AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ?

ಸಿನಿಮಾದಲ್ಲಿ ಆಕ್ಷೇಪಾರ್ಹ ಅಂಶಗಳು ಇವೆ ಎಂಬ ಕಾರಣಕ್ಕೆ ‘ಎಮರ್ಜೆನ್ಸಿ’ ಸಿನಿಮಾಗೆ ಪ್ರಮಾಣ ಪತ್ರ ನೀಡುವಲ್ಲಿ ಸೆನ್ಸಾರ್​ ಮಂಡಳಿ ಸಾಕಷ್ಟು ಎಚ್ಚರಿಕೆ ವಹಿಸಿತ್ತು. ಕಡೆಗೂ ಈ ಸಿನಿಮಾಗೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಕಂಗನಾ ರಣಾವತ್​ ಅಭಿನಯ ಹಾಗೂ ನಿರ್ದೇಶನ ಮಾಡಿರುವ ಈ ಸಿನಿಮಾ ಮೇಲೆ ಫ್ಯಾನ್ಸ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ?
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: Sep 08, 2024 | 9:33 PM

Share

ನಟಿ ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ತುಂಬ ಕಷ್ಟಪಡುತ್ತಿದ್ದಾರೆ. ಈ ಸಿನಿಮಾಗೆ ಅವರೇ ನಿರ್ದೇಶನ ಮಾಡಿದ್ದಾರೆ. ನಿರ್ಮಾಣದಲ್ಲೂ ಪಾಲುದಾರಿಕೆ ಹೊಂದಿದ್ದಾರೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ನಟಿಸಿದ್ದಾರೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಆದ್ದರಿಂದ ಬಿಡುಗಡೆಗೂ ಮುನ್ನವೇ ಕೆಲವು ವಿವಾದಗಳು ಎದುರಾಗಿವೆ. ಹಾಗಾಗಿ ಸಿನಿಮಾಗೆ ಪ್ರಮಾಣ ಪತ್ರ ಸಿಗಲು ತಡವಾಗಿತ್ತು. ವರದಿಗಳ ಪ್ರಕಾರ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್​ ಮಂಡಳಿ ಕಡೆಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಆದರೆ ಸಿನಿಮಾದ ಬಿಡುಗಡೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಪ್ಟೆಂಬರ್​ 6ರಂದು ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಈ ಸಿನಿಮಾದ ಬಗ್ಗೆ ಸಿಖ್​ ಸಮುದಾಯದವರು ಆಕ್ಷೇಪ ಎತ್ತಿದ್ದರಿಂದ ಚಿತ್ರದ ಬಿಡುಗಡೆಗೆ ಕೋರ್ಟ್​ ತಡೆ ನೀಡಿತು. ಅಲ್ಲದೇ, ಸೆನ್ಸಾರ್​ ಮಂಡಳಿ ಸದಸ್ಯರು ಈ ಸಿನಿಮಾದ ಕೆಲವು ದೃಶ್ಯಗಳನ್ನು ಬದಲಾಯಿಸುವಂತೆ ಸೂಚಿಸಿದರು. ಯಾವ ಪ್ರಮಾಣ ಪತ್ರ ನೀಡಬೇಕು ಎಂಬ ಗೊಂದಲ ಕೂಡ ಉಂಟಾಗಿತ್ತು.

ಸಿನಿಮಾದಲ್ಲಿ ತೋರಿಸಿದ ಕೆಲವು ಐತಿಹಾಸಿಕ ವಿಷಯಗಳಿಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಸೆನ್ಸಾರ್​ ಮಂಡಳಿ ಸದಸ್ಯರು ಸೂಚಿಸಿದ್ದರು ಎನ್ನಲಾಗಿದೆ. ಆ ದಾಖಲೆಗಳನ್ನು ನೀಡಿದ ನಂತರವೇ ಸಿನಿಮಾಗೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಇದನ್ನೂ ಓದಿ: ಕಂಗನಾ ಮದುವೆಗೆ ಕೋರ್ಟ್ ಕೇಸ್​ಗಳ ವಿಘ್ನ; ಪೊಲೀಸ್ ಕಂಡು ಓಡಿಹೋದ ಗಂಡಿನ ಕಡೆಯವರು

ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಕೇಂದ್ರವಾಗಿ ಇಟ್ಟುಕೊಂಡು ‘ಎಮರ್ಜೆನ್ಸಿ’ ಸಿನಿಮಾವನ್ನು ಮಾಡಲಾಗಿದೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸಿದ ಕಂಗನಾ ರಣಾವತ್​ ಅವರ ಗೆಟಪ್​ ಗಮನ ಸೆಳೆದಿದೆ. ಸಿನಿಮಾ ಬಿಡುಗಡೆ ಆದ ಬಳಿಕವೂ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಕಂಗನಾ ರಣಾವತ್​ ಮಾತ್ರವಲ್ಲದೇ ಸತೀಶ್​ ಕೌಶಿಕ್​, ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಶ್ರೇಯಸ್​ ತಲ್ಪಡೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಲವು ಕರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ