AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಗೆ ಹೊಡೆದಿದ್ದಕ್ಕೆ ಬಾಲಿವುಡ್ ಮಂದಿಗೆ ಖುಷಿ ಆಗಿದ್ಯಾ? ಪ್ರತಿಕ್ರಿಯಿಸಿದ ನಟಿ

‘ಪ್ರೀತಿಯ ಚಿತ್ರರಂಗದವರೇ, ನನ್ನ ಮೇಲೆ ವಿಮಾನ ನಿಲ್ದಾಣದಲ್ಲಿ ದಾಳಿ ಆಗಿದ್ದಕ್ಕೆ ನೀವೆಲ್ಲ ಸಂಭ್ರಮ ಆಚರಿಸುತ್ತಿರಬಹುದು ಮತ್ತು ನೀವೆಲ್ಲ ಸಂಪೂರ್ಣ ಮೌನವಾಗಿದ್ದೀರಿ’ ಎಂದು ಹೇಳಿದ್ದಾರೆ ನಟಿ ಕಂಗನಾ ರಣಾವತ್​. ‘ಮುಂದೆ ನಿಮಗೂ ಈ ರೀತಿ ಆಗಬಹುದು’ ಎಂದು ಕೂಡ ಅವರು ಎಚ್ಚರಿಕೆ ನೀಡಿದ್ದಾರೆ. ಆದರೆ ನಂತರದಲ್ಲಿ ಇದನ್ನು ಅವರು ಡಿಲೀಟ್​ ಮಾಡಿದ್ದಾರೆ.

ಕಂಗನಾಗೆ ಹೊಡೆದಿದ್ದಕ್ಕೆ ಬಾಲಿವುಡ್ ಮಂದಿಗೆ ಖುಷಿ ಆಗಿದ್ಯಾ? ಪ್ರತಿಕ್ರಿಯಿಸಿದ ನಟಿ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 07, 2024 | 9:57 PM

Share

ನಟಿ, ನೂತನ ಸಂಸದೆ ಕಂಗನಾ ರಣಾವತ್​ (Kangana Ranaut) ಅವರು ಒಂದಿಲ್ಲಾ ಒಂದು ಕಾಂಟ್ರವರ್ಸಿಯಲ್ಲಿ ಸಿಲುಕಿಕೊಳ್ಳುತ್ತಲೇ ಇರುತ್ತಾರೆ. 2020ರಲ್ಲಿ ಅವರು ಪಂಜಾಬ್​ ರೈತರ ಚಳುವಳಿ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದ ಹುಟ್ಟಿಕೊಂಡಿತ್ತು. ‘ಈ ಹೋರಾಟಗಾರರು 100 ರೂಪಾಯಿಗೆ ಬರುತ್ತಾರೆ’ ಎಂಬ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್ (Kulwinder Kaur)​ ಅವರು ಗುರುವಾರ (ಜೂನ್​ 6) ಕಂಗನಾರ ಕೆನ್ನೆಗೆ ಬಾರಿಸಿದ್ದು ದೊಡ್ಡ ಸುದ್ದಿ ಆಯಿತು. ಆ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್​ (Bollywood) ಸೆಲೆಬ್ರಿಟಿಗಳು ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ಅದು ಕಂಗನಾ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

ಹಿಂದಿ ಚಿತ್ರರಂಗದಲ್ಲಿ ಕಂಗನಾ ರಣಾವತ್​ ಅವರು ಬಂಡಾಯ ಎದ್ದು ಹಲವು ವರ್ಷ ಕಳೆದಿದೆ. ಅನೇಕ ಸೆಲೆಬ್ರಿಟಿಗಳ ವಿರುದ್ಧ ಅವರು ಆಗಾಗ ಕಿಡಿಕಾರುತ್ತಾರೆ. ಕರಣ್​ ಜೋಹರ್​, ಆಲಿಯಾ ಭಟ್, ರಣಬೀರ್​ ಕಪೂರ್​ ಮುಂತಾದವರ ವಿರುದ್ಧ ಅವರು ಸಿಡುಕುತ್ತಾರೆ. ಈಗ ಕಂಗನಾ ರಣಾವತ್​ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ್ದನ್ನು ಬಿ-ಟೌನ್​ ಮಂದಿ ಸೆಲೆಬ್ರೇಟ್​ ಮಾಡುತ್ತಿರಬಹುದಾ? ಕಂಗನಾಗೆ ಆ ರೀತಿ ಅನಿಸಿದೆ.

ಈ ಕುರಿತು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದರು. ಆದರೆ ಕೂಡಲೇ ಅದನ್ನು ಡಿಲೀಟ್​ ಕೂಡ ಮಾಡಿದ್ದಾರೆ. ‘ಪ್ರೀತಿಯ ಚಿತ್ರರಂಗದವರೇ, ನನ್ನ ಮೇಲೆ ವಿಮಾನ ನಿಲ್ದಾಣದಲ್ಲಿ ದಾಳಿ ಆಗಿದ್ದಕ್ಕೆ ನೀವೆಲ್ಲ ಸಂಭ್ರಮಿಸುತ್ತಿರಬಹುದು. ನೀವೆಲ್ಲ ಸಂಪೂರ್ಣ ಮೌನವಾಗಿದ್ದೀರಿ’ ಎಂದು ಹೇಳಿರುವ ಕಂಗನಾ ಅವರು ‘ಮುಂದೆ ನಿಮಗೂ ಈ ರೀತಿ ಆಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ರಫಾ ಹತ್ಯಾಕಾಂಡವನ್ನು ಖಂಡಿಸಿ ‘All Eyes On Rafah’ (ರಫಾ ಮೇಲೆ ಎಲ್ಲರ ಕಣ್ಣು) ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆ ವಿಚಾರವನ್ನು ಕಂಗನಾ ರಣಾವತ್​ ಅವರು ಈಗ ಟೀಕಿಸಿದ್ದಾರೆ. ‘ರಫಾ ಮೇಲೆ ಎಲ್ಲರ ಕಣ್ಣು ಎನ್ನುವ ಗ್ಯಾಂಗ್​ನವರೇ.. ನಿಮಗೂ ಮತ್ತು ನಿಮ್ಮ ಮಕ್ಕಳಿಗೂ ಈ ರೀತಿ ಆಗಬಹುದು. ಇನ್ನೊಬ್ಬರ ಮೇಲೆ ಆಗುವ ಭಯೋತ್ಪಾದಕ ದಾಳಿಯನ್ನು ನೀವು ಬೆಂಬಲಿಸಿದರೆ ನಿಮ್ಮ ಮೇಲೂ ಹಾಗೆಯೇ ಆಗುತ್ತದೆ. ಆ ದಿನಕ್ಕಾಗಿ ಸಿದ್ಧರಾಗಿರಿ’ ಎಂದು ಕಂಗನಾ ಅವರು ಪೋಸ್ಟ್​ ಮಾಡಿದ್ದರು. ನಂತರ ಡಿಲೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?