AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್

ಈಗಾಗಲೇ 4 ಬಾರಿ ನ್ಯಾಷನಲ್​ ಅವಾರ್ಡ್​ ಪಡೆದಿರುವುದು ನಟಿ ಕಂಗನಾ ರಣಾವತ್​ ಅವರ ಹೆಚ್ಚುಗಾರಿಕೆ. ಈಗ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರವನ್ನು ಮಾಡಿದ್ದು, ಈ ಬಾರಿ ಕೂಡ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್​.

‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Aug 14, 2024 | 5:25 PM

Share

ನಟಿ ಕಂಗನಾ ರಣಾವತ್​ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ‘ಎಮರ್ಜೆನ್ಸಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಸೆಪ್ಟೆಂಬರ್​ 6ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದು (ಆಗಸ್ಟ್​ 14) ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರಕ್ಕೆ ಕಂಗನಾ ರಣಾವತ್​ ಬಣ್ಣ ಹಚ್ಚಿದ್ದಾರೆ. ಟ್ರೇಲರ್​ನಲ್ಲಿ ಅವರ ನಟನೆಯನ್ನು ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ಸಿನಿಮಾದಲ್ಲಿನ ನಟನೆಗೆ ಕಂಗನಾ ರಣಾವತ್​ ಅವರಿಗೆ ಖಂಡಿತಾ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ.

ಕಂಗನಾ ರಣಾವತ್​ ಅವರಿಗೆ ಈಗಾಗಲೇ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿವೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಮತ್ತೊಮ್ಮೆ ನ್ಯಾಷನಲ್​ ಅವಾರ್ಡ್​ ಸಿಗಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಕಂಗನಾ ಅವರು ಈ ಸಿನಿಮಾ ಮೇಲೆ ಭಾರಿ ಭರವಸೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಈಗಾಗಲೇ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಯಿತು. ಅಂತಿಮವಾಗಿ ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕಂಗನಾ ಅಭಿಮಾನಿಗಳಿಂದ ಟ್ರೇಲರ್​ಗೆ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ.

ಕಂಗನಾ ರಣಾವತ್​ ಅವರು ಈಗ ಸಂಸದೆಯಾಗಿ ಫುಲ್​ಟೈಮ್​ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಕೂಡ ರಾಜಕೀಯದ ಕಥೆ ಇದೆ. ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ರಾಜಕೀಯದ ಕಾರಣದಿಂದ ಈ ಸಿನಿಮಾ ಒಂದಷ್ಟು ವಿವಾದಗಳನ್ನು ಹುಟ್ಟುಹಾಕುವ ಸಾಧ್ಯತೆ ಕೂಡ ಇದೆ. ಬಿಡುಗಡೆ ಆದ ಬಳಿಕ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್