AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ನಟನೆಯ ‘ಧಾಕಡ್​’ ಚಿತ್ರ ನೋಡಲು ಒಬ್ಬರೂ ಬರಲಿಲ್ಲ; ಹಲವು ಕಡೆಗಳಲ್ಲಿ ಶೋ ಕ್ಯಾನ್ಸಲ್​

Dhaakad Movie Box Office Collection: ಗಲ್ಲಾಪೆಟ್ಟಿಗೆಯಲ್ಲಿ ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಊಹಿಸಲೂ ಆಗದ ರೀತಿಯಲ್ಲಿ ಸೋತಿದೆ. ಪ್ರೇಕ್ಷಕರು ಈ ಚಿತ್ರದ ಬಗ್ಗೆ ಕಿಂಚಿತ್ತೂ ಆಸಕ್ತಿ ತೋರಿಸಿಲ್ಲ.

ಕಂಗನಾ ನಟನೆಯ ‘ಧಾಕಡ್​’ ಚಿತ್ರ ನೋಡಲು ಒಬ್ಬರೂ ಬರಲಿಲ್ಲ; ಹಲವು ಕಡೆಗಳಲ್ಲಿ ಶೋ ಕ್ಯಾನ್ಸಲ್​
ಕಂಗನಾ ರಣಾವತ್
Follow us
TV9 Web
| Updated By: ಮದನ್​ ಕುಮಾರ್​

Updated on:May 23, 2022 | 2:01 PM

ಸಿನಿಮಾ ರಂಗದಲ್ಲಿ ಸೋಲು-ಗೆಲುವು ಸಹಜ. ಆದರೆ ತೀರಾ ಹೀನಾಯಾವಾಗಿ ಸೋತರೆ ಸಖತ್​ ಬೇಸರ ಆಗುತ್ತದೆ. ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ನಿಜಕ್ಕೂ ಅಂತಹ ದುಸ್ಥಿತಿ ಬಂದಿದೆ. ಅವರು ಬಾಲಿವುಡ್​ನಲ್ಲಿ (Bollywood) ಲೇಡಿ ಸೂಪರ್​ ಸ್ಟಾರ್​ ರೀತಿ ವರ್ತಿಸುತ್ತಿದ್ದರು. ಹಿಂದಿ ಚಿತ್ರರಂಗದ ಬೇರೆ ನಟ-ನಟಿಯರನ್ನು, ನಿರ್ದೇಶಕರನ್ನು ಹೀಯಾಳಿಸುತ್ತಿದ್ದರು. ಆದರೆ ಈಗ ಅವರ ಸಿನಿಮಾವೇ ಹೀನಾಯವಾಗಿ ಸೋತಿದೆ. ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಚಿತ್ರ (Dhaakad Movie) ಮೇ 20ರಂದು ವಿಶ್ವಾದ್ಯಂತ ಬಿಡುಗಡೆ ಆಯಿತು. ಮೂರು ದಿನ ಕಳೆಯುವುದರೊಳಗೆ ಈ ಚಿತ್ರ ಗಂಟುಮೂಟೆ ಕಟ್ಟಿಕೊಂಡು ಥಿಯೇಟರ್​ನಿಂದ ಎತ್ತಂಗಡಿ ಆಗಿದೆ. ಹಲವು ಕಡೆಗಳಲ್ಲಿ ಈ ಸಿನಿಮಾವನ್ನು ನೋಡಲು ಒಬ್ಬನೇ ಒಬ್ಬ ಪ್ರೇಕ್ಷಕ ಕೂಡ ಬಂದಿಲ್ಲ ಎಂಬುದು ವಿಪರ್ಯಾಸ! ಹಾಗಾಗಿ ಚಿತ್ರಮಂದಿರದವರು ಈ ಸಿನಿಮಾದ ಶೋ ಕ್ಯಾನ್ಸಲ್​ ಮಾಡಿದ್ದಾರೆ. ಇದರಿಂದಾಗಿ ಕಂಗನಾ ರಣಾವತ್​ ಅವರಿಗೆ ತೀವ್ರ ಮುಖಭಂಗ ಆಗಿದೆ. ಇದು ಅವರ ವೃತ್ತಿಜೀವನದ ಅತಿ ದೊಡ್ಡ ಸೋಲು ಎಂದು ಬಣ್ಣಿಸಲಾಗುತ್ತಿದೆ. ‘ಧಾಕಡ್​’ ಚಿತ್ರದ ಕಳಪೆ ಪ್ರದರ್ಶನದಿಂದಾಗಿ ಕಂಗನಾ ರಣಾವತ್​ ಅವರ ಚಾರ್ಮ್​ ಕುಸಿದು ಹೋಗಿದೆ.

‘ಧಾಕಡ್​’ ಸಿನಿಮಾದಲ್ಲಿ ಕಂಗನಾ ರಣಾವತ್​ ಅವರು ಆ್ಯಕ್ಷನ್​ ಅವತಾರ ತಾಳಿದ್ದಾರೆ. ಭರ್ಜರಿಯಾಗಿ ಅವರು ಸಾಹಸ ದೃಶ್ಯಗಳಲ್ಲಿ ನಟಿಸಿದ್ದಾರೆ. ಟ್ರೇಲರ್​ ಬಿಡುಗಡೆ ಆದಾಗ ಅನೇಕರು ಮೆಚ್ಚುಗೆ ಸೂಚಿಸಿದ್ದರು. ಸಲ್ಮಾನ್​ ಖಾನ್​ ಕೂಡ ಈ ಚಿತ್ರದ ಟ್ರೇಲರ್ ಅನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಶುಭ ಹಾರೈಸಿದ್ದರು. ಏನೇ ಮಾಡಿದರೂ ಕೂಡ ಈ ಸಿನಿಮಾ ಬಗ್ಗೆ ಆಸಕ್ತಿ ತೋರಿಸಿಲ್ಲ. ಮೇ 20ರಂದು ‘ಧಾಕಡ್​’ ಬಿಡುಗಡೆಯಾದ ಬಹುತೇಕ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿದ್ದವು. ಸಿನಿಮಾ ನೋಡಿದ ಕೆಲವೇ ಕೆಲವು ಮಂದಿ ಕೂಡ ಒಳ್ಳೆಯ ಅಭಿಪ್ರಾಯ ಹಂಚಿಕೊಂಡಿಲ್ಲ. ಇದರಿಂದಾಗಿ ‘ಧಾಕಡ್​’ ಚಿತ್ರ ತೀವ್ರ ಸೋಲು ಅನುಭವಿಸಿದೆ.

ಇದನ್ನೂ ಓದಿ: ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

ಇದನ್ನೂ ಓದಿ
Image
Dhaakad Collection: ‘ಧಾಕಡ್’​ ಡಿಸಾಸ್ಟರ್; ಕಂಗನಾ ನಂಬಿ ನೂರಾರು ಕೋಟಿ ರೂಪಾಯಿ ಲಾಸ್​ ಮಾಡಿಕೊಂಡ ನಿರ್ಮಾಪಕರು ಕಂಗಾಲು
Image
ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ
Image
‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?

ಹಿಂದಿ ಚಿತ್ರರಂಗದಲ್ಲಿ ಇದನ್ನು ಡಿಸಾಸ್ಟರ್​ ಎನ್ನದೇ ಬೇರೇನೂ ಹೇಳಲು ಸಾಧ್ಯವಿಲ್ಲ. ಬಾಲಿವುಡ್​ ಸ್ಟಾರ್​ ಕಲಾವಿದರ ಚಿತ್ರಗಳು ಮೊದಲ ದಿನ ಕನಿಷ್ಠ ಪ್ರಮಾಣದ ಕಲೆಕ್ಷನ್​ ಮಾಡುತ್ತವೆ. ಆದರೆ ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಮಾಡಿದ್ದು ಕೇವಲ 50 ಲಕ್ಷ ರೂಪಾಯಿ. ಎರಡನೇ ದಿನವಾದ ಶನಿವಾರ (ಮೇ 21) ಕೂಡ ಪರಿಸ್ಥಿತಿ ಸುಧಾರಿಸಲಿಲ್ಲ. ಅಂದು ಕೂಡ ಬರೀ 50 ಲಕ್ಷ ರೂ. ಗಳಿಸುವಲ್ಲಿ ಈ ಚಿತ್ರ ಹೈರಾಣಾಯಿತು. ಮೂರನೇ ದಿನವಾದ ಭಾನುವಾರ (ಮೇ 22) ಕೂಡ ಹೆಚ್ಚು-ಕಡಿಮೆ ಅಷ್ಟೇ ಕಲೆಕ್ಷನ್​ ಆಗಿದೆ. ಇಷ್ಟು ಕಳಪೆ ಪ್ರದರ್ಶನ ನೀಡಿದ ‘ಧಾಕಡ್​’ ಸಿನಿಮಾವನ್ನು ಕಿತ್ತೊಗೆಯದ ಹೊರತು ಚಿತ್ರಮಂದಿರದ ಮಾಲಿಕರಿಗೆ ಬೇರೆ ಯಾವುದೇ ಆಯ್ಕೆ ಉಳಿದಿಲ್ಲ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

‘ಧಾಕಡ್​’ ಸಿನಿಮಾದ ಸೋಲಿಗೆ ಕೆಲವು ಕಾರಣಗಳಿವೆ. ಮೊದಲನೆಯದಾಗಿ ಇದು ‘ಎ’ ಪ್ರಮಾಣ ಪತ್ರ ಪಡೆದಿರುವ ಸಿನಿಮಾ. 18 ವರ್ಷ ವಯಸ್ಸಿಗಿಂತ ಚಿಕ್ಕ ಮಕ್ಕಳು ಈ ಸಿನಿಮಾವನ್ನು ನೋಡುವಂತಿಲ್ಲ. ಹಾಗಾಗಿ ಫ್ಯಾಮಿಲಿ ಆಡಿಯನ್ಸ್​ ‘ಧಾಕಡ್​’ ಕಡೆ ಸುಳಿದಿಲ್ಲ. ಇನ್ನು, ಕಂಗನಾ ರಣಾವತ್​ ಅವರ ರಿಯಲ್​ ಲೈಫ್ ವರ್ತನೆ ಕೆಲವರಿಗೆ ಇಷ್ಟ ಆಗುತ್ತಿಲ್ಲ. ಅದು ಕೂಡ ಅವರ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಿದೆ. ಅದೇ ರೀತಿ, ಮೇ 20ರಂದು ಬಿಡುಗಡೆ ಆಗಿರುವ ಕಾರ್ತಿಕ್​ ಆರ್ಯನ್​ ನಟನೆಯ ‘ಭೂಲ್​ ಭುಲಯ್ಯ 2’ ಚಿತ್ರಕ್ಕೆ ಪೈಪೋಟಿ ನೀಡುವಲ್ಲಿ ‘ಧಾಕಡ್​’ ವಿಫಲವಾಗಿದೆ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ‘ಭೂಲ್​ ಭುಲಯ್ಯ 2’ ಸಿನಿಮಾಗೆ ಆದ್ಯತೆ ನೀಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:01 pm, Mon, 23 May 22

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್