Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್ ಈಗ ಬಿಜೆಪಿ ಎಂಪಿ; ಏನಾಗಲಿದೆ ‘ಎಮರ್ಜೆನ್ಸಿ’ ಸಿನಿಮಾದ ಕಥೆ?

‘ಎಮರ್ಜೆನ್ಸಿ’ ಚಿತ್ರ 2023ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್ 14ರಂದು ಈ ಸಿನಿಮಾ ರಿಲೀಸ್ ಆಗಬೇಕಿದೆ. ಆದರೆ, ಈಗ ಸಿನಿಮಾದ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕಂಗನಾ ರಣಾವತ್ ಈಗ ಬಿಜೆಪಿ ಎಂಪಿ; ಏನಾಗಲಿದೆ ‘ಎಮರ್ಜೆನ್ಸಿ’ ಸಿನಿಮಾದ ಕಥೆ?
ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Jun 05, 2024 | 11:10 AM

ನಟಿ ಕಂಗನಾ ರಣಾವತ್ (Kangana Ranaut) ಅವರು ಈಗ ಬಿಜೆಪಿ ಸಂಸದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆ ಗೆದ್ದರೆ ಚಿತ್ರರಂಗ ತೊರೆಯುವುದಾಗಿ ಅವರು ಪ್ರಚಾರದ ವೇಳೆ ಹೇಳಿದ್ದರು. ಈಗ ಅವರು ಗೆದ್ದಾಗಿದೆ. ಈಗ ಅವರು ಚಿತ್ರರಂಗ ತೊರೆಯುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳಬೇಕಿದೆ. ಈ ಮಧ್ಯೆ ಅವರು ನಟಿಸಿ, ನಿರ್ದೇಶಿಸಿದ ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ.

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಎಮರ್ಜೆನ್ಸಿ ಹೇರಿದ್ದರು. ಇದನ್ನು ಆಧಾರವಾಗಿಟ್ಟುಕೊಂಡು ಕಂಗನಾ ಕಥೆ ಬರೆದು ಸಿನಿಮಾ ಮಾಡಿದ್ದಾರೆ. ಈ ಚಿತ್ರ 2023ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್ 14ರಂದು ಈ ಸಿನಿಮಾ ರಿಲೀಸ್ ಆಗಬೇಕಿದೆ. ಆದರೆ, ಈಗ ಸಿನಿಮಾದ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕಂಗನಾ ರಣಾವತ್ ಅವರು ಬಿಜೆಪಿಯ ತತ್ವ ಸಿದ್ಧಾಂತಗಳಿಂದ ಪ್ರಭಾವಿತರಾದವರು. ಅವರು ಕಾಂಗ್ರೆಸ್​ ಕಂಡ ಶ್ರೇಷ್ಠ ನಾಯಕಿಯ ಇಂದಿರಾ ಗಾಂಧಿ ಪಾತ್ರ ಮಾಡುತ್ತಾರೆ ಎಂದಾಗ ಎಲ್ಲರಿಗೂ ಅಚ್ಚರಿ ಆಗಿತ್ತು. ಸಿನಿಮಾ ಘೋಷಿಸುವಾಗ ಅವರು ಇನ್ನೂ ಬಿಜೆಪಿಯನ್ನೂ ಸೇರಿರಲಿಲ್ಲ. ಈಗ ಪರಿಸ್ಥಿತಿ ಹಾಗಿಲ್ಲ. ಅವರು ಬಿಜೆಪಿ ಸಂಸದೆ ಆಗಿದ್ದಾರೆ. ಹೀಗಾಗಿ, ಈ ಸಿನಿಮಾನ ಕಾಂಗ್ರೆಸ್​ನವರು ಯಾವ ರೀತಿ ಸ್ವೀಕರಿಸುತ್ತಾರೆ ಅನ್ನೋದನ್ನು ನೋಡಬೇಕಿದೆ.

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರನ್ನು ಯಾವ ರೀತಿಯಲ್ಲಿ ತೋರಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಒಂದೊಮ್ಮೆ ಇಂದಿರಾ ಗಾಂಧಿಯವರನ್ನು ಕೆಟ್ಟವರು ಎಂದು ತೋರಿಸುವ ಪ್ರಯತ್ನ ನಡೆದಿದ್ದರೆ ಕಾಂಗ್ರೆಸ್​ನವರು ಕಂಗನಾ ವಿರುದ್ಧ ಕಿಡಿಕಾರುತ್ತಾರೆ. ಸಿನಿಮಾ ಮೇಲೆ ನಿಷೇಧ ಹೇರುವಂತೆ ಒತ್ತಾಯ ಎದುರಾಗೋದು ಪಕ್ಕಾ ಎನ್ನಲಾಗಿದೆ.

ಇದನ್ನೂ ಓದಿ: ಮೊದಲ ಪ್ರಯತ್ನದಲ್ಲೇ ಗೆಲುವು, ಕಂಗನಾ ರನೌತ್ ಹೇಳಿದ್ದು ಹೀಗೆ

ಕಂಗನಾ ಅವರು ಕಳೆದ ವರ್ಷ ‘ಎಮರ್ಜೆನ್ಸಿ’ ಸಿನಿಮಾ ಜೂನ್ 14ರಂದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇಷ್ಟು ದಿನ ಅವರು ಚುನಾವಣಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಮುಂದಿನ ಕೆಲ ದಿನ ಸರ್ಕಾರದ ರಚನೆಯ ಕಸರತ್ತು ನಡೆಯಲಿದೆ. ಈ ಎಲ್ಲಾ ಕಾರಣದಿಂದ ಇನ್ನು 9 ದಿನಗಳಲ್ಲಿ ಈ ಸಿನಿಮಾ ರಿಲೀಸ್ ಆಗೋದು ಡೌಟ್ ಎನ್ನಲಾಗಿದೆ. ಹೀಗಾಗಿ, ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗುತ್ತದೆಯೇ ಎನ್ನುವ ಪ್ರಶ್ನೆ ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್