AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Nov 03, 2023 | 7:08 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈ ಕೊಟ್ಟಿದೆ. ಮಾಡಿದ ಸಿನಿಮಾಗಳೆಲ್ಲ ಸಾಲು ಸಾಲು ಫ್ಲಾಪ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗಲೇ ಇಲ್ಲ ಎಂದರೂ ತಪ್ಪಾಗಲಾರದು. ಒಂದು ಗೆಲುವು ಸಿಗಬಹುದು ಎಂದು ಕಂಗನಾ ಕಾದು ಕೂತಿದ್ದರು. ಆದರೆ, ಆ ರೀತಿ ಆಗಿಲ್ಲ. ಮತ್ತಷ್ಟು ಚಿತ್ರಗಳು ಸೋಲುತ್ತಲೇ ಇವೆ. ಈ ಕಾರಣಕ್ಕೆ ಅವರು ಅಪ್ಸೆಟ್ ಆಗಿದ್ದಾರೆ. ಮನಸ್ಸನ್ನು ತಿಳಿಗೊಳಿಸಿಕೊಳ್ಳಲು ಅವರು ದೇವಾಲಯದ ಮೊರೆ ಹೋಗಿದ್ದಾರೆ. ಫೋಟೋ ಹಂಚಿಕೊಂಡು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದ್ವಾರಕೆಗೆ ಕಂಗನಾ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿರುವ ಅವರು ಅದಕ್ಕೆ ಕ್ಯಾಪ್ಶನ್ ನಿಡಿದ್ದಾರೆ. ‘ಕೆಲವು ದಿನಗಳಿಂದ ನನ್ನ ಹೃದಯವು ತುಂಬಾ ತೊಂದರೆಗೀಡಾಗಿತ್ತು. ನನಗೆ ದ್ವಾರಕಾಧೀಶನನ್ನು ಭೇಟಿ ಮಾಡಬೇಕೆಂದು ಅನಿಸಿತು. ನಾನು ಈ ಶ್ರೀ ಕೃಷ್ಣನ ನಗರ ದ್ವಾರಕಾಗೆ ಬಂದ ತಕ್ಷಣ, ಇಲ್ಲಿನ ಮಣ್ಣನ್ನು ನೋಡಿ ನನ್ನ ಚಿಂತೆಗಳೆಲ್ಲವೂ ಬಿದ್ದು ಬಿದ್ದುಹೋದಂತೆ ಭಾಸವಾಯಿತು. ನಿನ್ನ ಆಶೀರ್ವಾದ ಹೀಗೆಯೇ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಪ್ರೇಕ್ಷಕರು ಇಲ್ಲದೆ ಅರ್ಧದಷ್ಟು ಶೋಗಳು ಕ್ಯಾನ್ಸಲ್ ಆಗಿವೆ. ಈ ಚಿತ್ರದ ನಿರ್ಮಾಪಕರು ಕೈ ಸುಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   

ಕಂಗನಾ ರಣಾವತ್ ಅವರು ಸದ್ಯ ‘ಎಮರ್ಜೆನ್ಸಿ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಇನ್ನು ಈ ಚಿತ್ರದ ನಿರ್ಮಾಣದಲ್ಲಿ ಅವರ ಪಾಲೂ ಇದೆ. ದುಡಿದ ಎಲ್ಲಾ ಹಣವನ್ನು ಈ ಸಿನಿಮಾ ಮೇಲೆ ಹಾಕಿರುವುದಾಗಿ ಅವರು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು