AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್ ಚಿತ್ರಕ್ಕೆ ಸಂಕಷ್ಟ; ಆರು ಕೋಟಿ ರೂ. ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರ

ಡಿಸ್ಟ್ರಿಬ್ಯೂಷನ್ ಕಂಪನಿ ನಿರ್ಮಾಪಕರಿಗೆ 6 ಕೋಟಿ ರೂಪಾಯಿ ಪೇಮೆಂಟ್ ಮಾಡಿ ಸಿನಿಮಾ ಹಂಚಿಕೆ ಹಕ್ಕು ಪಡೆದಿತ್ತು. ಆದರೆ, ಈ ಚಿತ್ರದಿಂದ ಹಂಚಿಕೆದಾರರಿಗೆ ನಷ್ಟ ಆಗಿದೆ.

ಕಂಗನಾ ರಣಾವತ್ ಚಿತ್ರಕ್ಕೆ ಸಂಕಷ್ಟ; ಆರು ಕೋಟಿ ರೂ. ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರ
ಕಂಗನಾ
ರಾಜೇಶ್ ದುಗ್ಗುಮನೆ
|

Updated on:Mar 22, 2023 | 11:51 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರು ಮಾಡಿದ ಯಾವ ಸಿನಿಮಾಗಳೂ ಕೆಲಸ ಮಾಡುತ್ತಿಲ್ಲ. ಈಗ ಅವರು ತಾವು ದುಡಿದ ಹಣವೆಲ್ಲವನ್ನೂ ‘ಎಮರ್ಜೆನ್ಸಿ’ ಚಿತ್ರದ ಮೇಲೆ ಹೂಡಿಕೆ ಮಾಡಿದ್ದಾರೆ. ಈ ಮಧ್ಯೆ ಅವರ ಸಿನಿಮಾ ಸಂಕಷ್ಟದಲ್ಲಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನದ ಕುರಿತು ಸಿದ್ಧವಾದ ‘ತಲೈವಿ’ (Thalaivi Movie) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರದ ಹಂಚಿಕೆದಾರರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 6 ಕೋಟಿ ರೂಪಾಯಿ ನೀಡುವಂತೆ ಅವರು ಕೋರಿದ್ದಾರೆ.

ಜಯಲಲಿತಾ ನಟಿಯಾಗಿ, ರಾಜಕಾರಣಿಯಾಗಿ ಯಶಸ್ಸು ಕಂಡವರು. ಅವರ ಜೀವನದಲ್ಲಿ ಸಾಕಷ್ಟು ಏಳಬೀಳುಗಳು ಇದ್ದವು. ಇದನ್ನು ಸಿನಿಮಾ ಮಾಡಲಾಯಿತು. 2021ರ ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ರಿಲೀಸ್ ಆಯಿತು. ಈ ಸಿನಿಮಾ ಸೋಲು ಕಂಡಿತು. ಬಾಕ್ಸ್ ಆಫೀಸ್​ನಲ್ಲಿ ಚಿತ್ರ ಸದ್ದು ಮಾಡಿಲ್ಲ. ಈ ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಈ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ‘ತಲೈವಿ’ ಹಂಚಿಕೆದಾರರು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿ ಆಗಿದೆ.

ಡಿಸ್ಟ್ರಿಬ್ಯೂಷನ್ ಕಂಪನಿ ‘ತಲೈವಿ’ ನಿರ್ಮಾಪಕರಿಗೆ 6 ಕೋಟಿ ರೂಪಾಯಿ ಪೇಮೆಂಟ್ ಮಾಡಿ ಹಂಚಿಕೆ ಹಕ್ಕು ಪಡೆದಿತ್ತು. ಆದರೆ, ಈ ಚಿತ್ರದಿಂದ ಹಂಚಿಕೆದಾರರಿಗೆ ನಷ್ಟ ಆಗಿದೆ. ಹಣ ಹಿಂದಿರುಗಿಸುವಂತೆ ನಿರ್ಮಾಣ ಸಂಸ್ಥೆಗೆ ಡಿಸ್ಟ್ರಿಬ್ಯೂಷನ್ ಕಂಪನಿ ಇ-ಮೇಲ್ ಕಳುಹಿಸಿದೆ ಎನ್ನಲಾಗಿದೆ. ಆದರೆ, ಅವರಿಗೆ ನಿರ್ಮಾಣ ಸಂಸ್ಥೆಯಿಂದ ಅವರಿಗೆ ಯಾವುದೇ ಉತ್ತರ ಬಂದಿಲ್ಲ. ಸದ್ಯ ಈ ವಿಚಾರದಲ್ಲಿ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಹಂಚಿಕೆದಾರರು ‘ತಲೈವಿ’ ನಿರ್ಮಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kangana Ranaut: ಸತತ ಸೋಲಿನ ಬಳಿಕ ಬೇರೆ ಬಿಸ್ನೆಸ್​ ಮಾಡಲು ನಿರ್ಧರಿಸಿದ್ದ ಕಂಗನಾ; ಅದಕ್ಕೂ ಸಾಕಾಗಲಿಲ್ಲ ಹಣ

ಕಂಗನಾ ನಟನೆಯ ‘ಧಾಕಡ್​’ ಸಿನಿಮಾ ಕೂಡ ಸೋಲು ಕಂಡಿತು. 80 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ 2.58 ಕೋಟಿ ರೂಪಾಯಿ ಅಷ್ಟೇ ಕಲೆಕ್ಷನ್ ಮಾಡಿತು. ಈ ಚಿತ್ರದಿಂದ ದೊಡ್ಡ ಮೊತ್ತದ ನಷ್ಟ ಉಂಟಾಗಿತ್ತು. ಈ ಚಿತ್ರದಿಂದ ನಿರ್ಮಾಪಕರಿಗೆ ಸುಮಾರು 78 ಕೋಟಿ ರೂಪಾಯಿ ಲಾಸ್ ಆಗಿದೆ ಎನ್ನಲಾಗಿದೆ.

‘ಎಮರ್ಜೆನ್ಸಿ’ ಚಿತ್ರದ ಮೇಲೆ ಕಂಗನಾ ರಣಾವತ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಘಟಾನುಘಟಿಗಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:51 am, Wed, 22 March 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ