AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಿನಾಯಿತಿ, ಉಚಿತ ಟಿಕೆಟ್: ಆದರೂ ಏಳುತ್ತಿಲ್ಲ ಕಂಗನಾ ಸಿನಿಮಾ

Kangana Ranaut movie: ನಟಿ ಮತ್ತು ಸಂಸದೆ ಆಗಿರುವ ಕಂಗನಾ ರನೌತ್ ಅವರು ಶುಶ್ರೂಕಿಯ ಪಾತ್ರದಲ್ಲಿ ನಟಿಸಿರುವ ‘ಭಾರತ್ ಭಾಗ್ಯ ವಿಧಾತ’ ಸಿನಿಮಾ 2008 ರಲ್ಲಿ ನಡೆದ ಮುಂಬೈ ದಾಳಿಯ ವೇಳೆ ಮುಂಬೈನ ಕಾಮಾ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಕಿಯರು ತೋರಿದ ಅಭೂತಪೂರ್ವ ಧೈರ್ಯ, ತ್ಯಾಗ ಮತ್ತು ಸೇವೆಯ ಕತೆಯನ್ನು ಒಳಗೊಂಡಿದೆ. ಸಿನಿಮಾದ ಕಥಾವಸ್ತು ಚೆನ್ನಾಗಿದೆಯಾದರೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಲು ನೀರಸ ಪ್ರದರ್ಶನ ತೋರುತ್ತಿದೆ.

ತೆರಿಗೆ ವಿನಾಯಿತಿ, ಉಚಿತ ಟಿಕೆಟ್: ಆದರೂ ಏಳುತ್ತಿಲ್ಲ ಕಂಗನಾ ಸಿನಿಮಾ
Bharat Bhagya Vidata
ಮಂಜುನಾಥ ಸಿ.
|

Updated on: Jun 14, 2026 | 8:46 PM

Share

ಕಂಗನಾ ರನೌತ್ (Kangana Ranaut) ನಟನೆಯ ‘ಭಾರತ ಭಾಗ್ಯ ವಿಧಾತ’ ಹೆಸರಿನ ಸಿನಿಮಾ ಎರಡು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ನಟಿ ಮತ್ತು ಸಂಸದೆ ಆಗಿರುವ ಕಂಗನಾ ರನೌತ್ ಅವರು ಶುಶ್ರೂಕಿಯ ಪಾತ್ರದಲ್ಲಿ ನಟಿಸಿದ್ದಾರೆ. 2008 ರಲ್ಲಿ ನಡೆದ ಮುಂಬೈ ದಾಳಿಯ ವೇಳೆ ಮುಂಬೈನ ಕಾಮಾ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಕಿಯರು ತೋರಿದ ಅಭೂತಪೂರ್ವ ಧೈರ್ಯ, ತ್ಯಾಗ ಮತ್ತು ಸೇವೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಕಥಾವಸ್ತು ಚೆನ್ನಾಗಿದೆಯಾದರೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಲು ನೀರಸ ಪ್ರದರ್ಶನ ತೋರುತ್ತಿದೆ.

ಕಂಗನಾ ನಟನೆಯ ಈ ಸಿನಿಮಾಕ್ಕೆ ಹರಿಯಾಣದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಶನಿವಾರ ಸಿನಿಮಾದ ವಿಶೇಷ ಸ್ಕ್ರೀನಿಂಗ್ಗೆ ಹಾಜರಾಗಿ ಸಿನಿಮಾ ನೋಡಿದ ಹರಿಯಾಣ ಸಿಎಂ ನಯಾಬ್ ಸಿಂಗ್ ಅವರು, ಈ ಸಿನಿಮಾವು ಇದು ಧೈರ್ಯ, ಕರುಣೆ, ಕರ್ತವ್ಯ ಮತ್ತು ಮಾನವೀಯತೆಯ ಶಕ್ತಿಯುತ ಕಥೆಯನ್ನು ಸಾರುತ್ತದೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಪೂರ್ತಿ ನೀಡುತ್ತದೆ ಎಂದು ಬಣ್ಣಿಸಿದರು. ಚಿತ್ರದ ವಿಶೇಷ ಪ್ರದರ್ಶನದ ವೇಳೆ ಮುಖ್ಯಮಂತ್ರಿಯವರ ಪತ್ನಿ ಸುಮನ್ ಸೈನಿ, ಅವರ ಸಂಪುಟದ ಕೆಲವು ಸಚಿವರು ಮತ್ತು ನಟಿ ಕಂಗನಾ ರನೌತ್ ಉಪಸ್ಥಿತರಿದ್ದರು.

ಇದೇ ಸಿನಿಮಾಕ್ಕೆ ಇಡೀ ದೇಶದಾದ್ಯಂತ ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ ಎಂಬ ಘೋಷಣೆಯನ್ನೂ ಸಹ ಚಿತ್ರತಂಡ ಘೋಷಿಸಿದೆ. ಬುಕ್​​ಮೈ ಶೋ ಮೂಲಕ ಟಿಕೆಟ್ ಬುಕ್ ಮಾಡುವವರು ‘BHARAT’ ಎಂಬ ಕೋಡ್ ಬಳಸಿ ಟಿಕೆಟ್ ಬುಕ್ ಮಾಡಿದಲ್ಲಿ ಒಂದು ಟಿಕೆಟ್ ಬೆಲೆಗೆ ಎರಡು ಟಿಕೆಟ್ ಬುಕ್ ಮಾಡಬಹುದಾಗಿದೆ. ದೇಶದಾದ್ಯಂತ ಎಲ್ಲ ನಗರಗಳಲ್ಲಿಯೂ ಈ ಆಫರ್ ಚಾಲ್ತಿಯಲ್ಲಿದೆ.

ಇದನ್ನೂ ಓದಿ:ಅಪರೂಪಕ್ಕೆ ದೀಪಿಕಾ ಪಡುಕೋಣೆಯನ್ನು ಕೊಂಡಾಡಿದ ಕಂಗನಾ ರನೌತ್

ಇಷ್ಟೆಲ್ಲ ಆದರೂ ಸಹ ‘ಭಾರತ್ ಭಾಗ್ಯ ವಿಧಾತ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನೀರಸ ಕಲೆಕ್ಷನ್ ಮಾಡಿದೆ. ಮೊದಲ ದಿನ ಒಂದು ಕೋಟಿ ಗಳಿಸಿದ್ದ ಈ ಸಿನಿಮಾ ವೀಕೆಂಡ್​​ನಲ್ಲಿ ಅಷ್ಟೇನೂ ಉತ್ತಮ ಮೊತ್ತ ಗಳಿಸಿಲ್ಲ ಆದರೆ ಮೊದಲ ದಿನಕ್ಕೆ ಹೋಲಿಸಿದರೆ ನಿನ್ನೆ (ಶನಿವಾರ) ಗಳಿಕೆಯಲ್ಲಿ ಸಣ್ಣ ಏರಿಕೆ ಕಂಡು ಬಂದಿದೆ. ಎರಡನೇ ದಿನ ಅಂದರೆ ಶನಿವಾರದಂದು ಸಿನಿಮಾ 1.45 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈಗ ತೆರಿಗೆ ವಿನಾಯಿತಿ, ಒಂದು ಟಿಕೆಟ್​​ಗೆ ಇನ್ನೊಂದು ಫ್ರೀ ಆಫರ್​ಗಳ ಬಳಿಕ ಭಾನುವಾರದ ಗಳಿಕೆ ಇನ್ನಷ್ಟು ಉತ್ತಮಗೊಳ್ಳುವ ನಿರೀಕ್ಷೆ ಚಿತ್ರತಂಡದ್ದು.

ಈ ಸಿನಿಮಾ ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಕತೆಯನ್ನು ಒಳಗೊಂಡಿದೆ. ಭಯೋತ್ಪಾದಕರು ಆಸ್ಪತ್ರೆಯ ಒಳಗೆ ನುಗ್ಗಿದಾಗ, ನರ್ಸ್‌ಗಳು, ವಾರ್ಡ್ ಬಾಯ್‌ಗಳು, ಸ್ವಚ್ಛತಾ ಸಿಬ್ಬಂದಿ, ಲಿಫ್ಟ್ ಆಪರೇಟರ್‌ಗಳು ಮತ್ತು ಭದ್ರತಾ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಹೇಗೆ ದೃಢವಾಗಿ ನಿರ್ವಹಿಸಿದರು ಹಾಗೂ ನೂರಾರು ಜೀವಗಳನ್ನು ಹೇಗೆ ಕಾಪಾಡಿದರು ಎಂಬುದನ್ನು ಸಿನಿಮಾನಲ್ಲಿ ತೋರಿಸಲಾಗಿದೆ. ಕಂಗನಾ ರನೌತ್, ಗಿರಿಜಾ ಓಕ್, ಸ್ಮಿತಾ ತಾಂಬೆ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶಿಸಿರುವುದು ಮನೋಜ್ ತಪಾಡಿಯಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್