ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ.

ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ
ಸಲ್ಮಾನ್-ಕಂಗನಾ

Updated on: Oct 17, 2023 | 7:52 AM

ನಟಿ ಕಂಗನಾ ರಣಾವತ್ ಅವರು ವಿವಾದದ ಮೂಲಕ ಆಗಾಗ ಸುದ್ದಿ ಆಗುತ್ತಾರೆ. ಇದರ ಜೊತೆಗೆ ಸಿನಿಮಾ ವಿಚಾರದಲ್ಲೂ ಅವರ ಹೆಸರು ಚರ್ಚೆಗೆ ಬರುತ್ತದೆ. ಅವರ ನಿರ್ದೇಶನದ ‘ಎಮರ್ಜೆನ್ಸಿ’ ನವೆಂಬರ್ 24ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೊಗಿದೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ಟೈಗರ್ 3’ ರಿಲೀಸ್ ಆಗುತ್ತಿರುವುದರಿಂದಲೇ ಕಂಗನಾ (Kangana Ranaut) ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಇದೆ. ಈಗ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಿಕೆ ಆದ ಬಗ್ಗೆ ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ.

‘ಗೆಳೆಯರೇ ನಾನು ಒಂದು ಪ್ರಮುಖ ಅನೌನ್ಸ್​ಮೆಂಟ್ ಮಾಡಬೇಕಿದೆ. ಕಲಾವಿದನಾಗಿ ನಾನು ಕಲಿತ ವಿಚಾರ ಮತ್ತು ಗಳಿಸಿದ ಹಣ ಎಮರ್ಜೆನ್ಸಿ ಸಿನಿಮಾ ಮೇಲೆ ಹಾಕಿದ್ದೇನೆ. ಎಮರ್ಜೆನ್ಸಿ ಎನ್ನುವುದು ನನಗೆ ಕೇವಲ ಚಿತ್ರವಲ್ಲ, ಅದು ಓರ್ವ ವ್ಯಕ್ತಿಯಾಗಿ ನನ್ನ ಯೋಗ್ಯತೆ ಮತ್ತು ಪಾತ್ರದ ಪರೀಕ್ಷೆ. ಟೀಸರ್​ಗೆ ಪಡೆದ ಒಳ್ಳೆಯ ಪ್ರತಿಕ್ರಿಯೆ ನಮಗೆಲ್ಲರಿಗೂ ಹೊಸ ಹುರುಪು ನೀಡಿದೆ. ನಾವು ನವೆಂಬರ್ 24ರಂದು ಸಿನಿಮಾ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ, ಕಾರಣಾಂತರಗಳಿಂದ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಲ್ಪಟ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ಸಂದರ್ಭದಲ್ಲೇ ರಿಲೀಸ್ ಆಗುತ್ತಿದೆ. ಈ ಕ್ಲ್ಯಾಶ್ ತಪ್ಪಿಸುವ ಕಾರಣದಿಂದಲೇ ಕಂಗನಾ ಅವರು ‘ಟೈಗರ್ 3’ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಚಂದ್ರಮುಖಿ 2’ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us