದ ತಕ್ಷಣ, ಇಲ್ಲಿನ ಮಣ್ಣನ್ನು ನೋಡಿ ನನ್ನ ಚಿಂತೆಗಳೆಲ್ಲವೂ ಬಿದ್ದು ಬಿದ್ದುಹೋದಂತೆ ಭಾಸವಾಯಿತು. ನಿನ್ನ ಆಶೀರ್ವಾದ ಹೀಗೆಯೇ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಪ್ರೇಕ್ಷಕರು ಇಲ್ಲದೆ ಅರ್ಧದಷ್ಟು ಶೋಗಳು ಕ್ಯಾನ್ಸಲ್ ಆಗಿವೆ. ಈ ಚಿತ್ರದ ನಿರ್ಮಾಪಕರು ಕೈ ಸುಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   

ಕಂಗನಾ ರಣಾವತ್ ಅವರು ಸದ್ಯ ‘ಎಮರ್ಜೆನ್ಸಿ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಇನ್ನು ಈ ಚಿತ್ರದ ನಿರ್ಮಾಣದಲ್ಲಿ ಅವರ ಪಾಲೂ ಇದೆ. ದುಡಿದ ಎಲ್ಲಾ ಹಣವನ್ನು ಈ ಸಿನಿಮಾ ಮೇಲೆ ಹಾಕಿರುವುದಾಗಿ ಅವರು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು