ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ.

ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ
ಸಲ್ಮಾನ್-ಕಂಗನಾ
Follow us
|

Updated on: Oct 17, 2023 | 7:52 AM

ನಟಿ ಕಂಗನಾ ರಣಾವತ್ ಅವರು ವಿವಾದದ ಮೂಲಕ ಆಗಾಗ ಸುದ್ದಿ ಆಗುತ್ತಾರೆ. ಇದರ ಜೊತೆಗೆ ಸಿನಿಮಾ ವಿಚಾರದಲ್ಲೂ ಅವರ ಹೆಸರು ಚರ್ಚೆಗೆ ಬರುತ್ತದೆ. ಅವರ ನಿರ್ದೇಶನದ ‘ಎಮರ್ಜೆನ್ಸಿ’ ನವೆಂಬರ್ 24ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೊಗಿದೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ಟೈಗರ್ 3’ ರಿಲೀಸ್ ಆಗುತ್ತಿರುವುದರಿಂದಲೇ ಕಂಗನಾ (Kangana Ranaut) ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ. ಈಗ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಿಕೆ ಆದ ಬಗ್ಗೆ ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ.

‘ಗೆಳೆಯರೇ ನಾನು ಒಂದು ಪ್ರಮುಖ ಅನೌನ್ಸ್​ಮೆಂಟ್ ಮಾಡಬೇಕಿದೆ. ಕಲಾವಿದನಾಗಿ ನಾನು ಕಲಿತ ವಿಚಾರ ಮತ್ತು ಗಳಿಸಿದ ಹಣ ಎಮರ್ಜೆನ್ಸಿ ಸಿನಿಮಾ ಮೇಲೆ ಹಾಕಿದ್ದೇನೆ. ಎಮರ್ಜೆನ್ಸಿ ಎನ್ನುವುದು ನನಗೆ ಕೇವಲ ಚಿತ್ರವಲ್ಲ, ಅದು ಓರ್ವ ವ್ಯಕ್ತಿಯಾಗಿ ನನ್ನ ಯೋಗ್ಯತೆ ಮತ್ತು ಪಾತ್ರದ ಪರೀಕ್ಷೆ. ಟೀಸರ್​ಗೆ ಪಡೆದ ಒಳ್ಳೆಯ ಪ್ರತಿಕ್ರಿಯೆ ನಮಗೆಲ್ಲರಿಗೂ ಹೊಸ ಹುರುಪು ನೀಡಿದೆ. ನಾವು ನವೆಂಬರ್ 24ರಂದು ಸಿನಿಮಾ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ, ಕಾರಣಾಂತರಗಳಿಂದ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಲ್ಪಟ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ಸಂದರ್ಭದಲ್ಲೇ ರಿಲೀಸ್ ಆಗುತ್ತಿದೆ. ಈ ಕ್ಲ್ಯಾಶ್ ತಪ್ಪಿಸುವ ಕಾರಣದಿಂದಲೇ ಕಂಗನಾ ಅವರು ‘ಟೈಗರ್ 3’ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಚಂದ್ರಮುಖಿ 2’ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ