AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ.

ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ
ಸಲ್ಮಾನ್-ಕಂಗನಾ
ರಾಜೇಶ್ ದುಗ್ಗುಮನೆ
|

Updated on: Oct 17, 2023 | 7:52 AM

Share

ನಟಿ ಕಂಗನಾ ರಣಾವತ್ ಅವರು ವಿವಾದದ ಮೂಲಕ ಆಗಾಗ ಸುದ್ದಿ ಆಗುತ್ತಾರೆ. ಇದರ ಜೊತೆಗೆ ಸಿನಿಮಾ ವಿಚಾರದಲ್ಲೂ ಅವರ ಹೆಸರು ಚರ್ಚೆಗೆ ಬರುತ್ತದೆ. ಅವರ ನಿರ್ದೇಶನದ ‘ಎಮರ್ಜೆನ್ಸಿ’ ನವೆಂಬರ್ 24ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೊಗಿದೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ಟೈಗರ್ 3’ ರಿಲೀಸ್ ಆಗುತ್ತಿರುವುದರಿಂದಲೇ ಕಂಗನಾ (Kangana Ranaut) ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ. ಈಗ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಿಕೆ ಆದ ಬಗ್ಗೆ ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ.

‘ಗೆಳೆಯರೇ ನಾನು ಒಂದು ಪ್ರಮುಖ ಅನೌನ್ಸ್​ಮೆಂಟ್ ಮಾಡಬೇಕಿದೆ. ಕಲಾವಿದನಾಗಿ ನಾನು ಕಲಿತ ವಿಚಾರ ಮತ್ತು ಗಳಿಸಿದ ಹಣ ಎಮರ್ಜೆನ್ಸಿ ಸಿನಿಮಾ ಮೇಲೆ ಹಾಕಿದ್ದೇನೆ. ಎಮರ್ಜೆನ್ಸಿ ಎನ್ನುವುದು ನನಗೆ ಕೇವಲ ಚಿತ್ರವಲ್ಲ, ಅದು ಓರ್ವ ವ್ಯಕ್ತಿಯಾಗಿ ನನ್ನ ಯೋಗ್ಯತೆ ಮತ್ತು ಪಾತ್ರದ ಪರೀಕ್ಷೆ. ಟೀಸರ್​ಗೆ ಪಡೆದ ಒಳ್ಳೆಯ ಪ್ರತಿಕ್ರಿಯೆ ನಮಗೆಲ್ಲರಿಗೂ ಹೊಸ ಹುರುಪು ನೀಡಿದೆ. ನಾವು ನವೆಂಬರ್ 24ರಂದು ಸಿನಿಮಾ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ, ಕಾರಣಾಂತರಗಳಿಂದ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಲ್ಪಟ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ಸಂದರ್ಭದಲ್ಲೇ ರಿಲೀಸ್ ಆಗುತ್ತಿದೆ. ಈ ಕ್ಲ್ಯಾಶ್ ತಪ್ಪಿಸುವ ಕಾರಣದಿಂದಲೇ ಕಂಗನಾ ಅವರು ‘ಟೈಗರ್ 3’ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಚಂದ್ರಮುಖಿ 2’ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ