AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಪಂಜಾಬ್​ನಲ್ಲಿ ತೀವ್ರ ವಿರೋಧ

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಮೂಡಿಬಂದಿರುವ ‘ಎಮರ್ಜೆನ್ಸಿ’ ಸಿನಿಮಾ ಇಂದು (ಜನವರಿ 17) ಬಿಡುಗಡೆ ಆಗಿದೆ. ಈ ಚಿತ್ರದ ಸುತ್ತ ಇರುವ ವಿವಾದಗಳು ಒಂದೆರಡಲ್ಲ. ಪಂಜಾಬ್​ನಲ್ಲಿ ‘ಎಮರ್ಜೆನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಪಂಜಾಬ್​ನಲ್ಲಿ ತೀವ್ರ ವಿರೋಧ
Emergency Movie Poster
Follow us
ಮದನ್​ ಕುಮಾರ್​
|

Updated on: Jan 17, 2025 | 3:42 PM

ನಟಿ ಕಂಗನಾ ರಣಾವತ್ ಅವರು ಸಾಕಷ್ಟು ಶ್ರಮವಹಿಸಿ ‘ಎಮರ್ಜೆನ್ಸಿ’ ಸಿನಿಮಾ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಹಲವು ಅಡೆತಡೆಗಳು ಈ ಚಿತ್ರಕ್ಕೆ ಎದುರಾಗಿದ್ದವು. ಬಿಡುಗಡೆ ಸಮಯದಲ್ಲಿ ಕೂಡ ತೊಂದರೆ ಉಂಟಾಯಿತು. ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಈಗ ‘ಎಮರ್ಜೆನ್ಸಿ’ ತೆರೆಕಂಡಿದೆ. ಈ ಸಿನಿಮಾದಲ್ಲಿ ಕಂಗನಾ ರಣಾವತ್ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಮೂಲಕ ಗೆಲುವು ಕಾಣುವ ಹಂಬಲ ಅವರದ್ದು. ಆದರೆ ಕೆಲವು ಕಡೆಗಳಲ್ಲಿ ‘ಎಮರ್ಜೆನ್ಸಿ’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಪಂಜಾಬ್​ನಲ್ಲಿ ಈ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಸಿಖ್ ಸಮುದಾಯದವರು ‘ಎಮರ್ಜೆನ್ಸಿ’ ಸಿನಿಮಾವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ‘ಶಿರೋಮಣಿ ಗುರುದ್ವಾರ ಪ್ರತಿಬಂಧಕ ಸಮಿತಿ’ ಈ ಚಿತ್ರದ ಬಗ್ಗೆ ತಕರಾರು ತೆಗೆದಿದೆ. ಈ ಸಿನಿಮಾದಲ್ಲಿ ಸಿಖ್ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿ ಅಮೃತಸರದಲ್ಲಿ ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ಓದಿ:  ಕಂಗನಾ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯೇ ವಿಲನ್; ಹೇಗಿದೆ ಸಿನಿಮಾ?

‘ಎಮರ್ಜೆನ್ಸಿ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಎದುರು ಪೊಲೀಸರನ್ನು ನಿಯೋಜಿಸಲಾಗಿದೆ. ಟ್ರೇಲರ್​ ಬಿಡುಗಡೆ ಆದಾಗಲೂ ಕೂಡ ಸಿಖ್ ಸಮುದಾಯದವರು ಈ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಿಖ್ಖರಿಗೆ ಸಂಬಂಧಿಸಿದ ಇತಿಹಾಸದ ವಿವರಗಳನ್ನು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ತಿರುಚಲಾಗಿದೆ ಎಂದು ಹಲವರು ಆರೋಪಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂಗನಾ ರಣಾವತ್ ಅವರು ಪ್ರತಿಕ್ರಿಯಿಸಿದ್ದಾರೆ. ‘ಇದು ಕಲೆ ಮತ್ತು ಕಲಾವಿದರ ಮೇಲೆ ಆಗುತ್ತಿರುವ ಕಿರುಕುಳ. ಪಂಜಾಬ್​ನ ಅನೇಕ ನಗರಗಳಲ್ಲಿ ಎಮರ್ಜೆನ್ಸಿ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿ ಮಾಡಲಾಗುತ್ತಿದೆ. ನನಗೆ ಎಲ್ಲ ಧರ್ಮದ ಬಗ್ಗೆ ಗೌರವ ಇದೆ. ಚಂಡೀಗಡದಲ್ಲಿ ಓದಿ, ಬೆಳೆದ ನಾನು ಸಿಖ್ ಧರ್ಮವನ್ನು ಹತ್ತಿರದಿಂದ ನೋಡಿದ್ದೇನೆ, ಅನುಸರಿಸಿದ್ದೇನೆ. ಸಿನಿಮಾದಲ್ಲಿ ಸಿಖ್ ಧರ್ಮಕ್ಕೆ ಅವಮಾನ ಆಗಿದೆ ಎಂಬುದು ಶುದ್ಧ ಸುಳ್ಳು. ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಬೇಕು ಹಾಗೂ ಸಿನಿಮಾಗೆ ಹಾನಿ ಮಾಡಬೇಕು ಎಂಬ ಪ್ರಯತ್ನವಷ್ಟೇ’ ಎಂದು ಕಂಗನಾ ರಣಾವತ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್