AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ ಸಿನಿಮಾ ಮೇಲೆ ಗಮನ ಹರಿಸಲು ಅವರಿಗೆ ಸಮಯ ಸಿಗುತ್ತಿಲ್ಲ. ಆ ಕಾರಣದಿಂದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗುವುದು ಇನ್ನಷ್ಟು ತಡವಾಗಲಿದೆ. ಈಗಾಗಲೇ ಈ ಚಿತ್ರದ ರಿಲೀಸ್​ ಡೇಟ್​ ಎರಡು ಬಾರಿ ಮುಂದೂಡಿಕೆ ಆಗಿತ್ತು.

ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: May 16, 2024 | 9:48 PM

Share

ನಟಿ ಕಂಗನಾ ರಣಾವತ್​ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮೇಲೆ ನಿರೀಕ್ಷೆ ಇದೆ. ಆದರೆ ಈ ಚಿತ್ರವನ್ನು ಆದಷ್ಟು ಬೇಗ ನೋಡಬೇಕು ಎಂದು ಕಾದಿರುವ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಸುದ್ದಿಯನ್ನು ಚಿತ್ರತಂಡದವರು ಅಧಿಕೃತವಾಗಿ ತಿಳಿಸಿದ್ದಾರೆ. ಕಂಗನಾ ರಣಾವತ್​ (Kangana Ranaut) ಅವರು ಬಿಜೆಪಿ ಸೇರಿ ರಾಜಕೀಯಕ್ಕೆ ಇಳಿದಿದ್ದಾರೆ. ಆ ಕಾರಣದಿಂದ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆ (Emergency Release Date) ದಿನಾಂಕವನ್ನು ಮುಂದೂಡಲಾಗಿದೆ. ಹೊಸ ಡೇಟ್​ ತಿಳಿಯಲು ಕಂಗನಾ ಅಭಿಮಾನಿಗಳು ಕಾಯುತ್ತಿದ್ದಾರೆ.

ಕಂಗನಾ ರಣಾವತ್​ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ಅವರು ಅನೇಕ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದ್ದರಿಂದ ಸಿನಿಮಾ ಕೆಲಸಗಳ ಕಡೆಗೆ ಗಮನ ಕೊಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ತಮ್ಮ ಸಿನಿಮಾದ ರಿಲೀಸ್​ ಡೇಟ್​ ಪೋಸ್ಟ್​ಪೋನ್​ ಮಾಡಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿ ಆಗಿಯೂ ಕಂಗನಾ ರಣಾವತ್​ ಅವರು ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾಗೆ ಕಂಗನಾ ಅವರೇ ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಈ ಸಿನಿಮಾದ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ. ಈ ಸಿನಿಮಾದ ನಿರ್ಮಾಣಕ್ಕಾಗಿ ಆಸ್ತಿ ಮಾರಿದ್ದೇನೆ ಎಂದು ಕೂಡ ಅವರು ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ಕಂಗನಾ ರನೌತ್ ಆಸ್ತಿ ವಿವರ ಬಹಿರಂಗ, ನಟಿಯ ಬಳಿ ಇರುವ ಚಿನ್ನ ಎಷ್ಟು ಕೆಜಿ?

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇತಿಹಾಸದ ಕಹಾನಿ ಇರಲಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಈ ಸಿನಿಮಾ ನಿರ್ಮಾಣ ಆಗಿದೆ. ಭಾರತದ ರಾಜಕೀಯದಲ್ಲಿ ಬಂದು ಹೋದ ಕೆಲವು ಪ್ರಮುಖ ವ್ಯಕ್ತಿಗಳ ಪಾತ್ರಗಳು ಈ ಸಿನಿಮಾದಲ್ಲಿ ಕಾಣಿಸಲಿವೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ರಣಾವತ್​ ಅವರೇ ನಟಿಸಿದ್ದಾರೆ. ಟೀಸರ್​ನಲ್ಲಿ ಆ ಪಾತ್ರದ ಝಲಕ್​ ಕಾಣಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನ್​ 14ರಂದು ಈ ಸಿನಿಮಾ ತೆರೆಕಾಣಬೇಕಿತ್ತು. ಈಗ ಹೊಸ ರಿಲೀಸ್​ ದಿನಾಂಕ ಘೋಷಣೆ ಆಗುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?