AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಗೆ ಹೊಡೆದಿದ್ದಕ್ಕೆ ಬಾಲಿವುಡ್ ಮಂದಿಗೆ ಖುಷಿ ಆಗಿದ್ಯಾ? ಪ್ರತಿಕ್ರಿಯಿಸಿದ ನಟಿ

‘ಪ್ರೀತಿಯ ಚಿತ್ರರಂಗದವರೇ, ನನ್ನ ಮೇಲೆ ವಿಮಾನ ನಿಲ್ದಾಣದಲ್ಲಿ ದಾಳಿ ಆಗಿದ್ದಕ್ಕೆ ನೀವೆಲ್ಲ ಸಂಭ್ರಮ ಆಚರಿಸುತ್ತಿರಬಹುದು ಮತ್ತು ನೀವೆಲ್ಲ ಸಂಪೂರ್ಣ ಮೌನವಾಗಿದ್ದೀರಿ’ ಎಂದು ಹೇಳಿದ್ದಾರೆ ನಟಿ ಕಂಗನಾ ರಣಾವತ್​. ‘ಮುಂದೆ ನಿಮಗೂ ಈ ರೀತಿ ಆಗಬಹುದು’ ಎಂದು ಕೂಡ ಅವರು ಎಚ್ಚರಿಕೆ ನೀಡಿದ್ದಾರೆ. ಆದರೆ ನಂತರದಲ್ಲಿ ಇದನ್ನು ಅವರು ಡಿಲೀಟ್​ ಮಾಡಿದ್ದಾರೆ.

ಕಂಗನಾಗೆ ಹೊಡೆದಿದ್ದಕ್ಕೆ ಬಾಲಿವುಡ್ ಮಂದಿಗೆ ಖುಷಿ ಆಗಿದ್ಯಾ? ಪ್ರತಿಕ್ರಿಯಿಸಿದ ನಟಿ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 07, 2024 | 9:57 PM

Share

ನಟಿ, ನೂತನ ಸಂಸದೆ ಕಂಗನಾ ರಣಾವತ್​ (Kangana Ranaut) ಅವರು ಒಂದಿಲ್ಲಾ ಒಂದು ಕಾಂಟ್ರವರ್ಸಿಯಲ್ಲಿ ಸಿಲುಕಿಕೊಳ್ಳುತ್ತಲೇ ಇರುತ್ತಾರೆ. 2020ರಲ್ಲಿ ಅವರು ಪಂಜಾಬ್​ ರೈತರ ಚಳುವಳಿ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದ ಹುಟ್ಟಿಕೊಂಡಿತ್ತು. ‘ಈ ಹೋರಾಟಗಾರರು 100 ರೂಪಾಯಿಗೆ ಬರುತ್ತಾರೆ’ ಎಂಬ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್ (Kulwinder Kaur)​ ಅವರು ಗುರುವಾರ (ಜೂನ್​ 6) ಕಂಗನಾರ ಕೆನ್ನೆಗೆ ಬಾರಿಸಿದ್ದು ದೊಡ್ಡ ಸುದ್ದಿ ಆಯಿತು. ಆ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್​ (Bollywood) ಸೆಲೆಬ್ರಿಟಿಗಳು ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ಅದು ಕಂಗನಾ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

ಹಿಂದಿ ಚಿತ್ರರಂಗದಲ್ಲಿ ಕಂಗನಾ ರಣಾವತ್​ ಅವರು ಬಂಡಾಯ ಎದ್ದು ಹಲವು ವರ್ಷ ಕಳೆದಿದೆ. ಅನೇಕ ಸೆಲೆಬ್ರಿಟಿಗಳ ವಿರುದ್ಧ ಅವರು ಆಗಾಗ ಕಿಡಿಕಾರುತ್ತಾರೆ. ಕರಣ್​ ಜೋಹರ್​, ಆಲಿಯಾ ಭಟ್, ರಣಬೀರ್​ ಕಪೂರ್​ ಮುಂತಾದವರ ವಿರುದ್ಧ ಅವರು ಸಿಡುಕುತ್ತಾರೆ. ಈಗ ಕಂಗನಾ ರಣಾವತ್​ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ್ದನ್ನು ಬಿ-ಟೌನ್​ ಮಂದಿ ಸೆಲೆಬ್ರೇಟ್​ ಮಾಡುತ್ತಿರಬಹುದಾ? ಕಂಗನಾಗೆ ಆ ರೀತಿ ಅನಿಸಿದೆ.

ಈ ಕುರಿತು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದರು. ಆದರೆ ಕೂಡಲೇ ಅದನ್ನು ಡಿಲೀಟ್​ ಕೂಡ ಮಾಡಿದ್ದಾರೆ. ‘ಪ್ರೀತಿಯ ಚಿತ್ರರಂಗದವರೇ, ನನ್ನ ಮೇಲೆ ವಿಮಾನ ನಿಲ್ದಾಣದಲ್ಲಿ ದಾಳಿ ಆಗಿದ್ದಕ್ಕೆ ನೀವೆಲ್ಲ ಸಂಭ್ರಮಿಸುತ್ತಿರಬಹುದು. ನೀವೆಲ್ಲ ಸಂಪೂರ್ಣ ಮೌನವಾಗಿದ್ದೀರಿ’ ಎಂದು ಹೇಳಿರುವ ಕಂಗನಾ ಅವರು ‘ಮುಂದೆ ನಿಮಗೂ ಈ ರೀತಿ ಆಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ರಫಾ ಹತ್ಯಾಕಾಂಡವನ್ನು ಖಂಡಿಸಿ ‘All Eyes On Rafah’ (ರಫಾ ಮೇಲೆ ಎಲ್ಲರ ಕಣ್ಣು) ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆ ವಿಚಾರವನ್ನು ಕಂಗನಾ ರಣಾವತ್​ ಅವರು ಈಗ ಟೀಕಿಸಿದ್ದಾರೆ. ‘ರಫಾ ಮೇಲೆ ಎಲ್ಲರ ಕಣ್ಣು ಎನ್ನುವ ಗ್ಯಾಂಗ್​ನವರೇ.. ನಿಮಗೂ ಮತ್ತು ನಿಮ್ಮ ಮಕ್ಕಳಿಗೂ ಈ ರೀತಿ ಆಗಬಹುದು. ಇನ್ನೊಬ್ಬರ ಮೇಲೆ ಆಗುವ ಭಯೋತ್ಪಾದಕ ದಾಳಿಯನ್ನು ನೀವು ಬೆಂಬಲಿಸಿದರೆ ನಿಮ್ಮ ಮೇಲೂ ಹಾಗೆಯೇ ಆಗುತ್ತದೆ. ಆ ದಿನಕ್ಕಾಗಿ ಸಿದ್ಧರಾಗಿರಿ’ ಎಂದು ಕಂಗನಾ ಅವರು ಪೋಸ್ಟ್​ ಮಾಡಿದ್ದರು. ನಂತರ ಡಿಲೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ