AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Nov 03, 2023 | 7:08 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈ ಕೊಟ್ಟಿದೆ. ಮಾಡಿದ ಸಿನಿಮಾಗಳೆಲ್ಲ ಸಾಲು ಸಾಲು ಫ್ಲಾಪ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗಲೇ ಇಲ್ಲ ಎಂದರೂ ತಪ್ಪಾಗಲಾರದು. ಒಂದು ಗೆಲುವು ಸಿಗಬಹುದು ಎಂದು ಕಂಗನಾ ಕಾದು ಕೂತಿದ್ದರು. ಆದರೆ, ಆ ರೀತಿ ಆಗಿಲ್ಲ. ಮತ್ತಷ್ಟು ಚಿತ್ರಗಳು ಸೋಲುತ್ತಲೇ ಇವೆ. ಈ ಕಾರಣಕ್ಕೆ ಅವರು ಅಪ್ಸೆಟ್ ಆಗಿದ್ದಾರೆ. ಮನಸ್ಸನ್ನು ತಿಳಿಗೊಳಿಸಿಕೊಳ್ಳಲು ಅವರು ದೇವಾಲಯದ ಮೊರೆ ಹೋಗಿದ್ದಾರೆ. ಫೋಟೋ ಹಂಚಿಕೊಂಡು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದ್ವಾರಕೆಗೆ ಕಂಗನಾ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿರುವ ಅವರು ಅದಕ್ಕೆ ಕ್ಯಾಪ್ಶನ್ ನಿಡಿದ್ದಾರೆ. ‘ಕೆಲವು ದಿನಗಳಿಂದ ನನ್ನ ಹೃದಯವು ತುಂಬಾ ತೊಂದರೆಗೀಡಾಗಿತ್ತು. ನನಗೆ ದ್ವಾರಕಾಧೀಶನನ್ನು ಭೇಟಿ ಮಾಡಬೇಕೆಂದು ಅನಿಸಿತು. ನಾನು ಈ ಶ್ರೀ ಕೃಷ್ಣನ ನಗರ ದ್ವಾರಕಾಗೆ ಬಂದ ತಕ್ಷಣ, ಇಲ್ಲಿನ ಮಣ್ಣನ್ನು ನೋಡಿ ನನ್ನ ಚಿಂತೆಗಳೆಲ್ಲವೂ ಬಿದ್ದು ಬಿದ್ದುಹೋದಂತೆ ಭಾಸವಾಯಿತು. ನಿನ್ನ ಆಶೀರ್ವಾದ ಹೀಗೆಯೇ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಪ್ರೇಕ್ಷಕರು ಇಲ್ಲದೆ ಅರ್ಧದಷ್ಟು ಶೋಗಳು ಕ್ಯಾನ್ಸಲ್ ಆಗಿವೆ. ಈ ಚಿತ್ರದ ನಿರ್ಮಾಪಕರು ಕೈ ಸುಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   

ಕಂಗನಾ ರಣಾವತ್ ಅವರು ಸದ್ಯ ‘ಎಮರ್ಜೆನ್ಸಿ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಇನ್ನು ಈ ಚಿತ್ರದ ನಿರ್ಮಾಣದಲ್ಲಿ ಅವರ ಪಾಲೂ ಇದೆ. ದುಡಿದ ಎಲ್ಲಾ ಹಣವನ್ನು ಈ ಸಿನಿಮಾ ಮೇಲೆ ಹಾಕಿರುವುದಾಗಿ ಅವರು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?